ಲಾಸ್‌ ವೆಗಾಸ್‌ನ ವಿಲಾಸಿ ಬದುಕಿನ ಕಥೆ


Team Udayavani, Apr 28, 2020, 5:08 PM IST

ಲಾಸ್‌ ವೆಗಾಸ್‌ನ ವಿಲಾಸಿ ಬದುಕಿನ ಕಥೆ

ಲಾಸ್‌ವೆಗಾಸ್‌: ಅಮೆರಿಕದ ಉದ್ಯೋಗ ಮಾರುಕಟ್ಟೆ ಜಡವಾಗಿದೆ. ಕೋವಿಡ್‌-19ನಿಂದಾಗಿ ನಿರುದ್ಯೋಗ ಪ್ರಮಾಣ ಹಿಂದೆಂದಿಗಿಂತಲೂ ಹೆಚ್ಚಲಿದೆ ಎಂಬುದಕ್ಕೆ ಹಲವಾರು ನಿದರ್ಶನಗಳು ಕಣ್ಣ ಮುಂದಿವೆ. ಆರ್ಥಿಕ ತಜ್ಞರು ಹೇಳುವಂತೆ, ನಿರುದ್ಯೋಗಸ್ಥರ ಪ್ರಮಾಣ 6.6 ಮಿಲಿಯನ್‌ ಗಡಿ ದಾಟಿದ್ದು, ದಿನ ಕಳೆದಂತೆ ಸಂಖ್ಯೆ ಏರುತ್ತಲೇ ಇದೆ.
ಇಲ್ಲಿನ ಪ್ರಮುಖ ನಗರ ಲಾಸ್‌ ವೆಗಾಸ್‌ನ ಕಥೆ ಕೇಳಿ. ಆರ್ಥಿಕವಾಗಿ ಎಷ್ಟು ಕುಗ್ಗಿದೆಯೆಂದರೆ ಇಲ್ಲಿನ ನಿವಾಸಿಗಳ ಬದುಕೇ ಅತಂತ್ರವಾಗಿದೆ. ಈ ಕುರಿತಾಗಿ ವಾಷಿಂಗ್‌ಟನ್‌ ಪೋಸ್ಟ್‌ ವರದಿ ಮಾಡಿದೆ.

ಪ್ರವಾಸೋದ್ಯಮವೇ ಗತಿ
ಲಾಸ್‌ ವೇಗಾಸ್‌ನಂತ‌ ಕೆಲವು ಪ್ರಮುಖ ನಗರಗಳಿಗೆ ಈಗ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. ಪ್ರವಾಸೋದ್ಯಮವನ್ನು ನಂಬಿಕೊಂಡ ನಗರಗಳಿಗಂತೂ ಬಹಳ ಸಮಸ್ಯೆ. ಲಾಸ್‌ ವೆಗಾಸ್‌ ಸಹ ಪ್ರವಾಸೋದ್ಯಮವನ್ನು ಆಶ್ರಯಿಸಿದ್ದ ನಗರ. ಇಲ್ಲಿನ ಸ್ಥಳೀಯ ಆರ್ಥಿಕತೆಯ ಮೂರನೇ ಒಂದು ಭಾಗದಷ್ಟು ಜನರು ಹೊಟೇಲ್‌, ರೆಸ್ಟೋರೆಂಟ್‌ ಮತ್ತಿತ್ತರ ಆತಿಥ್ಯ ಉದ್ಯಮಗಳಿಂದ ಆದಾಯ ಗಳಿಸುತ್ತಿದ್ದರು. ಆದರೆ ಪ್ರಸ್ತುತ ಲಾಕ್‌ಡೌನ್‌ ಜಾರಿಯಲ್ಲಿರುವುದರಿಂದ ವ್ಯಾಪಾರ ವಹಿವಾಟುಗಳು ಸಂಪೂರ್ಣ ಸ್ಥಗಿತಗೊಂಡಿವೆ.

ಐದು 5 ವಾರಗಳಿಂದ ಆದಾಯವಿಲ್ಲ
ಇಲ್ಲಿನ ಪ್ರತಿಯೊರ್ವ ರೆಸ್ಟೋರೆಂಟ್‌/ಹೊಟೇಲ್‌ಗ‌ಳ ಮಾಲಕರಿಂದ ಹಿಡಿದು ಅಲ್ಲಿ ಕೆಲಸ ಮಾಡುವ ಸಿಬಂದಿವರೆಗೂ ಐದು ವಾರಗಳಿಂದ ಚಿಕ್ಕಾಸೂ ಆದಾಯವಿಲ್ಲ. ಮನೆಯಲ್ಲಿರುವ ಹಿರಿಯರಿಗೆ ಅಗತ್ಯ ಔಷಧಿಗಳನ್ನು ಒದಗಿಸಲಾಗದೇ ಪರದಾಡುತ್ತಿದ್ದಾರೆ. ರೆಸ್ಟೋರೆಂಟ್‌/ಹೊಟೇಲ್‌ಗ‌ಳ ಮಾಲಕರದ್ದು ತ್ರಿಕುಂಶು ಪರಿಸ್ಥಿತಿ. ಕೈಯಲ್ಲಿ ಬಿಡಿಗಾಸಿಲ್ಲದೇ ಕುಟುಂಬ ನಿರ್ವಹಣೆ ಹೇಗೆ ಎಂಬ ಯಕ್ಷಪ್ರಶ್ನೆ ಮೂಡಿದ್ದು, ಕೆಲಸಗಾರರ ಪರಿಸ್ಥಿತಿ ನೋಡಿಯೂ ಸಂಬಳ ಒದಗಿಸಲಾಗದೇ ಒದ್ದಾಡುವಂತಾಗಿದೆ.

ನಿರುದ್ಯೋಗ ದರ
ಬಿಕ್ಕಟ್ಟು ಪ್ರಾರಂಭವಾದಾಗಿನಿಂದ ಈ ನಗರದ ಸುಮಾರು 3.50 ಲಕ್ಷದಷ್ಟು ಜನರು ನಿರುದ್ಯೋಗ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಇಲ್ಲಿಯ ಆರ್ಥಿಕ ಸಂಶೋಧನಾ ಸಂಸ್ಥೆ ನಡೆಸಿರುವ ಅಧ್ಯಯನ ಪ್ರಕಾರ ನಗರದ ಪ್ರಸ್ತುತ ನಿರುದ್ಯೋಗ ದರ ಶೇ.25ರಷ್ಟಿದೆ. ಮಹಾ ಆರ್ಥಿಕ ಹಿಂಜರಿತದ ಅವಧಿಯಲ್ಲಿದ್ದ ಪ್ರಮಾಣಕ್ಕಿಂತ ಎರಡರಷ್ಟು. ಆ ಮೂಲಕ ಇತಿಹಾಸದಲ್ಲೇ ಆರ್ಥಿಕವಾಗಿ ಮಹಾ ಬಿಕ್ಕಟ್ಟಿಗೆ ಗುರಿಯಾಗಿದ್ದು, ಮುಂಬರುವ ದಿನಗಳಲ್ಲಿ ನಿರುದ್ಯೋಗ ಸಮಸ್ಯೆ ಮತ್ತಷ್ಟು ಹೆಚ್ಚಲಿದೆ ಎಂದು ಎಚ್ಚರಿಸಿದೆ.

ಜೀವನದ ಅತ್ಯಂತ ಕಷ್ಟಕರದ ಘಟ್ಟ
ನಮ್ಮದು ಚಿಕ್ಕ ಸಂಸಾರ. ಜೀವನದುದ್ದಕ್ಕೂ ಸಂತೋಷವನ್ನೇ ನೋಡಿಕೊಂಡು ಬಂದಿದ್ದ ನಮಗೆ ಸದ್ಯದ ಪರಿಸ್ಥಿತಿ ಅತ್ಯಂತ ಕಷ್ಟಕರದ ಘಟ್ಟ ಎಂದೆನಿಸಿದೆ. ಏನು ಮಾಡಬೇಕೆಂದೇ ತೋಚುತ್ತಿಲ್ಲ ಎನ್ನುತ್ತಾರೆ ನಗರದಲ್ಲಿ ರೆಸ್ಟೋರೇಂಟ್‌ ನಡೆಸುತ್ತಿದ್ದ ಮಾಲಕರೊಬ್ಬರು.

ನನ್ನ ಜೀವಮಾನದಲ್ಲಿಯೂ ಒಮ್ಮೆಯೂ ನನ್ನ ಕರ್ತವ್ಯದಿಂದ ಯಾವತ್ತು ಹಿಂದೆ ಸರಿದಿರಲಿಲ್ಲ. ಆದರೆ ಪ್ರಸ್ತುತ ಪರಿಸ್ಥಿತಿಯ ಕೈಗೊಂಬೆಯಾಗಿದ್ದೇನೆ. ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ನನ್ನ ಮಗಳಿಗೆ ಅಗತ್ಯ ಔಷಧಿಗಳನ್ನೂ ಒದಗಿಸಲಾರಷ್ಟು ಅಸಹಾಯಕನಾಗಿದ್ದಾನೆ. ನನ್ನ ಮಾಲಕತ್ವದಲ್ಲಿ ದುಡಿಯುತ್ತಿದ್ದ ಕಾರ್ಮಿಕರ ದುಸ್ಥಿತಿಯನ್ನು ನೋಡಿಯೂ ಕೈಚೆಲ್ಲಿ ಕುಳಿತುಕೊಳ್ಳುವಂತಾಗಿದೆ. ಮೊದಲ ಬಾರಿಗೆ ಮನೆ ಬಾಡಿಗೆ ಕಟ್ಟಲು ಇತರರ ಎದುರು ಕೈ ಚಾಚುವ ಪರಿಸ್ಥಿತಿ ಎದುರಾಗಿದೆ ಎಂದು ಕೋವಿಡ್‌ -19ನಿಂದ ತಮಗೆ ಎದುರಾದ ಸಂಕಷ್ಟಗಳನ್ನು ಮಾಧ್ಯಮದ ಮುಂದೆ ತೋಡಿಕೊಂಡಿದ್ದಾರೆ ಮತ್ತೂಂದು ದಂಪತಿ.

ಲಾಸ್‌ ವೆಗಾಸ್‌ ಅಮೆರಿಕದ 28 ನೇ ಅತಿ ಹೆಚ್ಚು ಜನಸಂಖ್ಯೆ ಇರುವ ನಗರ. ನೆವಡಾ ರಾಜ್ಯದಲ್ಲಿ ಬರುವ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಪ್ರಸಿದ್ಧ ನಗರ. ಇದು ವಿಲಾಸಿ ಜೀವನಕ್ಕೂ ಹೇಳಿ ಮಾಡಿಸಿದ ನಗರವೆಂದೇ ಖ್ಯಾತಿ ಗಳಿಸಿದೆ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.