ಕಾನೂನು ಉಲ್ಲಂಘನೆ ಚಳವಳಿ ಎಚ್ಚರಿಕೆ


Team Udayavani, Sep 25, 2019, 3:10 AM IST

kanoonu

ಬೆಳಗಾವಿ: “ರಾಜ್ಯದಲ್ಲಿ ಭೀಕರ ನೆರೆಯಿಂದ ಅಪಾರ ನಷ್ಟವಾಗಿ ಲಕ್ಷಾಂತರ ಕುಟುಂಬಗಳು ಬೀದಿಗೆ ಬಿದ್ದರೂ ಕೇಂದ್ರ ಹಾಗೂ ರಾಜ್ಯ ಸರಕಾರಗಳು ನೆರವಿಗೆ ಧಾವಿಸಿಲ್ಲ. ಇದರ ವಿರುದ್ಧ ನಮ್ಮ ಹೋರಾಟ ಆರಂಭವಾಗಿದೆ. ಇದಕ್ಕೂ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಕಾನೂನು ಉಲ್ಲಂಘನೆ ಚಳವಳಿ ಮಾಡಬೇಕಾಗುತ್ತದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ನೆರೆ ಸಂತ್ರಸ್ತರ ಸಮಸ್ಯೆ ಆಲಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಂಪೂರ್ಣ ನಿರ್ಲಕ್ಷ ಖಂಡಿಸಿ ನಗರದಲ್ಲಿ ಮಂಗಳವಾರ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಬೃಹತ್‌ ಪ್ರತಿಭಟನಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಬಾಗಲಕೋಟೆ, ವಿಜಯಪುರ, ರಾಯಚೂರು, ಬೆಂಗಳೂರು, ಕಲಬುರಗಿ, ಕೊಡಗು ಮೊದಲಾದ ಜಿಲ್ಲೆಗಳಲ್ಲಿ ಚಳವಳಿ ನಡೆಸಲಾಗುವುದು. ಅಗತ್ಯಬಿದ್ದರೆ ದೆಹಲಿಯಲ್ಲೂ ಹೋರಾಟ ಮಾಡುತ್ತೇವೆ ಎಂದರು.

ಈ ಹೋರಾಟ ಈಗ ಆರಂಭ ಮಾತ್ರ. ಸರಕಾರ ಈಗಲೇ ಎಚ್ಚೆತ್ತುಕೊಂಡರೆ ಒಳ್ಳೆಯದು. ಇಲ್ಲದಿದ್ದರೆ ರಾಜ್ಯದ ಜನರು ನಿಮಗೆ ಪಾಠ ಕಲಿಸುತ್ತಾರೆ. ಕಾಟಾಚಾರದ ಸಮೀಕ್ಷೆ ಮಾಡುವುದು, ಕಣ್ಣೀರು ಹಾಕುವುದು ಹಾಗೂ ಅನುಕಂಪ ತೋರಿಸುವುದನ್ನು ಬಿಟ್ಟು ತಕ್ಷಣ ಸಂತ್ರಸ್ತರ ನೆರವಿಗೆ ಧಾವಿಸಬೇಕು. ಪರಿಹಾರ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ತಮ್ಮ ಭಾಷಣದುದ್ದಕ್ಕೂ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ವಾಗ್ಧಾಳಿ ನಡೆಸಿದ ಸಿದ್ದರಾಮಯ್ಯ, ನೆರೆ ಹಾವಳಿಯಿಂದ 22 ಜಿಲ್ಲೆಗಳ ಜನರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಮನೆ-ಮಠ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸಬೇಕಾದ ಪ್ರಧಾನಿ ಮೋದಿ ಇಲ್ಲಿಯ ಜನರನ್ನು ಮರೆತು ಅಮೆರಿಕದಲ್ಲಿ ಡೋನಾಲ್ಡ್‌ ಟ್ರಂಪ್‌ ಪರ ಚುನಾವಣಾ ಪ್ರಚಾರಕ್ಕೆ ಹೋಗಿದ್ದಾರೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಮತ್ತೂಂದಿಲ್ಲ ಎಂದು ಹೇಳಿದರು.

ಎಮ್ಮೆ ಚರ್ಮವೇ?: ಪ್ರವಾಹ ಪೀಡಿತ ಪ್ರದೇಶಗಳ ಜನರ ನೋವಿಗೆ ಮೊಸಳೆೆ ಕಣ್ಣೀರು ಹಾಕುವ ಪ್ರಧಾನಿ ಮೋದಿ ನ್ಯೂಯಾರ್ಕ್‌ನಲ್ಲಿ “ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌’ ಎನ್ನುತ್ತಾರೆ. ಕರ್ನಾಟಕದಲ್ಲಿ ಸುಮಾರು 20 ಲಕ್ಷ ಎಕರೆ ಪ್ರದೇಶದ ಬೆಳೆ ಹಾನಿಯಾಗಿದೆ. 88 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಷ್ಟೆಲ್ಲ ಅನಾಹುತಗಳು ಆಗಿದ್ದರೂ ರಾಜ್ಯದಲ್ಲಿ ಎಲ್ಲವೂ ಸರಿಯಿದೆ. ಏನೂ ಆಗಿಲ್ಲ ಎನ್ನುವಂತೆ ಸುಮ್ಮನಿದ್ದಾರೆ. ನಿಮ್ಮದು ದಪ್ಪ ಚರ್ಮವೇ ಅಥವಾ ಎಮ್ಮೆ ಚರ್ಮವೇ ಎಂದು ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಹರಿಹಾಯ್ದರು.

ಮನುಷ್ಯತ್ವ ಇಲ್ಲ: ಕೇಂದ್ರದ ಗೃಹ ಸಚಿವ ಅಮಿತ್‌ ಶಾ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ರಾಜ್ಯಕ್ಕೆ ಬಂದು ಕಾಟಾಚಾರಕ್ಕೆ ವೈಮಾನಿಕ ಸಮೀಕ್ಷೆ ಮಾಡಿ ಹೋದರು. ಇಷ್ಟಾದರೂ ಇದುವರೆಗೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ಇವರಿಗೆ ಮನುಷ್ಯತ್ವ, ಮಾನ ಮರ್ಯಾದೆ ಇದೆಯೇ? ಬಡವರ ಕಷ್ಟಕ್ಕೆ ಸ್ಪಂದಿಸಲು ಆಗದಿದ್ದರೆ ಅಧಿಕಾರದಲ್ಲಿ ಏಕೆ ಇರಬೇಕು ಎಂದು ಖಾರವಾಗಿ ಪ್ರಶ್ನಿಸಿದರು.

ಇದಕ್ಕೂ ಮುನ್ನ ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಿಂದ ಚನ್ನಮ್ಮ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಕಾಂಗ್ರೆಸ್‌ ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಅನಂತರ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ ಅವರ ಅನುಪಸ್ಥಿತಿ ಎದ್ದುಕಂಡಿತು.

ಬೆಳಗಾವಿಯಲ್ಲಿ ಅಧಿವೇಶನ: ಸಿಎಂಗೆ ಧೈರ್ಯವಿಲ್ಲ
ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನ ಸೌಧ ದಲ್ಲಿ ಅಧಿವೇಶನ ನಡೆಸುವ ಧೈರ್ಯ ಮುಖ್ಯ ಮಂತ್ರಿ ಯಡಿಯೂರಪ್ಪಗೆ ಇಲ್ಲ. ಅಧಿವೇಶನ ಕರೆದರೆ ಜನ ಎಲ್ಲಿ ಮುತ್ತಿಗೆ ಹಾಕುತ್ತಾರೆ ಎಂಬ ಭಯದಲ್ಲಿ ಇಲ್ಲಿ ಅಧಿವೇಶನ ನಡೆಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ನೆರೆಯಿಂದ ಜನರು ತತ್ತರಿಸಿ ಹೋಗಿದ್ದಾರೆ.

ಇಂತಹ ಸ್ಥಿತಿಯಲ್ಲಿ ಪ್ರಧಾನಿ ಬಳಿ ಹೋಗಿ ಪರಿಹಾರ ಕೇಳಲು ಯಡಿಯೂರಪ್ಪ ಅವರಿಗೆ ಆಗುತ್ತಿಲ್ಲ. ಹೆದರಿ ಅವರ ಬಳಿ ಬಾಯಿ ಬಿಡುತ್ತಿಲ್ಲ ಎಂದು ಟೀಕಿಸಿದರು. ಯಡಿಯೂರಪ್ಪ ಅವರಿಗೆ ಜನರ ಕಷ್ಟಕ್ಕಿಂತ ಅನರ್ಹ ಶಾಸಕರ ಚಿಂತೆ ಬಹಳ ಕಾಡುತ್ತಿದೆ. ಸರಕಾರ ಏನಾಗುತ್ತದೆ ಎಂಬ ಭಯದಲ್ಲಿ ಅವರು ಪದೇಪದೆ ದೆಹಲಿಗೆ ಓಡುತ್ತಿದ್ದಾರೆ ವಿನಃ ಕೇಂದ್ರದಿಂದ ನೆರೆ ಪರಿಹಾರ ಕೇಳುವ ಧೈರ್ಯ ಮಾಡುತ್ತಿಲ್ಲ ಎಂದು ಲೇವಡಿ ಮಾಡಿದರು.

ಇನ್ನೆರಡು ದಿನದಲ್ಲಿ ಕೈ ಅಭ್ಯರ್ಥಿ ಪಟ್ಟಿ ಬಿಡುಗಡೆ
ಹುಬ್ಬಳ್ಳಿ: ಇನ್ನೆರಡು ದಿನದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇವೆ. ಆ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 15 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಪಕ್ಷಕ್ಕೆ ದ್ರೋಹ ಬಗೆದವರಿಗೆ ತಕ್ಕಪಾಠ ಕಲಿಸಲಾಗುವುದು ಎಂದು ಹೇಳಿದರು.

ರಾಜ್ಯದಿಂದ 25 ಜನ ಬಿಜೆಪಿ ಸಂಸದರಿದ್ದಾರೆ. ಪ್ರಭಾವಿ ಸಚಿವರೂ ಇದ್ದಾರೆ. ಆದರೆ ಯಾರಿಂದಲೂ ಕೇಂದ್ರದಿಂದ ಸಹಾಯ ಕೊಡಿಸಲು ಸಾಧ್ಯವಾಗುತ್ತಿಲ್ಲ. ಉತ್ತರ ಕರ್ನಾಟಕದಲ್ಲಿ ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ. ಇಲ್ಲಿ ಪ್ರಹ್ಲಾದ ಜೋಶಿ ಹಾಗೂ ಸುರೇಶ ಅಂಗಡಿ ಸಚಿವರಾಗಿದ್ದಾರೆ. ಹೀಗಿದ್ದರೂ ಬಾಯಿಗೆ ಬೀಗ ಹಾಕಿಕೊಂಡು ಕುಳಿತಿದ್ದಾರೆ. ಇಬ್ಬರಿಗೂ ನಾಚಿಕೆ ಇಲ್ಲ.
-ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಅಧ್ಯಕ್ಷ

ಪ್ರಧಾನಿ ನರೇಂದ್ರ ಮೋದಿ ಅವರು ಚಂದ್ರಯಾನ ನೋಡಲು ಬೆಂಗಳೂರಿಗೆ ಬರುತ್ತಾರೆ. ಆದರೆ ನೆರೆ ಸಂತ್ರಸ್ತರ ಕಷ್ಟ ಕೇಳಲು ಬರುವುದಿಲ್ಲ. ನೆರೆ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಲಿಲ್ಲ. ರಷ್ಯಾ ಪ್ರಧಾನಿಗೆ ಸಾಲ ನೀಡುವ ಮೋದಿ ಅವರಿಗೆ ಕರ್ನಾಟಕದ ಸಂತ್ರಸ್ತರಿಗೆ ಪರಿಹಾರ ಕೊಡಲು ಏಕೆ ಆಗುತ್ತಿಲ್ಲ?
-ಈಶ್ವರ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.