ಅರ್ಜಿ ಸಲ್ಲಿಸಿದ ತಕ್ಷಣ ವಿದ್ಯುತ್‌ ನೀಡಲು ಕಾನೂನು; ಮುಖ್ಯಮಂತ್ರಿ ಬೊಮ್ಮಾಯಿ

ರೈತರಿಗೆ ಹಾಗೂ ಕಾಫಿ ಬೆಳೆಗಾರರಿಗೂ 10 ಎಚ್‌.ಪಿವರೆಗೂ ಉಚಿತ ವಿದ್ಯುತ್‌ ಕೊಡಲಾಗುತ್ತಿದೆ

Team Udayavani, Jul 21, 2022, 12:50 PM IST

ಅರ್ಜಿ ಸಲ್ಲಿಸಿದ ತಕ್ಷಣ ವಿದ್ಯುತ್‌ ನೀಡಲು ಕಾನೂನು; ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಈ ಹಿಂದೆ ವಿದ್ಯುತ್‌ ಸಂಪರ್ಕಕ್ಕಾಗಿ ವಿವಿಧ ದಾಖಲೆ ಕೊಡಬೇಕಿತ್ತು. ಮುಂದೆ ವಿದ್ಯುತ್‌ ಸಂಪರ್ಕ ಸುಲಲಿತವಾಗಿ ಸಿಗುವಂತೆ ಹೊಸ ಕಾನೂನು ಜಾರಿಗೊಳಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಿಲ್ಲರ್‌ ರಸ್ತೆಯ ಅಂಬೇಡ್ಕರ್‌ ಭವನದಲ್ಲಿ ಬುಧವಾರ ಆಯೋಜಿಸಲಾದ ಕರ್ನಾಟಕ ವಿದ್ಯುತ್‌ ನಿಗಮ ನಿಯಮಿತದ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾರೂ ವಿದ್ಯುತ್‌ ಸಂಪರ್ಕದಿಂದ ವಂಚಿತರಾಗ ಬಾರದು ಎಂಬ ಉದ್ದೇಶದಿಂದಾಗಿ ಯಾವುದೇ ಪ್ರದೇಶದಲ್ಲಿ ಮನೆ ಹೊಂದಿದ್ದರೂ, ವಿದ್ಯುತ್‌ಗಾಗಿ ಅರ್ಜಿ ಸಲ್ಲಿಸಿದ ತಕ್ಷಣ ಸಂಪರ್ಕ ನೀಡುವ ಕಾನೂನು ರೂಪಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.

ಪವರ್‌ ಸ್ಟೋರೇಜ್‌ ಯೋಜನೆ: ಪವರ್‌ ಸ್ಟೋರೇಜ್‌ ಯೋಜನೆಯನ್ನು ಈಗಾಗಲೇ ಶರಾವತಿಯಲ್ಲಿ ಆರಂಭಿಸಲು ಅನುಮತಿ ಕೊಟ್ಟಿದ್ದು, ಖಾಸಗಿಯವರಿಗೂ ಸಹ ಈ ವ್ಯವಸ್ಥೆಗಾಗಿ ಯೋಜನೆ ರೂಪಿಸಲು ಹೊಸ ನೀತಿ ತರಲಾಗುವುದು. ಇದರಿಂದ ವಿದ್ಯುತ್‌ ಸಂಗ್ರಹಿಸಲು ಸಹಕಾರಿಯಾಗುತ್ತದೆ. ಗ್ಲೋಬಲ್‌ ಎನರ್ಜಿ ವಿಭಾಗದಲ್ಲಿ ಹೊಸತಾದ ತಂತ್ರಜ್ಞಾನಗಳನ್ನು ರಾಜ್ಯದಲ್ಲೇ ಮೊದಲು ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

ಪ್ರಸ್ತುತ ನಾವು 30 ಸಾವಿರ ಮೆಗಾವ್ಯಾಟ್‌ ಉತ್ಪಾದಿಸುತ್ತಿದ್ದು, ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಮೊದಲ ಸ್ಥಾನದಲ್ಲಿದ್ದೇವೆ. ಹೀಗಾಗಿ, ವಿದ್ಯುತ್‌ ವಲಯದಲ್ಲಿ ಸ್ವಾವಲಂಬಿಯಾಗಿದ್ದೇವೆ ಎಂದು ಹೇಳಿದರು.

75 ಯೂನಿಟ್ಸ್‌ ಉಚಿತ: ಬಿಪಿಎಲ್‌ ಕಾರ್ಡ್‌ ಹೊಂದಿರುವ ಎಸ್‌ಸಿ, ಎಸ್‌ಟಿ ಜನಾಂಗದವರಿಗೆ ಶೇ.75 ಯೂನಿಟ್ಸ್‌ ಉಚಿತ ವಿದ್ಯುತ್‌ ಕೊಡಲು ಸರ್ಕಾರ ತೀರ್ಮಾನಿಸಿ ಆದೇಶಿಸಿದ್ದು ಬರುವ ತಿಂಗಳಿನಿಂದ ಜಾರಿಗೆ ಬರಲಿದೆ. ಜತೆಗೆ ರೈತರಿಗೆ ಹಾಗೂ ಕಾಫಿ ಬೆಳೆಗಾರರಿಗೂ 10 ಎಚ್‌.ಪಿವರೆಗೂ ಉಚಿತ ವಿದ್ಯುತ್‌ ಕೊಡಲಾಗುತ್ತಿದೆ. ಈ ಎಲ್ಲ ಕಾರಣಗಳಿಂದ ಪ್ರತಿ ವರ್ಷ 14 ಸಾವಿರ ಕೋಟಿ ಸಬ್ಸಿಡಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಇಂಧನ ಸಚಿವ ವಿ.ಸುನಿಲ್‌ಕುಮಾರ್‌ ಮಾತನಾಡಿ, ವಿದ್ಯುತ್‌ಗೆ ಬೇಡಿಕೆಯೂ ಬಹಳ ದೊಡ್ಡ ಪ್ರಮಾಣದಲ್ಲಿದೆ. ಬೇಡಿಕೆಗೆ ತಕ್ಕಂತೆ ನಿಗಮದ ಕಡೆಯಿಂದ ಉತ್ಪಾದನೆ ಹೆಚ್ಚಿಸುತ್ತಿದ್ದೇವೆ. ಹಸಿರು ಇಂಧನ ಇನ್ನಷ್ಟು ಉತ್ಪಾದಿಸಬೇಕೆಂಬ ಕಾರಣಕ್ಕೆ ಹೈಬ್ರೆಡ್‌ ಪಾರ್ಕ್‌ ನಿರ್ಮಿಸಲು ಕಲ್ಪನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊಟ್ಟಿದ್ದಾರೆ. ಶರಾವತಿಯಲ್ಲಿ ವಿದ್ಯುತ್‌ ಸಂಗ್ರಹಿಸುವ ಸ್ಟೋರೇಜ್‌ ನಿರ್ಣಯವನ್ನು ತೆಗೆದುಕೊಂಡಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್‌ ನಾಯಕ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್‌ ಸೇರಿದಂತೆ ಮತ್ತಿತರರು ಉಪ ಸ್ಥಿತರಿದ್ದರು.

ಪವರ್‌ ಪಾಲಿಟಿಕ್ಸ್‌ ಮತ್ತು ಪೀಪಲ್‌ ಪಾಲಿಟಿಕ್ಸ್‌
ಪವರ್‌ ಪಾಲಿಟಿಕ್ಸ್‌ ಮತ್ತು ಪೀಪಲ್‌ ಪಾಲಿಟಿಕ್ಸ್‌ ಎಂಬ ಎರಡು ಆಯ್ಕೆಗಳು ನಮ್ಮ ಮುಂದಿದೆ. ಅಧಿಕಾರಿದಲ್ಲಿರುವುದು ಒಂದು ರಾಜಕೀಯವಾದರೆ, ಅದೇ ಅಧಿಕಾರವನ್ನು ಜನರ ಪರವಾಗಿ ಬಳಸಿದರೆ ಅದು ಪೀಪಲ್‌ ಪಾಲಿಟಿಕ್ಸ್‌ ಆಗುತ್ತದೆ. ಜನ ಸಾಮಾನ್ಯರು ಶ್ರೀಮಂತರಿದ್ದರೆ ಸರ್ಕಾರಕ್ಕೆ ತೆರಿಗೆ ಬರುತ್ತದೆ. ಸರ್ಕಾರ ಮಾತ್ರ ಶ್ರೀಮಂತವಿದ್ದರೆ ಪ್ರಯೋಜನವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.