ಜಡೇಜ ವೈಫ‌ಲ್ಯಕ್ಕೆ ನಾಯಕತ್ವದ ಒತ್ತಡ ಕಾರಣ: ಎಂ. ಎಸ್‌. ಧೋನಿ


Team Udayavani, May 3, 2022, 8:20 AM IST

ಜಡೇಜ ವೈಫ‌ಲ್ಯಕ್ಕೆ ನಾಯಕತ್ವದ ಒತ್ತಡ ಕಾರಣ: ಎಂ. ಎಸ್‌. ಧೋನಿ

ಮುಂಬಯಿ: ನಾಯಕತ್ವದ ಒತ್ತಡ ಮತ್ತು ಬೇಡಿಕೆಗಳಿಂದಾಗಿ ರವೀಂದ್ರ ಜಡೇಜ ಅವರ ಸಿದ್ಧತೆ ಹಾಗೂ ಪ್ರದರ್ಶನದ ಮೇಲೆ ವ್ಯತಿರಿಕ್ತ ಪರಿಣಾಮ ಬಿತ್ತು ಎಂಬುದಾಗಿ ಚೆನ್ನೈ ತಂಡದ ಮಹೇಂದ್ರ ಸಿಂಗ್‌ ಧೋನಿ ಅಭಿಪ್ರಾಯಪಟ್ಟಿದ್ದಾರೆ.

ಬೇರೊಬ್ಬರು ಹೇಳಿದ ಮಾತಿನಂತೆ ನಡೆಯುವುದಕ್ಕಿಂತ ತಂಡದ ನಾಯಕತ್ವದ ಜವಾಬ್ದಾರಿ ವಹಿಸಿಕೊಳ್ಳುವಂತೆ ಧೋನಿ ಅವರು ಜಡೇಜ ಅವರನ್ನು ಪ್ರೋತ್ಸಾಹಿಸಿದ್ದರು. ಇದರಂತೆ ಐಪಿಎಲ್‌ ಆರಂಭವಾಗಲು ಕೆಲವು ದಿನ ಬಾಕಿ ಇರುವಾಗಲೇ ಧೋನಿ ನಾಯಕತ್ವದಿಂದ ಹಿಂದೆ ಸರಿದಿದ್ದರು. ಕ್ಯಾಪ್ಟನ್ಸಿಗೆ ಅವರು ರವೀಂದ್ರ ಜಡೇಜ ಹೆಸರನ್ನು ಸೂಚಿಸಿದ್ದರು.

ಆದರೆ ಆಲ್‌ರೌಂಡರ್‌ ಜಡೇಜ ಒತ್ತಡದಲ್ಲಿ ಮುಳುಗಿದರು. ನಾಯಕತ್ವದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಲು ಅವರಿಂದ ಸಾಧ್ಯವಾಗಲಿಲ್ಲ. ಆಡಿದ 8 ಪಂದ್ಯಗಳಲ್ಲಿ ಚೆನ್ನೈ ಆರರಲ್ಲಿ ಸೋತು ಆಘಾತ ಅನುಭವಿಸಿತಲ್ಲದೇ ಅಭಿಮಾನಿಗಳು ನಿರಾಶೆಗೊಂಡರು.

ಮಾತ್ರವಲ್ಲದೇ ವೈಯಕ್ತಿಕವಾಗಿ ಬ್ಯಾಟಿಂಗ್‌, ಬೌಲಿಂಗ್‌ ಮತ್ತು ಫೀಲ್ಡಂಗ್‌ನಲ್ಲಿಯೂ ಜಡೇಜ ವೈಫ‌ಲ್ಯ ಅನುಭವಿಸಿದರು. ಇದರಿಂದ ಕಂಗೆಟ್ಟ ಜಡೇಜ ಕೂಟದ ನಡುವೆ ನಾಯಕತ್ವದ ಜವಾಬ್ದಾರಿಗೆ ರಾಜೀನಾಮೆ ಕೊಟ್ಟರು. ಫ್ರಾಂಚೈಸಿ ಮತ್ತೆ ಧೋನಿ ಅವರಲ್ಲಿ ನಂಬಿಕೆ ಇಟ್ಟು ನಾಯಕತ್ವದ ಹೊಣೆಯನ್ನು ಅವರಿಗೆ ವಹಿಸಿತು.

ನಂಬಿಗಸ್ಥ ಆಟಗಾರ
ನಿಜವಾಗಿ ಹೇಳುವುದಾದರೆ ಜಡೇಜ ಎಲ್ಲ ಮಾದರಿಯ ಕ್ರಿಕೆಟ್‌ನಲ್ಲೂ ಭಾರತದ ಅತ್ಯಂತ ನಂಬಿಗಸ್ಥ ಆಟಗಾರರಲ್ಲಿ ಒಬ್ಬರಾಗಿದ್ದರು. ಆದರೆ ಈ ಐಪಿಎಲ್‌ನಲ್ಲಿ ಅವರು ಎಲ್ಲ ವಿಭಾಗಗಳಲ್ಲೂ ವೈಫ‌ಲ್ಯ ಕಂಡಿರುವುದು ಎದ್ದು ಕಾಣುತ್ತಿದೆ.

ಧೋನಿ ನಾಯಕತ್ವದ ಜವಾಬ್ದಾರಿ ವಹಿಸಿಕೊಳ್ಳುತ್ತಲೇ ಚೆನ್ನೈ ಗೆಲುವಿನ ಟ್ರ್ಯಾಕ್‌ಗೆ ಮರಳಿದೆ. ರವಿವಾರ ನಡೆದ ಪಂದ್ಯದಲ್ಲಿ ಚೆನ್ನೈ ತಂಡ ಸನ್‌ರೈಸರ್ ಹೈದರಾಬಾದ್‌ ತಂಡವನ್ನು 13 ರನ್ನುಗಳಿಂದ ಸೋಲಿಸಲು ಯಶಸ್ವಿಯಾಗಿದೆ.

ಈ ವರ್ಷ ಚೆನ್ನೈ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆಯಿದೆ ಎಂಬುದು ಜಡೇಜ ಅವರಿಗೆ ಕಳೆದ ವರ್ಷವೇ ತಿಳಿದಿತ್ತು. ಈ ಐಪಿಎಲ್‌ನ ಮೊದಲ ಎರಡು ಪಂದ್ಯಗಳ ವೇಳೆ ಅವರ ನಾಯಕತ್ವದ ಕರ್ತವ್ಯದ ಮೇಲ್ವಿಚಾರಣೆ ನಡೆಸಿದ್ದೇನೆ ಮತ್ತು ಕೆಲವೊಂದು ಸೂಚನೆ ನೀಡಿದ್ದೇನೆ. ಆಬಳಿಕ ನಿಮ್ಮದೇ ಆದ ನಿರ್ಧಾರ ತೆಗೆದುಕೊಳ್ಳಬೇಕು ಮತ್ತು ಜವಾಬ್ದಾರಿ ವಹಿಸಿಕೊಳ್ಳಬೇಕೆಂದು ಸೂಚಿಸಿದ್ದೆ ಎಂದು ಧೋನಿ ಪಂದ್ಯದ ಬಳಿಕ ನಡೆದ ಪ್ರಶಸ್ತಿ ಸಮಾರಂಭದಲ್ಲಿ ತಿಳಿಸಿದರು.

“ಒಮ್ಮೆ ನೀವು ನಾಯಕರಾಗಿ ಆಯ್ಕೆಯಾದ ಬಳಿಕ ಬಹಳಷ್ಟು ಬೇಡಿಕೆಗಳು ಬರುತ್ತವೆ. ನಾಯಕತ್ವದ ಜವಾಬ್ದಾರಿ ಕಠಿನವಾಗುತ್ತ ಹೋದಾಗ ಇದು ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ. ಜಡೇಜ ಅವರಿಗೂ ಇದೇ ಸಮಸ್ಯೆ ಎದುರಾಗಿದೆ’ ಎಂದು ಧೊನಿ ಹೇಳಿದರು.

“ನಾಯಕತ್ವ ಜವಾಬ್ದಾರಿ ವಹಿಸಿಕೊಂಡ ಬಳಿಕ ನೀವು ಹಲವಾರು ವಿಷಯಗಳ ಬಗ್ಗೆ ಎಚ್ಚರಿಕೆ ವಹಿಸಿಕೊಳ್ಳಬೇಕಾಗುತ್ತದೆ. ಇದರಲ್ಲಿ ನಿಮ್ಮದೇ ಆಟವೂ ಒಳಗೊಂಡಿದೆ. ಇದೀಗ ಒತ್ತಡದಿಂದ ಮುಕ್ತರಾದ್ದರಿಂದ ಜಡೇಜ ಅವರು ಎಂದಿನಂತೆ ನೈಜ ಆಟ ಪ್ರದರ್ಶಿಸಲು ಪ್ರಯತ್ನಸಬೇಕಾಗಿದೆ’ ಎಂದು ಧೋನಿ ವಿವರಿಸಿದರು.

 

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.