ಜೆಡಿಎಸ್‌ ಮಹಿಳಾ ಘಟಕಕ್ಕೆ ಲೀಲಾದೇವಿ ಅಧ್ಯಕ್ಷೆ

ರಾಜ್ಯಾಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಮಧು ಬಂಗಾರಪ್ಪ, ಎಚ್.ಕೆ.ಕುಮಾರಸ್ವಾಮಿ

Team Udayavani, Jun 28, 2019, 5:15 AM IST

LEELA-DEVI

ಬೆಂಗಳೂರು: ತಳಮಟ್ಟದಿಂದ ಪಕ್ಷ ಸಂಘಟನೆಯತ್ತ ಚಿತ್ತ ಹರಿಸಿರುವ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡರು ರಾಜ್ಯ ಮಹಿಳಾ ಘಟಕ ಅಧ್ಯಕ್ಷರನ್ನಾಗಿ ಮಾಜಿ ಸಚಿವೆ ಲೀಲಾ ದೇವಿ ಆರ್‌.ಪ್ರಸಾದ್‌ ಅವರನ್ನು ನೇಮಿಸಿದ್ದಾರೆ.

ಇದೇ ಸಂದರ್ಭದಲ್ಲಿ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸಾಮಾಜಿಕ ಕಾರ್ಯಕರ್ತೆ ರುತ್‌ ಮನೋರಮಾ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿ ಸಿದ್ದಾರೆ. ಲೀಲಾದೇವಿ ಆರ್‌.ಪ್ರಸಾದ್‌ ಅವರು ಜನತಾದಳ ಸರ್ಕಾರ ಅವಧಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವೆಯಾ ಗಿದ್ದರು. ಒಂದು ಅವಧಿಗೆ ರಾಜ್ಯಸಭೆ ಸದಸ್ಯೆಯಾಗಿದ್ದರು.

ಇನ್ನು ರಾಜ್ಯಾಧ್ಯಕ್ಷ ಸ್ಥಾನ ಯಾರಿಗೆ ಕೊಡಬೇಕೆಂಬ ಬಗ್ಗೆ ಪಕ್ಷದ ಪ್ರಮುಖ ನಾಯಕರ ಜತೆ ನಿರಂತರ ಚರ್ಚೆಯಲ್ಲಿರುವ ದೇವೇಗೌಡರು, ಒಂದೆರಡು ದಿನಗಳಲ್ಲಿ ಅಧಿಕೃತವಾಗಿ ಘೋಷಣೆ ಮಾಡಲು ತೀರ್ಮಾನಿಸಿದ್ದಾರೆ.

ಪ್ರಮುಖವಾಗಿ ಮಧು ಬಂಗಾರಪ್ಪ ಹಾಗೂ ಎಚ್.ಕೆ.ಕುಮಾರಸ್ವಾಮಿ ಹೆಸರು ಪರಿಶೀಲನೆಯಲ್ಲಿದೆ. ಈಗಾಗಲೇ ಮಧು ಬಂಗಾರಪ್ಪ ಅವರು ರಾಜ್ಯ ಯುವ ಘಟಕದ ಅಧ್ಯಕ್ಷರಾಗಿದ್ದಾರೆ. ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲು ಎಚ್.ವಿಶ್ವನಾಥ್‌ ಸೇರಿ ಬಹುತೇಕ ನಾಯಕ ಒಲವು ಹೊಂದಿದ್ದಾರೆ.

ಆದರೆ, ದಲಿತ ಸಮುದಾಯದವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಬಗ್ಗೆ ದೇವೇಗೌಡರು ಚಿಂತನೆ ನಡೆಸುತ್ತಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಅವಕಾಶ ಕೊಡುವ ಅದರಲ್ಲೂ ಬಿ.ಎಂ.ಫ‌ರೂಕ್‌ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದರು ಎಂದು ಹೇಳಲಾಗಿದೆ.

ಮಧು ಬಂಗಾರಪ್ಪ, ಎಚ್.ಕೆ.ಕುಮಾರಸ್ವಾಮಿ, ಬಿ.ಎಂ.ಫ‌ರೂಕ್‌ ಕುರಿತು ಗೌಡರು ಪಕ್ಷದ ನಾಯಕರ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಮುಗಿಸಿ ಬಂದ ತಕ್ಷಣ ಅವರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಿದ್ದಾರೆ.

ಪ್ರಾತಿನಿಧ್ಯ: ಲಿಂಗಾಯತ ಸಮುದಾಯದ ಲೀಲಾದೇವಿ ಆರ್‌.ಪ್ರಸಾದ್‌ ಅವರನ್ನು ಮಹಿಳಾ ಘಟಕದ ಅಧ್ಯಕ್ಷೆಯಾಗಿ ನೇಮಿಸಲಾಗಿದ್ದು, ದಲಿತ ವರ್ಗದವರಿಗೆ ರಾಜ್ಯಾಧ್ಯಕ್ಷ ಸ್ಥಾನ, ಹಿಂದುಳಿದ ವರ್ಗದವರಿಗೆ ಯುವ ಘಟಕದ ಅಧ್ಯಕ್ಷ ಸ್ಥಾನ, ಮುಸ್ಲಿಂ ಹಾಗೂ ಲಿಂಗಾಯತರಿಗೆ ಮಹಾಪ್ರಧಾನ ಕಾರ್ಯದರ್ಶಿ ಹುದ್ದೆ, ಕುರುಬ, ಯಾದವ, ಬಲಿಜ, ಪರಿಶಿಷ್ಟ ಜಾತಿ ಸಮುದಾಯಕ್ಕೆ ಕಾರ್ಯಾಧ್ಯಕ್ಷರ ಹುದ್ದೆ ನೀಡುವುದು ದೇವೇಗೌಡರ ಲೆಕ್ಕಾಚಾರವಾಗಿದೆ.

ಬ್ರಾಹ್ಮಣ ಸಮುದಾಯದ ವೈ.ಎಸ್‌.ವಿ.ದತ್ತಾ ಅವರಿಗೆ ಈಗಾಗಲೇ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಹೀಗಾಗಿ, ಎಲ್ಲ ವರ್ಗದವರಿಗೂ ಪಕ್ಷದಲ್ಲಿ ಅಧಿಕಾರ ಕಲ್ಪಿಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

‘ಮಹಿಳೆಯರನ್ನು ಸಂಘಟಿಸಿ ಪಕ್ಷ ಕಟ್ಟುವೆ’
ಬೆಂಗಳೂರು: ‘ಮಹಿಳೆಯರನ್ನು ಸಂಘಟಿಸಿ ಪಕ್ಷ ಕಟ್ಟುವ ಕೆಲಸ ಮಾಡುವೆ’ ಎಂದು ಜೆಡಿಎಸ್‌ನ ಮಹಿಳಾ ಘಟಕದ ನೂತನ ಅಧ್ಯಕ್ಷೆ ಲೀಲಾ ದೇವಿ ಆರ್‌.ಪ್ರಸಾದ್‌ ತಿಳಿಸಿ ದ್ದಾರೆ.

ಮಹಿಳಾ ಘಟಕದ ಅಧ್ಯಕ್ಷೆ ಯಾಗಿ ನೇಮಕ ಗೊಂಡ ನಂತರ ಮಾತನಾಡಿದ ಅವರು, ದೇವೇಗೌಡರು ನನ್ನ ಮೇಲೆ ನಂಬಿಕೆಯಿಟ್ಟು ಹೊಣೆ ಗಾರಿಕೆ ಕೊಟ್ಟಿದ್ದಾರೆ. ಪಕ್ಷ ಸಂಘಟನೆ ಮಾಡುತ್ತೇ ನೆಂದು ಹೇಳಿದರು. ಯುವಮಹಿಳೆಯರನ್ನು ಪಕ್ಷ ಸಂಘಟನೆಗೆ ತೊಡಗಿಸಿಕೊಳ್ಳುತ್ತೇನೆ. ನಮ್ಮ ಚಿಹ್ನೆಯೇ ಮಹಿಳೆ. ಪ್ರತಿ ಜಿಲ್ಲೆ, ತಾಲೂಕು ಮಟ್ಟದಿಂದ ಪಕ್ಷ ಸಂಘಟನೆ ಮಾಡುತ್ತೇನೆಂದು ತಿಳಿಸಿದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.