ಕೋವಿಡ್-19 ಸೂಚನೆ ಉಲ್ಲಂಘಿಸಿದರೆ ಕಾನೂನು ಕ್ರಮ: ಹೈಕೋರ್ಟ್ ಎಚ್ಚರಿಕೆ
Team Udayavani, May 11, 2020, 6:17 AM IST
ಬೆಂಗಳೂರು: ಕೋವಿಡ್-19ಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನ ಮೇಲ್ವಿಚಾರಣ ಸಮಿತಿ ನೀಡಿರುವ ಸಲಹೆ ಮತ್ತು ಸೂಚನೆಗಳನ್ನು ಉಲ್ಲಂಘಿಸಿದರೆ ಕಾನೂನು ರೀತಿ ಕ್ರಮ ಜರಗಿಸಲಾಗುವುದು ಎಂದು ಕೋರ್ಟ್ ಸಿಬಂದಿಗೆ ಹೈಕೋರ್ಟ್ ಎಚ್ಚರಿಕೆ ನೀಡಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಅವರ ಆದೇಶದಂತೆ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬದಾಮಿಕರ್ ಸೂಚನೆ ಹೊರಡಿಸಿದ್ದಾರೆ.
ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ಎ.21ರಂದು ಸುತ್ತೋಲೆ ಹೊರಡಿಸಿದ್ದ ಹೈಕೋರ್ಟ್ ತನ್ನ ಎಲ್ಲ ಸಿಬಂದಿಗೆ ಸುರಕ್ಷತೆ ದೃಷ್ಟಿಯಿಂದ ಕೆಲವು ಸಲಹೆ ಮತ್ತು ಸೂಚನೆಗಳನ್ನು ನೀಡಿತ್ತು. ಈ ಸಲಹೆ, ಸೂಚನೆಗಳನ್ನು ಹೈಕೋರ್ಟ್ ಸಹಿತ ರಾಜ್ಯದ ಎಲ್ಲ ನ್ಯಾಯಾಲಯಗಳ ಅಧಿಕಾರಿಗಳು ಮತ್ತು ಸಿಬಂದಿ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಲಾಗಿತ್ತು.
ಈಗ ಮತ್ತೊಂದು ಸುತ್ತೋಲೆ ಹೊರಡಿಸಿರುವ ಹೈಕೋರ್ಟ್ ಈ ಹಿಂದೆ ತಿಳಿಸಿರುವ ಸೂಚನೆಗಳನ್ನು ಅಧಿಕಾರಿಗಳು ಅಥವಾ ಸಿಬಂದಿ ಉಲ್ಲಂಘಿಸಿದರೆ ಅದನ್ನು ಸೇವಾ ದುರ್ನಡತೆ ಎಂದು ಪರಿಗಣಿಸಿ ಕಾನೂನು ರೀತಿ ಕ್ರಮ ಜರಗಿಸಲಾಗುವುದು ಎಂದು ತಿಳಿಸಿದೆ.
ಅದೇ ರೀತಿ ಮಾ.24ರಂದು ಹೊರಡಿಸಲಾಗಿದ್ದ ಮೊದಲ ಸೂಚನೆಯಲ್ಲಿ ರಾಜ್ಯದ ಎಲ್ಲ ನ್ಯಾಯಾಲಯಗಳ ಅಧಿಕಾರಿಗಳು ಮತ್ತು ಸಿಬಂದಿ ತಮ್ಮ ಕಾರ್ಯಕ್ಷೇತ್ರ (ಕೆಲಸದ ಸ್ಥಳ)ದಿಂದ ಹೊರಹೋಗಬಾರದು ಎಂದು ಸೂಚಿಸಲಾಗಿತ್ತು. ಈಗ ಹೊರಡಿಸಿರುವ ಸೂಚನೆಯಲ್ಲಿ “ಒಂದು ವೇಳೆ ನ್ಯಾಯಾಲಯದ ಅಧಿಕಾರಿಗಳು ಅಥವಾ ಸಿಬಂದಿ ರಜೆ ಮತ್ತಿತರ ಕಾರಣಗಳಿಂದಾಗಿ ಹೊರಹೋಗಿದ್ದರೆ ಕೆಲಸಕ್ಕೆ ಹಾಜರಾಗುವ ಮೊದಲು ವೈದ್ಯಕೀಯ ಪರೀಕ್ಷೆಗೆ ಒಳಪಡ ಬೇಕು. ಅನಂತರವಷ್ಟೇ ಕೆಲಸಕ್ಕೆ ಹಾಜರಾಗಬೇಕು ಎಂದು ಸೂಚಿಸಲಾ ಗಿದೆ. ಜಿಲ್ಲಾ ನ್ಯಾಯಾಲಯಗಳ ಅಧಿಕಾರಿಗಳು ಆಯಾ ಜಿಲ್ಲಾ ಆಸ್ಪತ್ರೆಗಳಲ್ಲಿ ಪರೀಕ್ಷಿಸಿಕೊಳ್ಳಬೇಕು. ಅದೇ ರೀತಿ ಹೈಕೋರ್ಟ್ ಅಧಿಕಾರಿ ಮತ್ತು ಸಿಬಂದಿ ಹೈಕೋರ್ಟ್ ಆವರಣದಲ್ಲಿರುವ ಆಸ್ಪತ್ರೆಯಲ್ಲಿ ಪರೀಕ್ಷೆಗೊಳಪಡಬೇಕು. ಅಗತ್ಯ ಬಿದ್ದರೆ 14 ದಿನ ಹೋಂ ಕ್ವಾರಂಟೈನ್ಗೆ ಒಳಪಡಬೇಕು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ