ಪತ್ರಕರ್ತರಿಗೆ ಕಾನೂನು ಅರಿವು ಅಗತ್ಯ : ನ್ಯಾಯಾಧೀಶರಾದ ಬಿ.ಎಸ್. ಭಾರತಿ


Team Udayavani, Jul 16, 2023, 11:42 AM IST

4-chamarajanagara

ಚಾಮರಾಜನಗರ:  ಪತ್ರಕರ್ತರಿಗೆ ಕಾನೂನಿನ ಅರಿವು ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ.ಎಸ್. ಭಾರತಿ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯದ ಆವರಣದ ವ್ಯಾಜ್ಯ ಪೂರ್ವ ಪರಿಹಾರ ಕೇಂದ್ರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಪತ್ರಕರ್ತರಿಗೆ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಾಮಾನ್ಯವಾಗಿ ಪತ್ರಕರ್ತರಿಗೆ ಕಾನೂನುಗಳ ಅರಿವು ಇರುತ್ತದೆ. ಕಾನೂನಿನ ಬಗ್ಗೆ ಎಷ್ಟೇ ತಿಳಿವಳಿಕೆ ಇದ್ದರೂ ಹೊಸ ಹೊಸ ಕಾನೂನುಗಳು ಬರುತ್ತವೆ. ನ್ಯಾಯಾಧೀಶರಾಗಿದ್ದರೂ, ನಿವೃತ್ತರಾಗುವವರೆಗೂ ನಾನು ಕಾನೂನುಗಳ ಬಗ್ಗೆ ಅಧ್ಯಯನ ಮಾಡುತ್ತಲೇ ಇರುತ್ತೇವೆ. ಹೀಗಿರುವಾಗ ಪತ್ರಕರ್ತರೂ ಕಾನೂನುಗಳ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ. ಅವುಗಳ ಬಗ್ಗೆ ಅರಿವಿದ್ದರೆ ಸುದ್ದಿಗಳನ್ನು ಮಾಡುವಾಗ ಎಚ್ಚರಿಕೆಯಿಂದ ನಿರ್ವಹಿಸಲು ಸಾಧ್ಯವಾಗುತ್ತದೆ. ಪತ್ರಕರ್ತರು ಇಂತಹ ಕಾರ್ಯಾಗಾರಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್‌ಸ್, ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶೆ ನಿಶಾರಾಣಿ ಮಾತನಾಡಿ, ಪೋಕ್ಸೋ ಕಾಯ್ದೆ ಸಂಬಂಧ ಪ್ರಕರಣದಲ್ಲಿ ಶಿಕ್ಷೆ ಘೋಷಣೆಯಾದಾಗ ಸಂತ್ರಸ್ತರ ಹೆಸರನ್ನು ಬಹಿರಂಗಪಡಿಸಬಾರದು. ಶಿಕ್ಷೆ, ಪ್ರಮಾಣ ಬರೆದರೆ ಅನುಕೂಲ. ಶಿಕ್ಷೆ ಸಂಬಂಧ ಜನರಿಗೆ ಅರಿವು ಮೂಡಿಸುವ ವಿಚಾರ ಬರೆದರೆ ಉತ್ತಮ. ಬಾಲ್ಯವಿವಾಹ ನಿಷೇಧ ಕಾಯ್ದೆ ಸಂಬಂಧ ಸುದ್ದಿ ಹೆಚ್ಚು ಬಂದಲ್ಲಿ ಜನರಲ್ಲಿ ಜಾಗೃತಿ ಉಂಟಾಗಲು ಸಹಾಯಕವಾಗಲಿದೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಶ್ರೀಧರ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಪ್ರಮುಖ ಅಂಗ ಎನಿಸಿಕೊಂಡಿರುವ ಪತ್ರಿಕಾ ರಂಗ ಸಮಾಜದ ಧ್ವನಿಯಾಗಿದೆ. ವಾಕ್, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅವಕಾಶವಿದೆ. ಆದರೆ ಮತ್ತೊಬ್ಬರ ಸ್ವಾತಂತ್ರ್ಯಹರಣವಾಗದಂತೆ ಎಚ್ಚರಿಕೆ ವಹಿಸಬೇಕಿದೆ. ಈ ನಿಟ್ಟಿನಲ್ಲಿ ಕಾಯ್ದೆಗಳ ಬಗ್ಗೆ ಹೆಚ್ಚು ಅರಿವು ಹೊಂದಬೇಕಿದೆ ಎಂದು ತಿಳಿಸಿದರು.

ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮಾತನಾಡಿ, ಇಂದು ಯಾರಾದರೂ ಪತ್ರಕರ್ತರಾಗಬಹುದು ಎಂಬ ವಾತಾವರಣ ಇದೆ. ಪತ್ರಕರ್ತರಿಗೆ ನಿರ್ದಿಷ್ಟ ವಿದ್ಯಾರ್ಹತೆ, ಸಾಮಾಜಿಕ ಕಳಕಳಿ, ನಾಗರಿಕ ಸಮಸ್ಯೆಗಳ ಅರಿವು ಇರಬೇಕು. ನೈಜ ಪತ್ರಕರ್ತರಿಗಿಂತ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದೆ. ಇಂಥ ನಕಲಿ ಪತ್ರಕರ್ತರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದರು.

ಪತ್ರಕರ್ತರು ಎಂದು ಹೇಳಿಕೊಂಡು ಅಧಿಕಾರಿಗಳನ್ನು ಹೆದರಿಸಿ, ಬ್ಲಾಕ್‌ಮೇಲ್ ಮಾಡುವವರಿದ್ದಾರೆ. ನಕಲಿ ಪತ್ರಕರ್ತರಿಗೆ ಹೆದರದೇ ಅವರನ್ನು ಪ್ರಶ್ನಿಸುವ ಮನೋಭಾವವನ್ನು ಜನರು ಬೆಳೆಸಿಕೊಳ್ಳಬೇಕು. ಅಂಥವರಿಗೆ ಕಡಿವಾಣ ಹಾಕಬೇಕು. ನಕಲಿ ಪತ್ರಕರ್ತರಿಂದ ನೈಜ ಪತ್ರಕರ್ತರಿಗೂ ಕೆಟ್ಟ ಹೆಸರು ಬರುತ್ತದೆ ಎಂದರು.

ಹಿರಿಯ ವಕೀಲ ರವಿ ಅವರು ಪತ್ರಿಕಾ ಕಾಯ್ದೆಗಳ ಕುರಿತು ಉಪನ್ಯಾಸ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎ. ರಮೇಶ್, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷಸ್ವಾಮಿ, ವಕೀಲ ಮಹಾಲಿಂಗಗಿರ್ಗಿ, ಇತರರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

ಮುಖ್ಯ ಉಪನ್ಯಾಸ ನೀಡಿದ ಪತ್ರಕರ್ತ ಕೆ. ನರಸಿಂಹಮೂರ್ತಿ ಮಾತನಾಡಿ, ಇಂದು ಸಾಮಾಜಿಕ ಜಾಲತಾಣಗಳು, ಡಿಜಿಟಲ್ ಮಾಧ್ಯಮ ಬಂದ ಬಳಿಕ ಸುದ್ದಿಗಳು ಕ್ಷಣಾರ್ಧದಲ್ಲಿ ಪ್ರಸಾರವಾಗುತ್ತವೆ. ಮಾಧ್ಯಮಗಳಲ್ಲಿ ಬರುವ ಮುಂಚೆಯೇ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ವೇಗವಾಗಿ ಹರಡುತ್ತಿವೆ. ಅದರಲ್ಲಿ ಸತ್ಯವೆಷ್ಟು, ಸುಳ್ಳೆಷ್ಟು ಗೊತ್ತಿರುವುದಿಲ್ಲ. ಆದರೆ ಸತ್ಯವಾದ, ನೈಜವಾದ ವರದಿಯನ್ನು ಪ್ರಕಟಿಸುವುದು ಮಾಧ್ಯಮಗಳ ಜವಾಬ್ದಾರಿಯಾಗಿದೆ ಎಂದರು.

ಇಂದು ಸುದ್ದಿಯ ಆಯುಷ್ಯ ಕಡಿಮೆ. ಇಂದಿನ ಸುದ್ದಿ ನಾಳೆಗೆ ರದ್ದಿ ಎಂಬ ಮಾತು ಈಗ ಅನ್ವಯವಾಗುವುದಿಲ್ಲ. ಇಂದು ನೈಜ ಸುದ್ದಿ ಕೊಡುವುದೇ ಸವಾಲಿನ ಕೆಲಸವಾಗಿದೆ. ಸರಿಯಾದ ಹಾಗೂ ನೈಜ ಸುದ್ದಿಗಳನ್ನು ಕೊಡುವುದು ಪತ್ರಕರ್ತರ ಜವಾಬ್ದಾರಿ. ಸತ್ಯಾಂಶವನ್ನು ಪರಿಶೀಲಿಸದೇ ವರದಿ ಮಾಡಬಾರದು. ಮಾಹಿತಿಯನ್ನು ತಿರುಚಬಾರದು ಎಂದು ಅವರು ಹೇಳಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.