ಚಿರತೆ ಹಿಡಿಯಲೆಂದು ಬೋನ್ ಒಳಗೆ ಕುರಿ ಇಟ್ಟರೆ, ಚಿರತೆ ಕುರಿಯನ್ನೇ ತಿಂದು ಪರಾರಿ!
Team Udayavani, Jan 24, 2021, 1:04 PM IST
ಕೊಳ್ಳೇಗಾಲ: ರಾತ್ರಿ ವೇಳೆ ಬಂದು ಗ್ರಾಮಸ್ಥರು ನಿದ್ದೆಗೆಡಿಸಿದ್ದ ಚಾಲಾಕಿ ಚಿರತೆ ಬೋನ್ ಇಟ್ಟಿದ್ದರೂ ಅದರತ್ತ ಸುಳಿಯದೇ
ಕುರಿಗಳನ್ನು ತಿಂದು ಪರಾರಿಯಾಗಿದೆ. ತಾಲೂಕಿನ ಯಡಕುರಿಯ ಗ್ರಾಮದಲ್ಲಿ ಮತ್ತೆ ಚಿರತೆ ಪ್ರತ್ಯೇಕ್ಷವಾಗಿರುವುದು ಗ್ರಾಮದ ಸುತ್ತಮುತ್ತಲಿನ ಜನರು ಭಯಭೀತಗೊಳಿಸಿದೆ. ಕಾಡಿನಿಂದ ಗ್ರಾಮಕ್ಕೆ ಬಂದ ಚಿರತೆ ಎರಡು ಕುರಿಯನ್ನು ತಿಂದು ಪರಾರಿಯಾಗಿದೆ.
ಬೆಳಗಾಗುತ್ತಿದ್ದಂತೆ ನೋಡಿದ ಗ್ರಾಮಸ್ಥರು ಎರಡು ಕುರಿಗಳನ್ನು ತಿಂದಿರುವ ಮೂಳೆ ಬಿಸಾಡಿರುವುದನ್ನು ಕಂಡು ಚಿರತೆಯ ಗುರುತನ್ನೇ ಕಂಡು ಭಯಭೀತರಾಗಿದ್ಧಾರೆ.
ರಾತ್ರಿಯ ಹೊತ್ತು ಗ್ರಾಮದಲ್ಲಿ ಓಡಾಡಿರುವ ಚಿರತೆಯನ್ನು ಹಿಡಿಯುವಂತೆ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳು, ಯಡ ಕುರಿಯ ಸೇತುವೆ ಬಳಿ ಮತ್ತು ಸತ್ತೇ ಗಾಲ ನಾಲೆಯ ಬಳಿ ಎರಡು ಬೋನ್ ಅಳವಡಿಸಿದ್ದರು.
ಇದನ್ನೂ ಓದಿ: ಶಿಕ್ಷಕರು, ಎಸ್ಡಿಎಂಸಿಗೂ ತಿಳಿಸದೇ ಶಾಲೆಯಲ್ಲಿ 10 ಬೃಹತ್ ಮರಗಳ ಹನನ
ಚಿರತೆ ಬೋನಿಗೆ ಬಾರದೆ ನಾಪತ್ತೆಯಾಗಿದ್ದು, ಆಹಾರ ತಿಂದು ಕಾಡಿನ ಕಡೆಗೆ ಹೋಗಿರಬಹುದೆಂದು ಅರಣ್ಯ ಇಲಾಖೆಯ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಚಿರತೆ ಸೆರೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಆರ್ಎಫ್ಒ ಪ್ರವೀಣ್ ಒಲೆಯರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ