ಎಲ್ಲೋಡು ಗ್ರಾಮ ಪಂಚಾಯತ್ ಸುತ್ತಮುತ್ತ ಚಿರತೆಗಳ ಭೀತಿ ; ಭಯದಲ್ಲಿ ಜನತೆ


Team Udayavani, Mar 21, 2022, 7:48 PM IST

ಎಲ್ಲೋಡು ಗ್ರಾಮ ಪಂಚಾಯಿತಿ ಸುತ್ತಮುತ್ತ ಚಿರತೆಗಳ ಭೀತಿ ; ಭಯದಲ್ಲಿ ಜನತೆ

ಗುಡಿಬಂಡೆ : ತಾಲೂಕಿನ ಎಲ್ಲೋಡು ಗ್ರಾಮ ಪಂಚಾಯಿತಿ ಸುತ್ತಮುತ್ತಲ ಗ್ರಾಮಗಳಲ್ಲಿ ಎರಡು ಚಿರತೆಗಳು ಪ್ರತ್ಯಕ್ಷವಾಗಿದ್ದು, ಜನರು ಭಯಬೀತರಾಗಿದ್ದಾರೆ.

ತಾಲೂಕಿನ ಎಲ್ಲೋಡು ಗ್ರಾಮದಲ್ಲಿ ಕಳೆದ ಗುರುವಾರ ಬೆಳ್ಳಂ ಬೆಳ್ಳಿಗ್ಗೆ 2;30 ರ ಸಮಯದಲ್ಲಿ ಕುರಿ ದೊಡ್ಡಿಯ ಮೇಲೆ ಎರಡು ಚಿರತೆ ದಾಳಿ ಮಾಡಿ ಸುಮಾರು 14 ಕುರಿಗಳ ಸಾವಿಗೆ ಕಾರಣವಾಗಿದ್ದ ಘಟನೆ ಇನ್ನು ಜನರ ಮನದಲ್ಲಿ ಇರುವಾಗಲೇ, ಎಲ್ಲೋಡು ಗ್ರಾಮ ಪಂಚಾಯಿತಿ ಸುತ್ತಮುತ್ತಲ ಅರಣ್ಯ ವ್ಯಾಪ್ತಿಯ ಸಮೀಪದ ಗ್ರಾಮಗಳ ಅಕ್ಕಪಕ್ಕದಲ್ಲಿ ಚಿರತೆಗಳ ಓಡಾಟ ಕಂಡು ಬರುತ್ತಿದ್ದು, ಚಿರತೆಗಳನ್ನು ನೋಡಿದ ಜನ ತಮ್ಮ ಪ್ರಾಣಗಳನ್ನು ಕೈಯಲ್ಲಿ ಇಟ್ಟು ಓಡಾಡುವಂತಾಗಿದ್ದು, ವೃದ್ದರು, ಮಹಿಳೆಯರು, ಮಕ್ಕಳಂತೂ ಮನೆಯಿಂದ ಹೊರಬಾರದಾಗಿದ್ದಾರೆ.

ಎಲ್ಲೋಡು ಗ್ರಾಮಕ್ಕೆ ಬೇಟಿ ನೀಡಿದ್ದ ಉಪವಿಭಾಗಾಧಿಕಾರಿ: ಎಲ್ಲೋಡು ಗ್ರಾಮದಲ್ಲಿ ಚಿರತೆಗಳ ದಾಳಿಯಿಂದ ಕುರಿಗಳು ಸತ್ತುಹೋಗಿದ್ದ ಘಟನ ಸ್ಥಳಕ್ಕೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಮತ್ತು ತಹಶೀಲ್ದಾರ್ ಸಿಗ್ಬತುಲ್ಲಾ, ಅರಣ್ಯಾಧಿಕಾರಿ ಚಂದ್ರಶೇಖರ್ ಮತ್ತು ಸಿಬ್ಬಂದಿ ಬೇಟಿ ಕೊಟ್ಟು ಪರಿಶೀಲನೆ ನಡೆಸಿ, ಚಿರತೆಗಳನ್ನು ಸೆರೆ ಹಿಡಿಯಲು ಸೂಕ್ತ ಕ್ರಮ ವಹಿಸುವುದಾಗಿ ಭರವಸೆ ಕೊಟ್ಟಿದ್ದರು.

ರಸ್ತೆ ಮಾರ್ಗದಲ್ಲಿ ಕಂಡು ಬಂದ ಚಿರತೆ: ಗುಡಿಬಂಡೆಯಿಂದ ಚೋಳಶೆಟ್ಟಿಹಳ್ಳಿಗೆ ಹೋಗುವ ದಾರಿ ಮಧೆಯ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ತಡ ರಾತ್ರಿ ಎರಡು ಚಿರತೆಗಳು ಓಡಾಡುವುದನ್ನು ವಾಹನ ಸವಾರರು ನೋಡಿದ್ದು, ಕೂಡಲೇ ಸವಾರರು ಸಾಮಾಜಿಕ ಜಾಲತಾಣಗಳ ಮೂಲಕ ಚಿರತೆಗಳು ಓಡಾಡುವ ಬಗ್ಗೆ ಎಚ್ಚರಿಕೆ ಸಂದೇಶಗಳನ್ನು ಸಹ ಹರಿಬಿಟ್ಟಿದ್ದಾರೆ.

ಚಿರತೆಗಳು ಜನರ ಮೇಲೆ ದಾಳಿ ಮಾಡುವುದರ ಒಳಗಾಗಿಯೇ ಅರಣ್ಯ ಇಲಾಖೆ ಎಚ್ಚರ ಗೊಂಡು, ಚಿರತೆಗಳನ್ನು ಹಿಡಿಯಬೇಕೆಂದು ಎಲ್ಲೋಡು ಗ್ರಾಮ ಪಂಚಾಯಿತಿಯ ಸ್ಥಳೀಯ ಜನರು ಅಧಿಕಾರಿಗಳಲ್ಲಿ ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ : ಹಾಡು ಹಗಲೇ ಬೇಕರಿ ಮುಂದೆ ನಿಲ್ಲಿಸಿದ ಬೈಕ್ ನಿಂದ 3.40 ಲಕ್ಷ ಹಣ ದೋಚಿ ಪರಾರಿಯಾದ ಖದೀಮ

ಚಂದ್ರಶೇಖರ್, ವಲಯ ಅರಣ್ಯಾಧಿಕಾರಿ ಹೇಳಿಕೆ: ಗುಡಿಬಂಡೆ ತಾಲೂಕಿನ ಎಲ್ಲೋಡು ಗ್ರಾಮದಲ್ಲಿ ಗುರುವಾರ ಕುರಿದೊಡ್ಡಿಯ ಮೇಲೆ ಎರಡು ಚಿರತೆಗಳು ದಾಳಿ ಮಾಡಿ, ಕುರಿಗಳ ಸಾವಿಗೆ ಕಾರಣವಾಗಿದ್ದು, ಈಗ ಅವುಗಳು ಎಲ್ಲೋಡು ಮತ್ತು ಸುತ್ತಮುತ್ತಲ ಗ್ರಾಮಗಳ ಸಮೀಪದ ಅರಣ್ಯ ಪ್ರದೇಶದಲ್ಲಿ ಕಂಡು ಬರುತ್ತಿವೆ ಎಂದು ಗ್ರಾಮಸ್ಥರು ಹೇಳುತ್ತಿದ್ದು, ಅವುಗಳ ಸೆರೆಗಾಗಿ ಈಗಾಗಲೇ ಎಲ್ಲೋಡು ಸಮೀಪದ ಅರಣ್ಯದಲ್ಲಿ ಒಂದು ಬೋನ್ ಸಹ ಇಡಲಾಗಿದ್ದು, ನಾನು ಮತ್ತು ಅರಣ್ಯ ಸಿಬ್ಬಂದಿ ರಾತ್ರಿ ವೇಳೆಯಲ್ಲಿ ಗಸ್ತು ಸಹ ಹೋಗುತ್ತಿದ್ದು, ಪ್ರಮುಖವಾಗಿ ಕೆರೆ, ಕುಂಟೆ, ನೀರು ನಿಂತ ಕಾಲುವೆಗಳ ಸಮೀಪದಲ್ಲಿ ಅವುಗಳ ಹೆಜ್ಜೆ ಗುರುತು ಹಿಡಿದು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದು, ಅತಿ ಜರೂರಾಗಿ ಅವುಗಳ ಗುರುತು ಪತ್ತೆ ಹಚ್ಚಿ ಸೆರೆ ಹಿಡಿಯಲು ಪ್ರಯತ್ನಿಸುತ್ತೇವೆ ಎಂದರು, ಅದೆ ಅಲ್ಲದೇ ಗ್ರಾಮಗಳಲ್ಲಿ ಬೆಳಗಿನ ಜಾವ ಮತ್ತು ಸಂಜೆ ಹಾಗೂ ರಾತ್ರಿ ವೇಳೆ ಸಾರ್ವಜನಿಕರು ಎಚ್ಚರಿಕೆಯಿಂದ ಓಡಾಡಲು ಸೂಚನೆ ಸಹ ನೀಡಲಾಗುತ್ತದೆ ಎಂದರು.

ಟಾಪ್ ನ್ಯೂಸ್

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.