ಊರಿನ ಜನರನ್ನು ಭಯ ಹುಟ್ಟಿಸಿದ್ದ ಚಿರತೆ : ಡ್ರೋನ್ ಕ್ಯಾಮರಾ ಕಣ್ಣಿಗೂ ಸೆರೆಯಾಗಿಲ್ಲ
Team Udayavani, Jun 3, 2021, 5:58 PM IST
ಜಮಖಂಡಿ: ಕಳೆದ 6 ದಿನಗಳಿಂದ ತಾಲೂಕಿನ ಕುಂಬಾರಹಳ್ಳ ಗ್ರಾಮಸ್ಥರಲ್ಲಿ, ತಾಲೂಕಿನ ಜನತೆಯಲ್ಲಿ ಭಯ ವಾತಾವರಣ
ಮೂಡಿಸಿರುವ ಚಿರತೆಯೊಂದು ಜನರ ಕಣ್ಣು ತಪ್ಪಿಸಿ ಓಡಾಡುತ್ತಿದೆ.
ಚಿರತೆ ಸೆರೆಗೆ ಬೆಳಗಾವಿ ಜಿಲ್ಲೆಯಿಂದ ವಿಶೇಷ ಸುಸಜ್ಜಿತ ಅಸ್ತ್ರಗಳೊಂದಿಗೆ ಅರಣ್ಯ ಇಲಾಖೆ ರಕ್ಷಕರ ತಂಡವೊಂದು ಬುಧವಾರ
ತಾಲೂಕಿನ ಕುಂಬಾರಹಳ್ಳ ಗ್ರಾಮದ ಕಬ್ಬಿನ ಗದ್ದೆಗಳಲ್ಲಿ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಿಲ್ಲ. ತಾಲೂಕಿನ ಕುಂಬಾರಹಳ್ಳ ಗ್ರಾಮದ ನಿಂಗಪ್ಪ ಹೆಗಡೆ ಅವರ ತೋಟದಲ್ಲಿ ನಡೆದ ಗ್ರಾಮಸ್ಥರ ಸಭೆಯಲ್ಲಿ ಚಿರತೆಯನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.
ಚಿರತೆ ಸೆರೆಗೆ ಅರಣ್ಯ ಇಲಾಖೆ ರಕ್ಷಕರು ಕಳೆದ 5 ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದೆ. ಡ್ರೋನ್ ಕ್ಯಾಮೆರಾ ಸಹಿತ 7 ಸ್ವಯಂ ಚಾಲಿತ ಬೋನ್, 13 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಚಾಣಾಕ್ಷ ಚಿರತೆ ಮಾತ್ರ ಯಾವ ಕ್ಯಾಮೆರಾದಲ್ಲಿ ಸೆರೆಯಾಗಿಲ್ಲ. ಜೊತೆಗೆ ಬೋನಿಗೆ ಬೀಳುತ್ತಿಲ್ಲ. ಕಬ್ಬಿನ ಗದ್ದೆಯಲ್ಲಿ ಚಿರತೆ ವಾಸವಾಗಿದೆ ಎಂದು ಗ್ರಾಮಸ್ಥರ ಅನುಮಾನಗಳು ಹೆಚ್ಚಾಗುತ್ತಿರುವ
ಹಿನ್ನೆಲೆಯಲ್ಲಿ ಗುರುವಾರ ಗದ್ದೆಯಲ್ಲಿ ಬೆಳೆದಿರುವ ಕಬ್ಬು ಕಟಾವು ನಡೆಯಲಿದೆ.
ಇದನ್ನೂ ಓದಿ :ಭಾರತ ಬಿಟ್ಟು ಅಮೆರಿಕ ಪರ ಆಡಲಿರುವ ಸ್ಮಿತ್ ಪಟೇಲ್
ಬೆಳಗಾವಿ ಅರಣ್ಯ ಇಲಾಖೆ ರಕ್ಷಕರ ತಂಡವೊಂದು ಶಸ್ತ್ರ ಸಜ್ಜಿತವಾಗಿ ಚಿರತೆ ಸಂಚರಿಸುವ ಬಹುತೇಕ ರಸ್ತೆಗಳಲ್ಲಿ ಹೆಚ್ಚಿನ ನಿಗಾ
ವಹಿಸಿದೆ. ಚಿರತೆ ಕಂಡು ಬಂದರೇ ಅರಳಿಕೆ ಅಸ್ತ್ರ ಪ್ರಯೋಗಿಸುವ ಸಿದ್ಧತೆ ನಡೆದಿದೆ. ಬುಧವಾರ ರಾತ್ರಿ ನಡೆಯಲಿರುವ ಕಾರ್ಯಾಚರಣೆಯಲ್ಲಿ ಚಿರತೆ ಸೆರೆ ಹಿಡಿಯುವ ಲೆಕ್ಕಾಚಾರದಲ್ಲಿ ಅಧಿಕಾರಿಗಳು ಮಗ್ನರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ