ಕುಂದಾಪ್ರ ಕನ್ನಡ ಭಾಷಾ ಸಾಹಿತ್ಯ ಅಕಾಡೆಮಿಯಾಗಲಿ: ಡಾ| ಎ.ವಿ. ನಾವಡ
Team Udayavani, Apr 16, 2022, 5:45 AM IST
ಕುಂದಾಪುರ(ಕವಿಮುದ್ದಣ ವೇದಿಕೆ): ಭಾಷಾ ಅನನ್ಯತೆ ಯನ್ನು ಉಳಿಸಿಕೊಂಡಿರುವ “ಕುಂದಾಪ್ರ ಕನ್ನಡ’ಕ್ಕೆ ಭಾಷಾಸಾಹಿತ್ಯ ಅಕಾಡೆಮಿ ಸ್ಥಾಪನೆಯಾಗಬೇಕು. ಮಂಗಳೂರು ವಿ.ವಿ.ಯಲ್ಲಿ ಕುಂದಾಪ್ರ ಕನ್ನಡ ಅಧ್ಯಯನ ಪೀಠಕ್ಕೆ ಅನುದಾನ ಬಿಡುಗಡೆಯಾಗಬೇಕು.
ಜಿಲ್ಲೆಯ ಸಾಹಿತ್ಯ, ಸಂಸ್ಕೃತಿ, ಸಮಾಜಕ್ಕೆ ಮಹತ್ತರ ಕೊಡುಗೆ ನೀಡಿದ ಮಹನೀಯರ ಹೆಸರಿನಲ್ಲಿ ಸರಕಾರ ಪ್ರತಿಷ್ಠಾನಗಳನ್ನು ಸ್ಥಾಪಿಸಬೇಕು. ಕನ್ನಡಪ್ರಜ್ಞೆ ಕಟ್ಟುವ ಕೆಲಸ ನಿರಂತರ ನಡೆಯಬೇಕು. ಕನ್ನಡವನ್ನು ಮರಳಿ ಕಟ್ಟುವ ಸಂಕಥನಗಳು, ಕಾರ್ಯಯೋಜನೆಗಳು ರೂಪುಗೊಳ್ಳಬೇಕು ಎಂದು ಉಡುಪಿ ಜಿಲ್ಲಾ 15ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ| ಎ.ವಿ. ನಾವಡ ಕಳಕಳಿ ವ್ಯಕ್ತಪಡಿಸಿದರು.
ಶುಕ್ರವಾರ ಇಲ್ಲಿನ ಕಲಾಮಂದಿರ ದಲ್ಲಿ ಉದ್ಘಾಟನೆಗೊಂಡ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಾಲೆ ಮುಚ್ಚಬೇಡಿ
ಕನ್ನಡ ಶಾಲೆಗಳು ಮುಚ್ಚಿದರೆ, ಕನ್ನಡ ಪುಸ್ತಕಗಳನ್ನು ಓದದಿದ್ದರೆ, ಕನ್ನಡ ಶಾಲೆಗಳಲ್ಲಿ ಅಧ್ಯಾಪಕರೇ ಇಲ್ಲದಿದ್ದರೆ ಕನ್ನಡ ಉಳಿಯುವುದು ಹೇಗೆ? ಕನ್ನಡದ ಜ್ಯೋತಿ ನಿರಂತರ ಬೆಳಗು ವಂತೆ ನಾವೇ ಮಾಡಬೇಕು ಎಂದು ಸಮ್ಮೇಳನ ಉದ್ಘಾಟಿಸಿದ ಕಸಾಪ ಮಾಜಿ ರಾಜ್ಯಾಧ್ಯಕ್ಷ ಧರ್ಮ ದರ್ಶಿ ಹರಿಕೃಷ್ಣ ಪುನರೂರು ಹೇಳಿದರು.
ದ್ವೇಷಭಾಷೆ ಬೇಡ
ಭಾಷೆ ಹಗೆ, ದ್ವೇಷದ ಭಾಷೆಯಾಗಿ ಬದಲಾಗುತ್ತಿರುವುದು ಆತಂಕಕಾರಿ ಎಂದು ನಿಕಟಪೂರ್ವ ಸಮ್ಮೇಳನಾಧ್ಯಕ್ಷೆ ವೈದೇಹಿ ವೀಡಿಯೋ ಸಂದೇಶದಲ್ಲಿ ಹೇಳಿದರು.
ಕುಂದಗನ್ನಡ ಸೇರಿ ಉಪನ್ಯಾಸ ಮಾಲಿಕೆ, ಪ್ರಶಸ್ತಿ, ನಿರಂತರ ಕನ್ನಡ ಜಾಗೃತಿ, ಉದಯೋನ್ಮುಖರ ಬರಹ ಗಳಿಗೆ ಉತ್ತೇಜನ ನೀಡಲಾಗುವುದು, ಕಾಲೇಜುಗಳಲ್ಲಿ ಕಸಾಪ ಘಟಕ ಮಾಡ ಲಾಗುವುದು ಎಂದು ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಯಲ್ಲಿ ತಿಳಿಸಿದರು.
ಕಸಾಪ ಕಾಸರಗೋಡು ಅಧ್ಯಕ್ಷ ಸುಬ್ರಹ್ಮಣ್ಯ ವಿ. ಭಟ್ ಪುಸ್ತಕ ಮಳಿಗೆ ಉದ್ಘಾಟಿಸಿದರು. ಡಾ| ಕಬ್ಬಿನಾಲೆ ವಸಂತ ಭಾರದ್ವಾಜ್ ಸಮ್ಮೇಳನಾಧ್ಯಕ್ಷರನ್ನು ಪರಿ ಚಯಿಸಿದರು. ಡಾ| ಗಾಯತ್ರಿ ನಾವಡ ಪುಸ್ತಕ ಬಿಡುಗಡೆ ಮಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕ್ಷೇತ್ರ ಶಿಕ್ಷಣಾಧಿಕಾರಿ ಅರುಣ್ ಕುಮಾರ್ ಶೆಟ್ಟಿ, ಜಿಪಿಯು ಕಾಲೇಜು ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ., ಸ್ವಾಗತ ಸಮಿತಿ ಸಂಚಾಲಕ ಡಾ| ಉಮೇಶ್ ಪುತ್ರನ್, ವಿವಿಧ ತಾಲೂಕು ಘಟಕಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಸುಬ್ರಹ್ಮಣ್ಯ ಶೆಟ್ಟಿ ಸ್ವಾಗತಿಸಿ, ಸತೀಶ್ ವಡ್ಡರ್ಸೆ ವಂದಿಸಿದರು. ನರೇಂದ್ರ ಕುಮಾರ್ ಕೋಟ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್ ಕರೆ
Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ
Malpe ಬೀಚ್: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ
MUST WATCH
ಹೊಸ ಸೇರ್ಪಡೆ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್