ಸಿದ್ದರಾಮಯ್ಯ ರಾಜ್ಯದ ಜನತೆಯ ಕ್ಷಮೆ ಕೇಳಲಿ: ಸಚಿವ ನಿರಾಣಿ ಒತ್ತಾಯ
Team Udayavani, Jan 4, 2023, 2:51 PM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕುರಿತು ಅತ್ಯಂತ ಕೀಳು ಮಟ್ಟದಲ್ಲಿ ಟೀಕೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನ ಸಾಂವಿಧಾನಿಕ ಹುದ್ದೆ. ಅದಕ್ಕೆ ಗೌರವ ಕೊಡುವುದು ಪ್ರತಿಯೊಬ್ಬರ ಕರ್ತವ್ಯ. ಅದರಲ್ಲೂ ಅತ್ಯಂತ ಹಿರಿಯ ರಾಜಕಾರಣಿಯಾಗಿರುವ ಸಿದ್ದರಾಮಯ್ಯ ಅವರಿಂದ ಇಂತಹ ಪದವನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ವಿವಿಧ ಖಾತೆಗಳನ್ನು ನಿಭಾಯಿಸಿದ ರಾಜ್ಯದ ಒಬ್ಬ ಹಿರಿಯ ರಾಜಕಾರಣಿ. ಅಂಥವರು ಮುಂದಿನ ಪೀಳಿಗೆಗೆ ಮಾದರಿಯಾಗಬೇಕೆ ವಿನಃ ಇಂಥ ಕ್ಷುಲ್ಲಕ ಹೇಳಿಕೆ ನೀಡಬಾರದೆಂದು ಆಕ್ಷೇಪಿಸಿದ್ದಾರೆ.
10 ವರ್ಷಗಳ ಕಾಲ ಸೂಪರ್ ಪವರ್ ಪ್ರಧಾನಿ ಎನಿಸಿದ್ದ ಸೋನಿಯಾ ಗಾಂಧಿ ಮುಂದೆ ಕೈಕಟ್ಟಿ ನಿಲ್ಲುವಾಗ ಸಿದ್ದರಾಮಯ್ಯ ಅವರ ಸ್ವಾಭಿಮಾನ ಎಲ್ಲಿ ಹೋಗಿತ್ತು?. ಪ್ರಿಯಾಂಕ ಗಾಂಧಿ, ರಾಹುಲ್ ಗಾಂಧಿ ಅಂಥವರ ಮುಂದೆ ಜೀ ಹುಜೂರ್ ಎನ್ನುವ ನಿಮಗೆ ಭಾರತದ ಸಂಸ್ಕೃತಿ, ಸಂಸ್ಕಾರ ಕೊಟ್ಟಿದೆಯೇ ಎಂದು ನಿರಾಣಿ ತರಾಟೆಗೆ ತೆಗೆದುಕೊಂಡಿದ್ದಾರೆ.
ನಮ್ಮ ದೇಶದಲ್ಲಿ ಹುದ್ದೆ, ವ್ಯಕ್ತಿ ಮತ್ತು ವಯಸ್ಸಿಗೆ ಬೆಲೆ ಕೊಡುತ್ತಾರೆ. ನರೇಂದ್ರ ಮೋದಿ ಅವರು ಇದುವರೆಗೂ ಒಬ್ಬರಿಂದಲೂ ಕಾಲಿಗೆ ನಮಸ್ಕರಿಸಿಕೊಂಡಿಲ್ಲ. ನನ್ನ ಮುಂದೆ ಕೈ ಕಟ್ಟಿ ನಿಲ್ಲಿ ಎಂದು ಹೇಳಿಲ್ಲ. ಒಬ್ಬ ಅತ್ಯುತ್ತಮ ಸಂಸದೀಯ ಪಟು ಎನಿಸಿದ ಬೊಮ್ಮಾಯಿ ಅವರ ಬಗ್ಗೆ ಈ ರೀತಿ ಮಾತನಾಡಿರುವುದು ಕಾಂಗ್ರೆಸ್ ಪಕ್ಷದ ಹಾಗೂ ನಿಮ್ಮ ಕೀಳು ಅಭಿರುಚಿ ತೋರಿಸುತ್ತದೆ ಎಂದಿದ್ದಾರೆ.
ಕೂಡಲೇ ಸಿದ್ದರಾಮಯ್ಯನವರು ರಾಜ್ಯದ ಜನತೆಯ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಮ್ಮ ಕಾರ್ಯಕರ್ತರು ಕೂಡ ಅದೇ ಭಾಷೆಯಲ್ಲೇ ಉತ್ತರ ಕೊಡುತ್ತಾರೆ ಎಂದು ಸಚಿವ ನಿರಾಣಿ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
MUST WATCH
ಹೊಸ ಸೇರ್ಪಡೆ
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?