ಅಧ್ಯಾಪಕರಿಂದ ಸಂವಿಧಾನದ ಆಶಯ ಈಡೇರಲಿ
ರಾಜ್ಯಮಟ್ಟದ ಸಮಾವೇಶದಲ್ಲಿ ಎಸ್.ಎಲ್. ಭೋಜೇಗೌಡ
Team Udayavani, May 8, 2022, 4:00 AM IST
ಮಂಗಳೂರು: ಸಂವಿಧಾನದ ಆಶಯಗಳು ಅಧ್ಯಾಪಕರ ಮೂಲಕ ಈಡೇರಬೇಕಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದ್ದಾರೆ.
ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯಶಾಸ್ತ್ರ ಅಧ್ಯಾಪಕರ ಸಂಘ (ಮುಕ್ತಾ), ವ್ಯವಸ್ಥಾಪನ ಶಾಸ್ತ್ರ ಅಧ್ಯಾಪಕರ ಸಂಘ, ಮಂಗಳೂರು ವಿ.ವಿ. ವಾಣಿಜ್ಯಶಾಸ್ತ್ರ ಹಾಗೂ ವ್ಯವ ಸ್ಥಾಪನ ಶಾಸ್ತ್ರ ಸ್ನಾತಕೋತ್ತರ ವಿಭಾಗಗಳ ಸಹಯೋಗದೊಂದಿಗೆ ಆಯೋಜಿಸಲಾದ ಎರಡು ದಿನಗಳ 13ನೇ ರಾಜ್ಯ ಮಟ್ಟದ ವಾಣಿಜ್ಯ ಮತ್ತು ವ್ಯವಸ್ಥಾಪನ ಶಾಸ್ತ್ರ ಅಧ್ಯಾಪಕರ ಸಮಾವೇಶವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಭಾವೈಕ್ಯ, ಸಾಮ ರಸ್ಯದ ತಣ್ತೀಗಳನ್ನು ಒಳಗೊಂಡಿರುವ ಜೀವನದ ಶಿಕ್ಷಣ ಕಲಿಸುವುದು ಅಗತ್ಯ. ನೂತನ ಶಿಕ್ಷಣ ನೀತಿ ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕಾದರೆ ಅಧ್ಯಾ ಪಕರ ಪಾತ್ರ ಮುಖ್ಯ. ಅಧ್ಯಾಪಕರು ವೇತನ ಪರಿಷ್ಕರಣೆಗಾಗಿ ಹೋರಾಟ ಮಾಡಬೇಕಾದ ಸ್ಥಿತಿ ನಿರ್ಮಾಣ ವಾಗಬಾರದು ಎಂದರು.
ಬಡತನ ದೂರವಾಗಲಿ
ರಾಜ್ಯ ವಾಣಿಜ್ಯ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಕೆ. ಉಲ್ಲಾಸ್ ಕಾಮತ್ ಅವರು ದಿಕ್ಸೂಚಿ ಭಾಷಣ ಮಾಡಿ, ಸಮಾಜಕ್ಕೆ ಉತ್ತಮ ವ್ಯಕ್ತಿಗಳನ್ನು ರೂಪಿಸುವ ಶಿಕ್ಷಕರ ಆರ್ಥಿಕ ಸ್ಥಿತಿ ಇನ್ನೂ ಬದಲಾಗಿಲ್ಲ. ಶಿಕ್ಷಕರು ಕೂಡ ಶ್ರೀಮಂತರಾಗಬೇಕು ಎಂದು ಹೇಳಿದರು.
ಮಂಗಳೂರು ವಿ.ವಿ. ಕುಲಪತಿ ಪ್ರೊ| ಪಿ.ಎಸ್. ಯಡಪಡಿತ್ತಾಯ, ಬೆಳಗಾವಿಯ ರಾಣಿ ಚೆನ್ನಮ್ಮ ವಿ.ವಿ. ಕುಲಪತಿ ಪ್ರೊ| ಎಂ. ರಾಮಚಂದ್ರ ಗೌಡ, ಎಫ್ಟಿಸಿಸಿಎಂಕೆ ಅಧ್ಯಕ್ಷ ಚಂದ್ರಶೇಖರ್ ಆರ್. ಗುಡಸಿ, ಕಾರ್ಯದರ್ಶಿ ಡಾ| ಸಿ.ವಿ. ಕೊಪ್ಪದ್, ಸಮಾವೇಶದ ವೈಸ್ ಚೇರ್ಮನ್ ಡಾ| ಪರಮೇಶ್ವರ, ಕಾರ್ಯದರ್ಶಿ ಪ್ರೊ| ಲೂಯಿಸ್ ಮನೋಜ್, ಕೋಶಾಧಿಕಾರಿ ಪ್ರೊ| ಸ್ಮಿತಾ ಎಂ. ಉಪಸ್ಥಿತರಿದ್ದರು.
“ಮುಕ್ತಾ’ ಅಧ್ಯಕ್ಷ ಪ್ರೊ| ಪಾರ್ಶ್ವ ನಾಥ ಅಜ್ರಿ ಸ್ವಾಗತಿಸಿದರು. ಸಮಾ ವೇಶ ಚೇರ್ಮನ್ ಪ್ರೊ| ಬಾಲಕೃಷ್ಣ ಪೈ ಪ್ರಸ್ತಾವನೆಗೈದರು. ಎಫ್ಟಿಸಿಸಿಎಂಕೆ ಕೋಶಾಧಿಕಾರಿ ಡಾ| ಎಂ. ಜಯಪ್ಪ ವಂದಿಸಿದರು. ಸಹಾಯಕ ಪ್ರಾಧ್ಯಾಪಕಿ ಜ್ಯೋತಿ ಶೆಟ್ಟಿ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ