ಬೇರೆ ಇಲಾಖೆಗಳಿಗೆ ಇಂಧನ ಇಲಾಖೆ ಮೇಲ್ಪಂಕ್ತಿಯಾಗಲಿ


Team Udayavani, Feb 8, 2022, 6:00 AM IST

ಬೇರೆ ಇಲಾಖೆಗಳಿಗೆ ಇಂಧನ ಇಲಾಖೆ ಮೇಲ್ಪಂಕ್ತಿಯಾಗಲಿ

ಇಂಧನ ಇಲಾಖೆಯ ಹುದ್ದೆಯಲ್ಲಿ ಅರ್ಹತೆ ಪಡೆಯಬೇಕಾದರೆ ಕನ್ನಡದಲ್ಲಿ ಶೇ.50ರಷ್ಟು ಅಂಕ ಪಡೆದಿರಲೇಬೇಕು ಎಂಬ ಆದೇಶ ಇತರ ಇಲಾಖೆಗಳಿಗೂ ದಾರಿದೀಪವಾಗಿದ್ದು, ಇದೊಂದು ಅತ್ಯುತ್ತಮ ನಿರ್ಧಾರವಾಗಿದೆ. ಸರಕಾರಿ ಹುದ್ದೆಗಳಲ್ಲಿ ಕನ್ನಡವನ್ನು ಅವಗಣಿಸಲಾಗುತ್ತಿದೆ ಎಂಬ ಮಾತುಗಳ ನಡುವೆಯೇ ಇಂಧನ ಇಲಾಖೆಯ ಈ ನಿರ್ಧಾರ ಅತ್ಯಂತ ಮಹತ್ವದ್ದು ಎಂದೇ ಹೇಳಬೇಕಾಗುತ್ತದೆ.

ಬಹು ಹಿಂದಿನಿಂದಲೂ ಬ್ಯಾಂಕಿಂಗ್‌ ಮತ್ತು ರೈಲ್ವೇ ಇಲಾಖೆಯ ಉದ್ಯೋಗಗಳಲ್ಲಿ ಕನ್ನಡಿಗರನ್ನು ಅವಗಣಿಸಲಾಗುತ್ತಿದೆ ಎಂಬ ಆರೋಪಗಳು ಇದ್ದವು. ಈಗಲೂ ಈ ಆರೋಪ ಹಾಗೆಯೇ ಜೀವಂತವಾಗಿವೆ. ರಾಜ್ಯದ ಬ್ಯಾಂಕಿಂಗ್‌ ಹುದ್ದೆಗಳಿಗೂ ಹಿಂದಿ ಭಾಷೆಯ ರಾಜ್ಯಗಳಿಂದ ಬರುವಂಥವರಷ್ಟೇ ಉದ್ಯೋಗ ಪಡೆಯುತ್ತಿದ್ದಾರೆ ಎಂಬ

ಆರೋಪಗಳಿವೆ. ಹಾಗೆಯೇ ರೈಲ್ವೇ ಇಲಾಖೆಯ ಉದ್ಯೋಗಗಳಲ್ಲೂ ಹಿಂದಿ ಬರುವವರಿಗಷ್ಟೇ ಆದ್ಯತೆ ನೀಡಲಾಗುತ್ತಿದೆ. ಇಲ್ಲಿ ಪ್ರಾದೇಶಿಕ ಭಾಷೆಗಳನ್ನು ಅವಗಣಿಸಲಾಗುತ್ತಿದೆ ಎಂಬ ಆಪಾದನೆಗಳಿವೆ. ಈ ಸಂಬಂಧ ಕನ್ನಡ ಸಂಘಟನೆಗಳು ಹೋರಾಟ ನಡೆಸಿಕೊಂಡು ಬಂದಿದ್ದು, ಕರ್ನಾಟಕದಲ್ಲಿ ಕನ್ನಡಿಗರಿಗಷ್ಟೇ ಉದ್ಯೋಗ ನೀಡಬೇಕು ಎಂಬ ಆಗ್ರಹ ಕೇಳಿಬರುತ್ತಲೇ ಇದೆ.

ಇದರ ಮಧ್ಯೆಯೇ ರಾಜ್ಯದ ಇಂಧನ ಇಲಾಖೆ, ಕನ್ನಡವನ್ನು ಉಳಿಸಿ ಬೆಳೆಸುವ ಸಲುವಾಗಿ ಅತ್ಯಂತ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಕನ್ನಡ ಬರದೇ ಇರುವವರು ಅಥವಾ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯುಸಿ, ಪದವಿ ಹಂತದಲ್ಲಿ ಕನ್ನಡವನ್ನು ಐಚ್ಛಿಕ ಭಾಷೆಯಾಗಿ ಕಲಿಯದೇ ಇರುವವರು ಇಂಧನ ಇಲಾಖೆಯ ಉದ್ಯೋಗಕ್ಕಾಗಿ ನಡೆಯುವ ಪರೀಕ್ಷೆಯಲ್ಲಿ ಕನ್ನಡದ ಪರೀಕ್ಷೆ ಬರೆಯಬೇಕು. ಅಷ್ಟೇ ಅಲ್ಲ, ಇದರಲ್ಲಿ ಶೇ.50ರಷ್ಟು ಅಂಕ ಪಡೆಯಲೇಬೇಕು ಎಂಬ ನಿಯಮ ಮಾಡಿದೆ.

ಈ ನಿರ್ಧಾರದಿಂದಾಗಿ ಇಂಧನ ಇಲಾಖೆಯ ಪರೀಕ್ಷೆಯನ್ನು ಬರೆಯುವವರಿಗೆ ಕಡ್ಡಾಯವಾಗಿ ಕನ್ನಡ ಬರಲೇಬೇಕು ಮತ್ತು ಕಡ್ಡಾಯವಾಗಿ ಕಲಿಯಲೇಬೇಕಾದ ಅನಿವಾರ್ಯತೆ ಸೃಷ್ಟಿಯಾದಂತಾಗುತ್ತದೆ.

ಇಂಥ ಉತ್ತಮ ನಿರ್ಧಾರಗಳು ಕೇವಲ ಇಂಧನ ಇಲಾಖೆಗಷ್ಟೇ ಸೀಮಿತವಾಗಬಾರದು. ಇದು ರಾಜ್ಯದ ಇತರ ಇಲಾಖೆಗಳಿಗೂ ವಿಸ್ತರಿಸಬೇಕು. ಅಂದರೆ ರಾಜ್ಯದಲ್ಲಿರುವ ಎಲ್ಲ ಇಲಾಖೆಗಳ ಪರೀಕ್ಷೆ ವೇಳೆಯೂ ಕನ್ನಡದ ಅರ್ಹತ ಪರೀಕ್ಷೆ ನಡೆಸಬೇಕು. ಎಲ್ಲ ಇಲಾಖೆಗಳ ಉದ್ಯೋಗ ನೇಮಕಾತಿ ವೇಳೆ ಕನ್ನಡಕ್ಕೆ ಹೆಚ್ಚಿನ ಮನ್ನಣೆ ಕೊಡಬೇಕು. ಕನ್ನಡ ಕಲಿತವರಿಗೇ ಉದ್ಯೋಗ ಎಂಬ ನಿಯಮ ಮಾಡಬೇಕು. ಈ ರೀತಿ ಮಾಡಿದಲ್ಲಿ ಸ್ಥಳೀಯರಿಗೆ ಮೀಸಲಾತಿ ಬೇಕು ಎಂಬ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಏಕೆಂದರೆ ಕನ್ನಡ ಬಲ್ಲವರೇ ಈ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಕೆಲಸವನ್ನೂ ಪಡೆಯುತ್ತಾರೆ.

ಇದರ ಜತೆಗೆ ಕೇಂದ್ರ ಸರಕಾರದ ಸಂಸ್ಥೆಗಳ ಪರೀಕ್ಷೆಗಳಲ್ಲೂ,ಕರ್ನಾಟಕಕ್ಕಾಗಿ ಆಯ್ಕೆ ಮಾಡಿಕೊಳ್ಳುವಾಗ ಕನ್ನಡ ಬಲ್ಲವರೇ ಕೆಲಸ ಪಡೆಯುವಂತಾಗಲು ಕನ್ನಡದಲ್ಲೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಆಗ ಬ್ಯಾಂಕಿಂಗ್‌ ಮತ್ತು ರೈಲ್ವೇ ಪರೀಕ್ಷೆಗಳಲ್ಲೂ ಹೆಚ್ಚಿನ ಕನ್ನಡಿಗರು ಆಯ್ಕೆಯಾದಂತಾಗುತ್ತದೆ. ಇದು ಕೇವಲ

ಕನ್ನಡಕ್ಕಷ್ಟೇ ಅಲ್ಲ, ಎಲ್ಲ  ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯುವವರಿಗೂ ಅನುಕೂಲವಾಗುತ್ತದೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.