Exam: ಪರೀಕ್ಷಾ ಅಕ್ರಮ ತಡೆ ಕಾನೂನು ಸಮರ್ಪಕವಾಗಿ ಜಾರಿ ಆಗಲಿ


Team Udayavani, Feb 6, 2024, 11:33 PM IST

exam written

ದೇಶಾದ್ಯಂತ ವಿವಿಧ ಸರಕಾರಿ ಹುದ್ದೆಗಳಿಗೆ ಸರಕಾರಿ ನೇಮಕಾತಿ ಪ್ರಾಧಿಕಾರಗಳು ನಡೆಸುವ ಪರೀಕ್ಷೆಗಳಲ್ಲಿ ಭಾರೀ ಅಕ್ರಮಗಳು ನಡೆದು, ಅರ್ಹ ಮತ್ತು ಬಡ ಪ್ರತಿಭಾವಂತ ಅಭ್ಯರ್ಥಿಗಳು ಸರಕಾರಿ ಉದ್ಯೋಗದಿಂದ ವಂಚಿತರಾಗುತ್ತಿರುವ ಪ್ರಕರಣಗಳು ಪ್ರತಿನಿತ್ಯ ಎಂಬಂತೆ ವರದಿಯಾಗುತ್ತಲೇ ಇರುತ್ತವೆ. ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವ ದಿಸೆಯಲ್ಲಿ ಪ್ರತಿಯೊಂದು ಪರೀಕ್ಷೆಯ ಸಂದರ್ಭದಲ್ಲಿ ಸಂಬಂಧಪಟ್ಟ ಪರೀಕ್ಷಾ ಪ್ರಾಧಿಕಾರಗಳು ಅಥವಾ ಸಂಸ್ಥೆಗಳು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ತರಹೇವಾರಿ ಹೊಸ ಹೊಸ ನಿರ್ಬಂಧ, ನಿಯಮಗಳನ್ನು ಹೇರುತ್ತಲೇ ಬಂದಿವೆಯಾದರೂ ಪರೀಕ್ಷಾ ಅಕ್ರಮಗಳಿಗಿನ್ನೂ ಸಂಪೂರ್ಣ ಕಡಿವಾಣ ಬಿದ್ದಿಲ್ಲ. ಅಂಕಿಅಂಶವೊಂದರ ಪ್ರಕಾರ ಕಳೆದ 5 ವರ್ಷಗಳ ಅವಧಿಯಲ್ಲಿ ದೇಶದ 15 ರಾಜ್ಯಗಳಲ್ಲಿ ವಿವಿಧ ನೇಮಕಾತಿ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ 1.4 ಕೋಟಿ ಉದ್ಯೋಗಾಕಾಂಕ್ಷಿಗಳು ತೊಂದರೆ ಅನುಭವಿಸಿ ದ್ದಾರೆ. ಈ ಕಾರಣದಿಂದಾಗಿಯೇ ಕೇಂದ್ರ ಸರಕಾರ ಈಗ ಸಂಸತ್‌ನಲ್ಲಿ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ವಿಧಾನಗಳ ತಡೆಗಟ್ಟುವಿಕೆ) ಮಸೂದೆ-2024 ಅನ್ನು ಮಂಡಿಸಿದೆ. ಈ ಮಸೂದೆಯು ಪರೀಕ್ಷಾ ಅಕ್ರಮಗಳಲ್ಲಿ ತೊಡಗಿಕೊಳ್ಳುವ ಮತ್ತು ಶಾಮೀಲಾಗುವವರ ವಿರುದ್ಧ ಕಠಿನ ಕಾನೂನು ಕ್ರಮ ಕೈಗೊಳ್ಳುವ ನಿಯಮವನ್ನು ಒಳಗೊಂಡಿದೆ.

ಪರೀಕ್ಷಾ ಅಕ್ರಮಗಳಿಂದ ರೋಸಿ ಹೋಗಿರುವ ಜನತೆ, ಕೇಂದ್ರ ಸರಕಾರದ ಈ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರ ಈ ಪ್ರತಿಕ್ರಿಯೆ ಸಹಜವೇ ಆಗಿದ್ದು, ಪ್ರಸ್ತಾವಿತ ಮಸೂದೆಯು ಶೀಘ್ರವೇ ಕಾನೂನಾಗಿ ಜಾರಿಗೊಂಡು ಅನುಷ್ಠಾನಕ್ಕೆ ಬಂದದ್ದೇ ಆದಲ್ಲಿ ದೇಶದಲ್ಲಿ ಅವ್ಯಾಹತವಾಗಿ ನಡೆಯುತ್ತಲೇ ಬಂದಿರುವ ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಬಿದ್ದು, ಅರ್ಹ ಪ್ರತಿಭಾನ್ವಿತರಿಗೆ ಸರಕಾರಿ ಉದ್ಯೋಗ ಲಭಿಸಲಿದೆ ಎಂಬ ಆಶಾವಾದ ಅವರದ್ದಾಗಿದೆ.

ಕೇಂದ್ರ ಸರಕಾರ ಈಗ ಸಂಸತ್‌ನಲ್ಲಿ ಮಂಡಿಸಿರುವ ಮಸೂದೆಯು ವಿವಿಧ ತೆರನಾದ ಪರೀಕ್ಷಾ ಅಕ್ರಮಗಳಿಗೆ ಗರಿಷ್ಠ 10 ವರ್ಷ ಜೈಲುಶಿಕ್ಷೆ ಮತ್ತು ಒಂದು ಕೋಟಿ ರೂ. ದಂಡ ವಿಧಿಸುವ ಪ್ರಸ್ತಾವವನ್ನು ಒಳಗೊಂಡಿದೆ. ಅಷ್ಟು ಮಾತ್ರವಲ್ಲದೆ ಯಾವೆಲ್ಲ ಅಕ್ರಮಗಳು, ಚಟುವಟಿಕೆಗಳನ್ನು ಪರೀಕ್ಷಾ ಅಕ್ರಮಗಳೆಂದು ಪರಿಗಣಿಸ­ಲಾಗುತ್ತದೆ ಎಂಬುದನ್ನು ಈ ಮಸೂದೆಯಲ್ಲಿ ಪಟ್ಟಿ ಮಾಡಲಾಗಿದೆ. ಸದ್ಯ ಸರಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸುವ ದೇಶದಲ್ಲಿನ ಬಹುತೇಕ ಪರೀಕ್ಷಾ ಪ್ರಾಧಿಕಾರಗಳು, ಆಯೋಗಗಳು ಮತ್ತು ಸಂಸ್ಥೆಗಳನ್ನು ಈ ಮಸೂದೆಯ ವ್ಯಾಪ್ತಿಯಡಿಗೆ ತರಲಾಗಿದೆ.

ದೇಶದಲ್ಲಿ ಸದ್ಯ ಸರಕಾರಿ ಹುದ್ದೆಗಳ ನೇಮಕಕ್ಕಾಗಿ ನಡೆಸಲಾಗುವ ಪರೀಕ್ಷೆಗಳಲ್ಲಿ ಅಕ್ರಮಗಳು ಮತ್ತು ವಿವಿಧ ವ್ಯಕ್ತಿಗಳು ಯಾ ಸಂಸ್ಥೆಗಳು ಎಸಗುವ ಅಪರಾಧಗಳ ವಿರುದ್ಧ ಸೂಕ್ತ ಕ್ರಮ ಜರಗಿಸಲು ಯಾವುದೇ ಸಮಗ್ರವಾದ ನಿರ್ದಿಷ್ಟ ಕಾನೂನು ಜಾರಿಯಲ್ಲಿರಲಿಲ್ಲ. ಇದನ್ನು ಮನಗಂಡ ಸರಕಾರ, ಹೊಸ ಕಾನೂನನ್ನು ಜಾರಿ ಗೊಳಿಸಲು ತೀರ್ಮಾನಿಸಿದೆ. ಸಂಸತ್‌ನಲ್ಲಿ ಮಂಡಿಸಲಾಗಿರುವ ಮಸೂದೆಯ ಅಂಶಗಳು ಬಿಗಿ ನಿಯಮಾವಳಿ, ಕಠಿನ ಶಿಕ್ಷೆ ಸಹಿತ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಒಳಗೊಂಡಿದೆ. ವ್ಯಕ್ತಿಗತ ಮಾತ್ರವಲ್ಲದೆ ಸಂಘಟಿತವಾಗಿ ನಡೆಸಲಾಗುವ ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕಾನೂನು ಕ್ರಮಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ.

ಒಟ್ಟಾರೆಯಾಗಿ ಕೇಂದ್ರ ಸರಕಾರದ ಈ ಪ್ರಸ್ತಾವಿತ ಮಸೂದೆಯು ಕಾನೂನಾಗಿ ಯಥಾವತ್ತಾಗಿ ಅನುಷ್ಠಾನಗೊಂಡದ್ದೇ ಆದಲ್ಲಿ ದೇಶದಲ್ಲಿ ಸದ್ಯ ನಡೆಯುತ್ತಿರುವ ಪರೀಕ್ಷಾ ಅಕ್ರಮಗಳಿಗೆ ಅಕ್ಷರಶಃ ಕಡಿವಾಣ ಬೀಳಲಿದೆ. ಪ್ರಸ್ತಾವಿತ ಕಾನೂನು ಕಡತಕ್ಕೆ ಸೀಮಿತವಾಗದೆ ಸಮರ್ಪಕವಾಗಿ ಜಾರಿಗೊಂಡಲ್ಲಿ ಮಾತ್ರವೇ ಸರಕಾರದ ಉದ್ದೇಶ ಈಡೇರಲು ಸಾಧ್ಯ. ಇದರಿಂದ ದೇಶದಲ್ಲಿನ ಪರೀಕ್ಷಾ ವ್ಯವಸ್ಥೆ ಮತ್ತಷ್ಟು ಪಾರದರ್ಶಕಗೊಳ್ಳಲಿದೆ.

 

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.