ಜಾಗತಿಕ ತಾಪಮಾನ ಕಡಿಮೆಗೊಳಿಸುವತ್ತ ಜಗತ್ತು ಗಮನಕೊಡಲಿ


Team Udayavani, Jul 28, 2023, 10:10 PM IST

temparature

ಇದು ಜಗತ್ತು ಬಿಸಿಯಾಗಿರುವ ಕಾಲವಲ್ಲ, ಬದಲಾಗಿ ಭೂಮಿಯೇ ಕುದಿಯುತ್ತಿರುವ ಕಾಲ ಎಂದು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆ್ಯಂಟೋನಿಯೋ ಗುಟೆರಸ್‌ ಹೇಳಿದ್ದು, ಈ ಮೂಲಕ ಜಾಗತಿಕ ತಾಪಮಾನದ ಗಂಭೀರತೆಯನ್ನು ಜಗತ್ತಿನ ಮುಂದೆ ತೆರೆದಿಟ್ಟಿದ್ದಾರೆ. ಜಗತ್ತಿನಲ್ಲೇ ಜುಲೈ ಅತ್ಯಂತ ಬಿಸಿಯಾಗಿದ್ದ ಅಥವಾ ತಾಪದ ಮಾಸ ಎಂದು ದಾಖಲೆ ಬರೆದ ಹೊತ್ತಿನಲ್ಲೇ ಅವರು ಇಂಥ ಮಾತು ಹೇಳಿದ್ದು, ಆತಂಕ ಮೂಡುವ ಸ್ಥಿತಿ ಎದುರಾಗಿದೆ.

ಜಗತ್ತಿನ ತಾಪಮಾನ ಬದಲಾಗುತ್ತಿದೆ. ಇದಕ್ಕೆ ಸಾಕ್ಷಿಯಾಗಿ ನಾವು ಜುಲೈ ಮಾಸವನ್ನು ನೋಡಿದ್ದೇವೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಪರಿಣಾಮವುಂಟು ಮಾಡಲಿದೆ ಎಂದಿರುವ ಗುಟೆರಸ್‌, ಕೈಗಾರಿಕಾ ಕ್ರಾಂತಿಯ ಪೂರ್ವ ಕಾಲದ ತಾಪಮಾನ ಕಾಪಿಟ್ಟುಕೊಳ್ಳುವ ಅನಿವಾರ್ಯತೆಯೂ ನಮ್ಮೆಲ್ಲರ ಮುಂದಿದೆ ಎಂದಿದ್ದಾರೆ. ಇದಕ್ಕೆ ನಾಟಕೀಯ, ತಕ್ಷಣದ ಕ್ರಮಗಳಾಗಬೇಕು ಎಂದು ಜಗತ್ತಿನ ಎಲ್ಲ ನಾಯಕರಿಗೂ ಕರೆ ನೀಡಿದ್ದು, ತಾಪಮಾನ ಏರಿಕೆಯ ಅಪಾಯದ ಬಗ್ಗೆ ಒತ್ತಿ ಹೇಳಿದ್ದಾರೆ.

ಜಾಗತಿಕ ವಿಜ್ಞಾನಿಗಳ ಪ್ರಕಾರ, ಜು.5 ಮತ್ತು ಜು.7ರಂದು ಭಾರೀ ತಾಪಮಾನ ದಾಖಲಾಗಿದೆ. ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಈ ಪ್ರಮಾಣದ ತಾಪಮಾನ ದಾಖಲಾಗಿದೆ. ಅಂದರೆ 1940ರಲ್ಲಿ 13 ಸೆಲ್ಸಿಯಸ್‌ ಇದ್ದದ್ದು, ಈಗ ಜು.5ಕ್ಕೆ 17 ಸೆಲ್ಸಿಯಸ್‌ಗೆ ತಲುಪಿದೆ. 2016ರಲ್ಲಿ 15 ಸೆಲ್ಸಿಯಸ್‌ ಇತ್ತು. 2023ರ ಆರಂಭದಲ್ಲಿ 16 ಸೆಲ್ಸಿಯಸ್‌ಗೂ ತಲುಪಿತ್ತು. ಈಗ ಇದು 17 ಸೆಲ್ಸಿಯಸ್‌ಗೆ ಏರಿಕೆಯಾಗಿರುವುದು ಅಪಾಯಕಾರಿ ಸನ್ನಿವೇಶ ಎಂದು ವಿಶ್ವಸಂಸ್ಥೆ ಮತ್ತು ವಿಜ್ಞಾನಿಗಳು ಹೇಳಿದ್ದಾರೆ.

ಇತ್ತೀಚೆಗಷ್ಟೇ ವಿಜ್ಞಾನಿಗಳು, ಜಾಗತಿಕ ತಾಪಮಾನ ಕುರಿತ ಕಳವಳವನ್ನು ಬೇರೆ ರೀತಿಯಲ್ಲೇ ವ್ಯಕ್ತಪಡಿಸಿದ್ದರು. ಅಂದರೆ, ಗ್ರೀಸ್‌, ಇಟಲಿ ಸೇರಿದಂತೆ ಕೆಲವು ಐರೋಪ್ಯ ದೇಶಗಳಲ್ಲಿ ಭಾರೀ ಪ್ರಮಾಣದ ಕಾಳ್ಗಿಚ್ಚು ಕಾಣಿಸಿಕೊಂಡಿದ್ದು, ಇದಕ್ಕೆ ಜಾಗತಿಕ ತಾಪಮಾನ ಏರಿಕೆಯೇ ಕಾರಣ ಎಂದು ವಿಶ್ಲೇಷಿಸಲಾಗಿತ್ತು. ಅಷ್ಟೇ ಅಲ್ಲ, ಗ್ರೀಸ್‌ನಲ್ಲಿ  ಕಳೆದ ಎರಡು ವಾರದ ಹಿಂದೆ ಆರಂಭವಾಗಿರುವ ಇನ್ನೂ ಕಾಳ್ಗಿಚ್ಚು ನಿಯಂತ್ರಣಕ್ಕೇ ಬಂದಿಲ್ಲ. ಇಟಲಿಯಲ್ಲೂ ಇದೇ ಸ್ಥಿತಿ ಇದೆ. ಇನ್ನು ಭಾರತವೂ ಸೇರಿದಂತೆ ಜಗತ್ತಿನ ಹಲವಾರು ದೇಶಗಳಲ್ಲಿ ಭಾರೀ ಪ್ರಮಾಣದ ಪ್ರವಾಹವೂ ಕಾಣಿಸಿಕೊಂಡಿದೆ.

ಒಂದು ಕಡೆ ಕಾಳ್ಗಿಚ್ಚು, ಮತ್ತೂಂದು ಕಡೆಯಲ್ಲಿ ಪ್ರವಾಹ ಈ ಎರಡೂ ಸನ್ನಿವೇಶಗಳು ಭೂತಾಪಮಾನ ಏರಿಕೆಯಿಂದಲೇ ಆಗಿರುವಂಥದ್ದು ಎಂಬುದು ವಿಜ್ಞಾನಿಗಳ ಆತಂಕ. ಅಂದರೆ, ತಾಪಮಾನ ಏರಿಕೆಯಿಂದಾಗಿ ಸಮುದ್ರದ ನೀರು ಹೆಚ್ಚು ಆವಿಯಾಗಿ, ಅದು ಮೋಡವಾಗಿ ಶೇಖರಣೆಯಾಗುತ್ತಿದೆ. ಇದರಿಂದಾಗಿಯೇ ಹೆಚ್ಚು ಮಳೆ ಸುರಿಯುತ್ತಿದೆ ಎಂಬ ವಾದವೂ ಕೇಳಿಬರುತ್ತಿದೆ.

ಸದ್ಯದ ಪರಿಸ್ಥಿತಿಯಲ್ಲಿ ಜಗತ್ತಿನ ಪ್ರತಿಯೊಂದು ದೇಶವೂ ಮಾಲಿನ್ಯ ನಿಯಂತ್ರಣ, ಕೈಗಾರಿಕೀಕರಣ, ನಗರೀಕರಣದ ಬಗ್ಗೆ ಯೋಚನೆ ಮಾಡಲೇಬೇಕಾಗಿದೆ. ಕಲ್ಲಿದ್ದಲು ಬಳಕೆ ಪ್ರಮಾಣವೂ ಕಡಿಮೆಯಾಗಬೇಕು ಎಂಬ ಆಗ್ರಹವೂ ಕೇಳಿಬರುತ್ತಿದೆ. ಅಲ್ಲದೆ, ಸೌರ ವಿದ್ಯುತ್‌ ಸೇರಿದಂತೆ, ನೈಸರ್ಗಿಕ ಮೂಲಗಳಿಂದ ವಿದ್ಯುತ್‌ ಉತ್ಪಾದನೆಗೆ ಹೆಚ್ಚಿನ ಗಮನ ನೀಡಬೇಕು ಎಂಬ ಒತ್ತಾಯಗಳು ಎಲ್ಲೆಡೆಯಿಂದ ಕೇಳುತ್ತಿವೆ. ಆಗಷ್ಟೇ ನಾವು ಜಾಗತಿಕ ತಾಪಮಾನವನ್ನು ನಿಯಂತ್ರಣಕ್ಕೆ ತರಲು ಸಾಧ್ಯ. ಆಗ ಪ್ರಕೃತಿ ವಿಕೋಪಗಳನ್ನೂ ಕಡಿಮೆ ಮಾಡಬಹುದು ಎಂಬುದು ವಿಜ್ಞಾನಿಗಳ ಮತ್ತು ಪರಿಸರವಾದಿಗಳ ಮಾತಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಗಮನ ನೀಡಬೇಕು ಅಷ್ಟೇ.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.