ವಿದ್ಯಾರ್ಥಿಗಳಿಗೆ ಸ್ಥೈರ್ಯ ತುಂಬಲು ಶಿಕ್ಷಕರಿಗೆ ಪತ್ರ
Team Udayavani, Mar 28, 2020, 6:00 AM IST
ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆ ಬರೆಯಲಿರುವ ಪ್ರತಿ ವಿದ್ಯಾರ್ಥಿಗಳೊಂದಿಗೆ ಖುದ್ದು ಸಂಪರ್ಕದಲ್ಲಿರಲು, ಭಾವನಾತ್ಮಕ ಧೈರ್ಯ ತುಂಬಲು ಎಲ್ಲ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರಿಗೆ, ಶಿಕ್ಷಕರಿಗೆ ಪ್ರಥಮಿಕ, ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಕೋವಿಡ್ 19 ಪಿಡುಗು ಎದುರಾಗದೇ ಇದ್ದಿದ್ದರೆ ಮಾ.27ರಿಂದ ಎಸೆಸೆಲ್ಸಿ ಪರೀಕ್ಷೆಗಳು ಆರಂಭವಾಗುತ್ತಿದ್ದವು. 8.5 ಲಕ್ಷ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರು ನೋಡುತ್ತಿರುವುದನ್ನು ಹತ್ತಿರದಿಂದ ಗಮನಿಸಿದ್ದೇನೆ. ಅದರೆ ಈಗ ಕೋವಿಡ್ 19 ಪಿಡುಗು ಎಲ್ಲ ಪರೀಕ್ಷೆಗಳನ್ನು ಮುಂದೂಡುವಂತೆ ಮಾಡಿದೆ.
ಇಡೀ ಸಮಾಜ ಮೊದಲಿಗೆ ಕೋವಿಡ್ 19 ನೀಡಿರುವ ಪರೀಕ್ಷೆಯನ್ನು ಗೆಲ್ಲಬೇಕಾದ ಅನಿವಾರ್ಯತೆ ಇದೆ ಎಂದು ಸುರೇಶ್ ಕುಮಾರ್ ಅವರು ಶಿಕ್ಷಕರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖೀಸಿದ್ದಾರೆ. ನಿಮ್ಮ ಮಕ್ಕಳು ಎಸೆಸೆಲ್ಸಿ ಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವು ವಿದ್ಯಾರ್ಥಿಗಳೊಂದಿಗೆ ಖುದ್ದಾಗಿ ಸಂಪರ್ಕದಲ್ಲಿದ್ದು, ಅವರಿಗೆ ಭಾವನಾತ್ಮಕವಾದ ಧೈರ್ಯವನ್ನು ತುಂಬುವುದು ಬಹಳ ಪ್ರಮುಖವಾಗಿದೆ.
ನಿಮ್ಮ ಬಳಿ ವಿದ್ಯಾರ್ಥಿಗಳ ಸಂಪರ್ಕ ಸಂಖ್ಯೆಗಳಿರಬಹುದು, ದೂರವಾಣಿ ಮೂಲಕ ಇಂದಿನಿಂದಲೇ ಎಲ್ಲ ವಿದ್ಯಾರ್ಥಿಗಳನ್ನು ಖುದ್ದಾಗಿ ಸಂಪರ್ಕಿಸಿ, ಅವರಿಗೆ ಅಗತ್ಯ ಮಾರ್ಗದರ್ಷನ, ಸ್ಥೈರ್ಯವನ್ನು ತುಂಬಬೇಕು ಎಂದು ಮನವಿ ಮಾಡಿದ್ದಾರೆ.
ಕೋವಿಡ್ 19 ಸೃಷ್ಟಿಸಿರುವ ಇಂಥ ಕ್ಲಿಷ್ಟಕರ ಪರಿಸ್ಥಿತಿಯನ್ನು ಹಿಮ್ಮೆಟ್ಟಿಸಿ ಎಸೆಸೆಲ್ಸಿ ಪರೀಕ್ಷೆಯನ್ನು ಮುಂದಿನ ದಿನಗಳಲ್ಲಿ ಆತ್ಮವಿಶ್ವಾಸದಿಂದ ಎದುರಿಸೋಣ ಎನ್ನುವ ನಂಬಿಕೆಯನ್ನು ನೀವು ವಿದ್ಯಾರ್ಥಿಗಳಲ್ಲಿ ಮೂಡಿಸಬೇಕು ಎಂದವರು ಪತ್ರದಲ್ಲಿ ತಿಳಿಸಿದ್ದಾರೆ.
ನನ್ನ ಈ ಆಗ್ರಹವನ್ನು ನೀವು ಅಭಿಯಾನದ ಮಾದರಿಯಲ್ಲಿ ಅನುಪಾಲಿಸಿದಲ್ಲಿ ಸಮಾಜಕ್ಕೆ ಇಂಥ ಸಂದರ್ಭದಲ್ಲಿ ಆವಶ್ಯಕವಿರುವ ಧನಾತ್ಮಕ ಸಂದೇಶಗಳನ್ನು ನಾವೆಲ್ಲರೂ ಕೂಡಿ ರವಾನಿಸಿದಂತಾಗುತ್ತದೆ. ಇದಕ್ಕೆ ನೀವು ಸ್ಪಂದಿಸುತ್ತಿಇರಿ ಎಂದು ನಂಬಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ