ಕೇಂದ್ರ ಸರ್ಕಾರದ ನಿರ್ಧಾರ ವಿರೋಧಿಸಿ ಎಲ್ಐಸಿ ನೌಕರರಿಂದ ಪ್ರತಿಭಟನೆ
Team Udayavani, Feb 4, 2020, 9:31 PM IST
ಬೆಂಗಳೂರು: ಎಲ್ಐಸಿ (ಭಾರತೀಯ ಜೀವವಿಮಾ ನಿಗಮ)ಸಂಸ್ಥೆಯನ್ನು ಷೇರುಪೇಟೆಗೆ ತರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಜೆಸಿ ರಸ್ತೆಯಲ್ಲಿರುವ ಎಲ್ಐಸಿಯ ವಿಭಾಗೀಯ ಕಚೇರಿ-1ರ ಮುಂದೆ ಎಲ್ಐಸಿಯ ನೌಕರರು, ಜೀವವಿಮಾ ಪ್ರತಿನಿಧಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅಖೀಲ ಭಾರತ ವಿಮಾ ನೌಕರರ ಸಂಘದ ಬೆಂ.ವಿಭಾಗದ ಪ್ರಧಾನ ಕಾರ್ಯದರ್ಶಿ ಗೀತಾ ಎಸ್.ಕೆ ಅವರು, ವಿಮಾ ಉದ್ದಿಮೆ ಸರ್ಕಾರಿ ಸ್ವಾಮ್ಯದಲ್ಲಿ ಇರಬೇಕು. ಖಾಸಗಿಯವರಿಗೆ ಇದರಿಂದ ಲಾಭ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬಾರದು ಎಂದು ಒತ್ತಾಯಿಸಿದರು.
ಎಲ್ಐಸಿ ಕಳೆದ 62 ವರ್ಷಗಳಿಂದ ದೇಶದ ಯಶಸ್ವಿ ಉದ್ಯಮಗಳಲ್ಲಿ ಒಂದಾಗಿದೆ. ಎಲ್ಐಸಿಗೆ ಕೇಂದ್ರ ಸರ್ಕಾರ 100 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಿತ್ತು.ಆದರೆ, ಎಲ್ಐಸಿ 2,660ಕೋಟಿ ಲಾಭಾಂಶವನ್ನು ಸರ್ಕಾರಕ್ಕೆ ನೀಡಿದೆ. ಜನರ ಹಣವನ್ನು ಜನರ ಕಲ್ಯಾಣಕ್ಕೇ ಬಳಸಬೇಕು.
ಕೇಂದ್ರ ಸರ್ಕಾರ ಎಲ್ಐಸಿಯಲ್ಲಿನ ಕೇಂದ್ರದ ಪಾಲನ್ನು ಐಪಿಒ (ಆರಂಭಿಕ ಸಾರ್ವಜನಿಕ ನೀಡಿಕೆ) ಮೂಲಕ ಮಾರಾಟ ಮಾಡುವುದಾಗಿ ಘೋಷಿಸಿದೆ. ಈಗ ಸಾಂಕೇತಿಕವಾಗಿ ಪ್ರತಿಭಟನೆ ಮಾಡಲಾಗಿದ್ದು, ಕೇಂದ್ರ ಸರ್ಕಾರ ಈ ಮಸೂದೆ ಅಂಗೀಕರಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ