Drought: ಜನವರಿ ಬಳಿಕದ ಬದುಕು ಆತಂಕಿತ: ಸದನದಲ್ಲಿ ಬರ ಚರ್ಚೆ


Team Udayavani, Dec 8, 2023, 11:34 PM IST

DROUGHT 2

ಬೆಳಗಾವಿ: ಬರಗಾಲದ ಹಿನ್ನೆಲೆಯಲ್ಲಿ ಜನವರಿ ಬಳಿಕದ ನಾಲ್ಕೈದು ತಿಂಗಳ ಬದುಕುವುದು ಹೇಗೆ ಎಂದು ಜನ ಆಕಾಶ ನೋಡುವಂತಾಗಿದೆ ಎಂದು ಬಿಜೆಪಿ ಸದಸ್ಯ ಆರಗ ಜ್ಞಾನೇಂದ್ರ ಕಳವಳ ವ್ಯಕ್ತಪಡಿಸಿದರು.

ಶುಕ್ರವಾರ ವಿಧಾನಸಭೆಯಲ್ಲಿ ನಡೆದ ಬರಗಾಲದ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ನಾವಿನ್ನೂ ಡಿಸೆಂಬರ್‌ ತಿಂಗಳಲ್ಲಿ ಇದ್ದೇವೆ. ಈಗಾಗಲೇ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೊಂದು ತಿಂಗಳು ಹೇಗೋ ದೂಡಿಬಿಡಬಹುದು. ಜನವರಿ ಬಳಿಕ ಹೇಗೆ ಎನ್ನುವ ಆತಂಕ ಆರಂಭವಾಗಿದೆ ಎಂದರು.

ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಕೇಂದ್ರ ಸರಕಾರ ಪ್ರತಿ ರೈತರಿಗೆ ವಾರ್ಷಿಕ 6 ಸಾವಿರ ರೂ. ನೀಡಿದರೆ, ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ 4 ಸಾವಿರ ರೂ. ಸೇರಿಸಿ ನೀಡಲಾಗುತ್ತಿತ್ತು. ಅದನ್ನು ಈಗಿನ ಕಾಂಗ್ರೆಸ್‌ ಸರಕಾರ ನಿಲ್ಲಿಸಿದೆ. ಅದನ್ನು ಮುಂದುವರಿಸಿದ್ದರೆ ಬರಗಾಲದಂತಹ ಸಂದರ್ಭದಲ್ಲಿ ರೈತರಿಗೆ ನೆರವಾಗುತ್ತಿತ್ತು. ಅದನ್ನು ಬಿಟ್ಟು ಈಗ 2 ಸಾವಿರ ರೂ.ವರೆಗೆ ಹಣ ನೀಡುವುದಾಗಿ ಪ್ರಕಟಿಸಿದೆ. ಇದುವರೆಗೆ ಕೊಟ್ಟಿಲ್ಲ ಎಂದು ಆಕ್ಷೇಪಿಸಿದರು.

ತಟ್ಟೆಗೆ ಊಟ ಹಾಕಿ ಕೈ ಕಟ್ಟಿ ಹಾಕಿದರೆ ಹೇಗೆ?
ಜೆಡಿಎಸ್‌ನ ಎಂ.ಟಿ. ಕೃಷ್ಣಪ್ಪ ಮಾತನಾಡಿ, ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಹಣ ಇದೆ ಎನ್ನುತ್ತೀರಿ. ಆದರೆ ಒಂದೇ ಒಂದು ಕೊಳವೆಬಾವಿ ಕೊರೆಸಲು ಆಗುತ್ತಿಲ್ಲ. ತಟ್ಟೆಗೆ ಊಟ ಹಾಕಿ ಕೈ ಕಟ್ಟಿ ಹಾಕಿದರೆ ಹೇಗೆ? ಕೊಳವೆಬಾವಿ ಕೊರೆದ ಕೂಡಲೇ ವಿದ್ಯುತ್‌ ಪರಿವರ್ತಕ (ಟಿಸಿ) ಹಾಗೂ ಕೊಳವೆಮಾರ್ಗ ಅಳವಡಿಸಬೇಕು. ಲೋಡ್‌ಶೆಡ್ಡಿಂಗ್‌ ನಿಲ್ಲಿಸಿ. ನರೇಗಾ ಕಾರ್ಮಿಕರಿಗೆ ಕನಿಷ್ಠ 500 ರೂ. ಕೂಲಿ ಕೊಡಬೇಕು. ಪಶುಭಾಗ್ಯ ಯೋಜನೆ ಮರುಜಾರಿ ಮಾಡಬೇಕು. ಈ ಸರಕಾರದಲ್ಲಿ ರಸ್ತೆಗೂ ಬರಗಾಲ ಬಂದಿದೆ. ಯಡಿಯೂರು-ತುರುವೇಕರೆಗೆ ರಸ್ತೆಯಲ್ಲಿ ಹೆರಿಗೆ ಆಸ್ಪತ್ರೆಯೇ ಬೇಡ, ವಾಹನದಲ್ಲಿ ಹೋದರೆ ಸಾಕು ಹೆರಿಗೆ ಆಗುತ್ತದೆ. ಕೇವಲ ಗ್ಯಾರಂಟಿ ಯೋಜನೆಗಳಿಗೆ ಸೀಮಿತ ಆದರೆ ಸಾಲದು. ಅಭಿವೃದ್ಧಿಗೂ ಹಣ ಕೊಡಬೇಕು. ಮಹಿಳೆಯರಿಗೆ ಮಾಸಿಕ 2 ಸಾವಿರ ರೂ. ನೀಡುವ ಸರಕಾರ, ರೈತರಿಗೆ ಕೊಡುತ್ತಿಲ್ಲ ಎಂದು ಆರೋಪಿಸಿದರು.

ಸತತ ಬರಗಾಲ ಬಂದರೆ ಗತಿ ಏನು?
ಶರತ್‌ ಬಚ್ಚೇಗೌಡ ಮಾತನಾಡಿ, ಜಾಗತಿಕ ತಾಪಮಾನ ಹೆಚ್ಚಳದಿಂದ ಹವಾಮಾನ ವೈಪರೀತ್ಯ ಆಗುತ್ತಲೇ ಇದ್ದು, ಅತಿ ಹೆಚ್ಚು ತಾಪಮಾನವುಳ್ಳ ದೇಶಗಳ ಸಾಲಿನಲ್ಲಿ ಭಾರತವು 6ನೇ ಸ್ಥಾನದಲ್ಲಿದೆ. ಅಮೆರಿಕದಲ್ಲಿ ನೂರಾರು ವರ್ಷಗಳಾದರೂ ಬತ್ತದ ಹೂವರ್‌ ಜಲಾಶಯವಿದೆ. ಆದರೆ ಸತತ 7 ವರ್ಷಗಳ ಬರಗಾಲದಿಂದ ಹೂವರ್‌ ಜಲಾಶಯವೂ ತಳ ಕಂಡಿದೆ. ನಮ್ಮಲ್ಲಿರುವ ಜಲಾಶಯಗಳು ಒಂದು ವರ್ಷ ಮಳೆ ಬಾರದಿದ್ದರೆ ತಳ ಕಾಣುತ್ತವೆ. ಹೀಗಿರುವಾಗ ಸತತ ಬರಗಾಲ ಬಂದರೆ ಗತಿ ಏನು? ಕೆ.ಸಿ. ವ್ಯಾಲಿ, ಎಚ್‌ಎನ್‌ ವ್ಯಾಲಿಯಿಂದ ಸಂಸ್ಕರಿಸಿದ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಸುತ್ತಮುತ್ತಲ ಕೆರೆಗಳನ್ನು ತುಂಬಿಸುವ ಮೂಲಕ ಅಂತರ್ಜಲ ವೃದ್ಧಿಸಲಾಗುತ್ತಿದೆ. ಇಂತಹ ಕಾಮಗಾರಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕೈಗೊಳ್ಳಬೇಕು. ಎಲ್ಲ ಇಲಾಖೆಗಳ ಬಜೆಟ್‌ನಲ್ಲಿ ಶೇ.24ರಷ್ಟು ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಾತ್ರ ಬಳಸುವ ಕಾನೂನು ರೀತಿಯಲ್ಲೇ ವಿಪತ್ತು ನಿರ್ವಹಣೆಗೂ ಒಂದು ನಿಧಿ ಸ್ಥಾಪಿಸಬೇಕು ಎಂದು ಸಲಹೆ ನೀಡಿದರು.

ಅಡಿಕೆ ಆಮದು ನಿರ್ಬಂಧ ಅಗತ್ಯ: ಅಶೋಕ್‌ ರೈ
ಕಾಂಗ್ರೆಸ್‌ನ ಅಶೋಕ ರೈ ಮಾತನಾಡಿ, 400-480 ರೂ. ಇದ್ದ ಕ್ವಿಂಟಾಲ್‌ ಅಡಿಕೆ ದರವು 410 ರೂ.ಗೆ ಇಳಿದಿದೆ. 12 ಸಾವಿರ ಟನ್‌ ಅಡಿಕೆ ಆಮದು ಮಾಡಲಾಗುತ್ತಿದೆ. ನಮ್ಮ ರಾಜ್ಯ ಸರಕಾರವು ಕೇಂದ್ರಕ್ಕೆ ಪತ್ರ ಬರೆದು ಅಡಿಕೆ ಆಮದನ್ನು ನಿಲ್ಲಿಸಬೇಕು. ಅಡಕೆಯಲ್ಲಿ ಹಾನಿಕಾರಿಕ ಅಂಶಗಳಿವೆ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರಕಾರ ಪ್ರಮಾಣಪತ್ರ ಸಲ್ಲಿಸಿದ್ದು, ಈ ವಿಚಾರದಲ್ಲೂ ರಾಜ್ಯ ಸರಕಾರ ಮಧ್ಯಪ್ರವೇಶಿಸಿ ಸರಿಯಾದ ಮಾಹಿತಿಯನ್ನು ನ್ಯಾಯಾಲಯಕ್ಕೆ ದಾಖಲೆಸಹಿತ ಒದಗಿಸಬೇಕು. ಹಳದಿ ರೋಗಕ್ಕೆ ತುತ್ತಾಗಿರುವ ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ರೈತರಿಗೆ ಶಕ್ತಿ ತುಂಬಬೇಕಿದೆ: ಪೂಂಜ
ಬಿಜೆಪಿಯ ಹರೀಶ್‌ ಪೂಂಜ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿಗಾಗಿ 900-1,200 ಅಡಿ ಕೊಳವೆಬಾವಿ ಕೊರೆಯಬೇಕಾಗಿದೆ. ಹಿಂದಿನ ಸಿದ್ದರಾಮಯ್ಯ ಸರಕಾರ ಘೋಷಿಸಿದ್ದ ಪಶ್ಚಿಮವಾಹಿನಿ ಯೋಜನೆಯನ್ನು ಯಡಿಯೂರಪ್ಪ ಸರಕಾರ ಅನುಷ್ಠಾನಗೊಳಿಸುವ ಮೂಲಕ 400-500 ಚೆಕ್‌ಡ್ಯಾಮ್‌ಗಳನ್ನು ನಿರ್ಮಿಸಲಾಗಿದೆ. ಇದರಿಂದ ಅಂತರ್ಜಲ ಮಟ್ಟವೂ ವೃದ್ಧಿಯಾಗಿದ್ದು, ಕೃಷಿಗೂ ಸಹಕಾರಿಯಾಗಿದೆ. ಆದರೆ ಫ‌ಸಲ್‌ಬಿಮಾ ಯೋಜನೆಯ ಹಣ ತಲುಪಿಲ್ಲ. ಈ ಬಗ್ಗೆ ಸರಕಾರ ಗಂಭೀರ ಕ್ರಮ ತೆಗೆದುಕೊಳ್ಳಬೇಕು. ಎಲೆಚುಕ್ಕಿ ರೋಗ, ಹಳದಿ ರೋಗದಿಂದಾಗಿ ರೈತರು ಶಕ್ತಿ ಕಳೆದುಕೊಂಡಿದ್ದು, ರಬ್ಬರ್‌ ಬೆಲೆ ಕುಸಿತ ಆಗಿದೆ. ಹೀಗಾಗಿ ರಬ್ಬರ್‌ಗೆ ಬೆಂಬಲ ಬೆಲೆ ಘೋಷಿಸುವ ಮೂಲಕ ರೈತರಿಗೆ ಶಕ್ತಿ ತುಂಬಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.