ಪೋಲಾಗುವ ಬೀಜಗಳಿಗೆ ಕಾಡಂಚಿನಲ್ಲಿ ಜೀವ! ಎಲ್ಲ ಜಿಲ್ಲೆಗಳಲ್ಲಿ ಹಣ್ಣಿನ ಬೀಜ ಬಿತ್ತಲು ನಿರ್ಧಾರ


Team Udayavani, May 28, 2023, 1:41 PM IST

ಪೋಲಾಗುವ ಬೀಜಗಳಿಗೆ ಕಾಡಂಚಿನಲ್ಲಿ ಜೀವ! ಎಲ್ಲ ಜಿಲ್ಲೆಗಳಲ್ಲಿ ಹಣ್ಣಿನ ಬೀಜ ಬಿತ್ತಲು ನಿರ್ಧಾರ

ಮಂಗಳೂರು: ಮುಂಗಾರು ಆಗಮನಕ್ಕೆ ಜನತೆ ಎದುರು ನೋಡುತ್ತಿರು ವಂತೆಯೇ ತಿಂದು ಎಸೆಯುವ ಹಣ್ಣಿನ ಬೀಜಗಳಿಗೆ ಜೀವ ತುಂಬಲು ಅರಣ್ಯ ಇಲಾಖೆ ಮುಂದಾಗಿದೆ.

ಸ್ಥಳೀಯವಾಗಿ ಲಭ್ಯವಾಗುವ ಹಣ್ಣುಗಳ ಬೀಜಗಳನ್ನು ಆಯಾ ಪ್ರದೇಶಗಳಲ್ಲಿ ಸಂರಕ್ಷಿಸುವ ಈ ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಸಂರಕ್ಷಣಾ ಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಜಿಲ್ಲೆಗಳಲ್ಲಿ “ಬಿತ್ತೋತ್ಸವ’ ಆರಂಭಗೊಳ್ಳಲಿದೆ.

ಏನಿದು ಬಿತ್ತೋತ್ಸವ
ಮಳೆಗಾಲಕ್ಕೆ ಮುನ್ನ ಹೇರಳವಾಗಿ ದೊರೆಯುವ ಹಣ್ಣುಗಳ ಬೀಜಗಳನ್ನು ಸಂಗ್ರಹಿಸಿ ಕಾಡು ಹಾಗೂ ಕಾಡಿನಂಚು, ಸಾರ್ವಜನಿಕ ಪ್ರದೇಶ ಗಳಲ್ಲಿ ಬಿತ್ತಿ ಪೋಷಿಸುವುದು ಅರಣ್ಯ ಇಲಾಖೆಯ “ಬೀಜ ಬಿತ್ತೋತ್ಸವ’ ಕಾರ್ಯಕ್ರಮ.
ಜೂನ್‌ನಲ್ಲಿ ಮಳೆಗಾಲದೊಂದಿಗೆ ಶಾಲೆಗಳು ಆರಂಭಗೊಳ್ಳಲಿದ್ದು, ಆಗ ತಾಲೂಕು, ಹೋಬಳಿ ಮಟ್ಟದ ಆಯ್ದ ಶಾಲೆಗಳ ಮಕ್ಕಳನ್ನು ಈ ಕಾರ್ಯದಲ್ಲಿ ತೊಡಗಿಸಿಕೊಂಡು, ಅರಣ್ಯ ಇಲಾಖೆಯಿಂದ ಗುರುತಿಸಲಾದ ಪ್ರದೇಶಗಳಲ್ಲಿ ಸಂಗ್ರಹಿಸಲಾದ ಸ್ಥಳೀಯ ವಿಶೇಷತೆಯ ಬೀಜಗಳನ್ನು ಮಕ್ಕಳಿಂದ ಬಿತ್ತನೆ ಮಾಡಿಸಿ, ಅವರಲ್ಲಿ ಪರಿಸರದ ಬಗ್ಗೆ ಜಾಗೃತಿ, ಕಾಳಜಿ ಬೆಳೆಸುವ ಮಹದುದ್ದೇಶವೂ ಈ ಕಾರ್ಯಕ್ರಮದ ಹಿಂದೆ ಇದೆ.

ವಲಯ ಮಟ್ಟದಲ್ಲಿ ಕನಿಷ್ಠ
20 ಹೆಕ್ಟೇರ್‌ ಪ್ರದೇಶ ಆಯ್ಕೆ
ಬಿತ್ತೋತ್ಸವಕ್ಕೆ ಅರಣ್ಯ ವಲಯಗಳ ವ್ಯಾಪ್ತಿ ಯಲ್ಲಿ ಕನಿಷ್ಠ 20 ಹೆಕ್ಟೇರ್‌ ಪ್ರದೇಶವನ್ನು ಆಯ್ಕೆ ಮಾಡಿ, ಈ ಪ್ರದೇಶವನ್ನು ಜಾನುವಾರುಗಳಿಂದ ರಕ್ಷಣೆ ಮಾಡುವುದು. ಆಯ್ಕೆ ಮಾಡಲಾದ ಪ್ರದೇಶಗಳು ಹಳೆಯ ನೆಡುತೋಪುಗಳಾಗಿದ್ದರೆ ಅಲ್ಲಿ ನೈಸರ್ಗಿಕ ಪುನರುತ್ಪತ್ತಿ ಕಡಿಮೆ ಇರುವುದನ್ನು ಖಾತರಿಪಡಿಸಿಕೊಳ್ಳುವುದು. ಜೂನ್‌ 15ರ ವರೆಗೆ ಮಳೆಯ ಸ್ವೀಕೃತಿ ಮತ್ತು ಬಿತ್ತನೆ ಮಾಡಬೇಕಾದ ಮಣ್ಣಿನ ತೇವಾಂಶದ ಮಟ್ಟದ ಬಳಕೆಗೆ ಅನುಗುಣವಾಗಿ ಬೀಜ ಬಿತ್ತುವುದು. ಮೊಬೈಲ್‌ ಅಪ್ಲಿಕೇಶನ್‌ನಲ್ಲಿ ಬಿತ್ತೋತ್ಸವಕ್ಕೆ ಸಂಬಂಧಿಸಿದ ಮಾಹಿತಿಯನ್ನು ಅಪ್‌ಲೋಡ್‌ ಮಾಡಿ ಕೊಳ್ಳು ವಂತೆ ಅರಣ್ಯ ಇಲಾಖೆಯು ಈಗಾಗಲೇ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದೆ.

ಬೀಜ ಬಿತ್ತೋತ್ಸವದ ವೈಶಿಷ್ಟ್ಯಗಳು
-ಬಿತ್ತುವ ಬೀಜಗಳು ಸ್ಥಳೀಯ ಪ್ರಜಾತಿಯ ಮತ್ತು ಸ್ಥಳೀಯವಾಗಿ ಸಂಗ್ರಹಿಸಿದ್ದಾಗಿರಬೇಕು (ಸ್ಥಳೀಯ ಅರಣ್ಯ ಅಥವಾ ಬ್ಲಾಕ್‌ಗಳಿಂದಲೇ ಸಂಗ್ರಹಿಸಲು ಆದ್ಯತೆ)
– ನೈಸರ್ಗಿಕ ಪುನರುತ್ಪಾದನೆ ಮಾದರಿಯಲ್ಲಿ ನೆಡುತೋಪುಗಳ ಆಯ್ಕೆ
– ನಾಲ್ಕಾರು ವರ್ಷಗಳಿಗಿಂತ ಹಳೆಯ ನೆಡುತೋಪುಗಳಲ್ಲಿರುವ ಖಾಲಿ ಸ್ಥಳಗಳು
– ಸಂಘ-ಸಂಸ್ಥೆಗಳು ಆಸಕ್ತಿ ತೋರಿದಲ್ಲಿ ಅಂತಹ ಪ್ರದೇಶಗಳ ಆಯ್ಕೆ
– ಮಳೆ ಕೊರತೆ ಇರುವ ವಿಜಯಪುರ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬಿತ್ತನೆಗೆ ಸೂಕ್ತ ಪ್ರದೇಶಗಳು ಲಭ್ಯ ಇಲ್ಲದಿದ್ದರೆ, ಖಾಸಗಿ ಜಮೀನು ಮಾಲಕರ ಒಪ್ಪಿಗೆ ಪಡೆದು ಕೃಷಿ ಭೂಮಿಯ ಬದುಗಳ ಮೇಲೆ ಬಿತ್ತನೆ ಮಾಡುವುದು.

ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದು ವಲಯಕ್ಕೆ 10ರಂತೆ ತಲಾ 8 ವಲಯಗಳಲ್ಲಿ ಒಟ್ಟು 160 (80+80) ಶಾಲೆಗಳನ್ನು ಈ ಬಿತ್ತೋತ್ಸವಕ್ಕೆ ಆಯ್ಕೆ ಮಾಡಲಾಗುವುದು. ವಲಯ ಅಧಿಕಾರಿಗಳು ಶಾಲೆ ಆರಂಭವಾದ ಬಳಿಕ ಶಾಲೆಗಳಿಗೆ ಮಾಹಿತಿ ನೀಡಲಿದ್ದಾರೆ. ಇಲಾಖೆಯು ಸ್ಥಳೀಯವಾಗಿ ದೊರೆಯುವ ಹಣ್ಣುಗಳ ಬೀಜಗಳನ್ನು ಸಂಗ್ರಹಿಸುವ ಜತೆಗೆ ಮಕ್ಕಳಿಂದಲೂ ಬೀಜಗಳನ್ನು ಸಂಗ್ರಹಿಸಿ ಬಿತ್ತನೆ ನಡೆಸಲಾಗುತ್ತದೆ.
 - ಡಾ| ದಿನೇಶ್‌ ಕುಮಾರ್‌ ವೈ.ಕೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ, ದ.ಕ.
– ಉದಯ ಎಂ. ನಾಯಕ್‌
ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ, ಜಿಲ್ಲೆ ಉಡುಪಿ

 

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.