ಇರದುದರೆಡೆಗೆ ತುಡಿವುದೇ ಜೀವನ


Team Udayavani, Feb 28, 2021, 6:25 AM IST

jeevana

ಮನುಷ್ಯ ಅನ್ನಿಸಿಕೊಂಡ ಮೇಲೆ ಎಲ್ಲರೂ ಒಂದೇ ರೀತಿ ಇರಲು, ಬದುಕಲು ಸಾಧ್ಯವಿಲ್ಲ. ಐದು ಬೆರಳು ಯಾವತ್ತೂ ಒಂದೇ ಸಮನಾಗಿರುವುದಿಲ್ಲ. ಹಾಗೆಯೇ ಯಾವುದೇ ವ್ಯಕ್ತಿಗೆ ಬಯಸಿ¨ªೆಲ್ಲ ಸಿಗು ವುದು ಸಾಧ್ಯವೂ ಇಲ್ಲ. ಇದು ಗೊತ್ತಿದ್ದರೂ ಕೈಗೆ ಎಟು ಕದ ದ್ರಾಕ್ಷಿಗೇ ಎಲ್ಲರೂ ಆಸೆ ಪಡುತ್ತಾರೆ. ಈ ಮಾತಿಗೆ ಹಲವು ಉದಾಹರಣೆ ಹೇಳುತ್ತಾ ಹೋಗಬಹುದು.

– ಅದು ದುಬಾರಿ ಡೊನೇಷನ್‌ ಪಡೆಯುವ ಶಾಲೆ. ತಿಂಗಳು ತಿಂಗಳಿಗೂ ಶುಲ್ಕದ ಹೆಸರಿನಲ್ಲಿ 5 ಸಾವಿರ ಕೊಡಬೇಕು. ಒಂದು ಸಂತೋಷವೆಂದರೆ, ಆ ಶಾಲೆಯಲ್ಲಿ ಆಟ, ಪಾಠ, ಶಿಸ್ತು ಎಲ್ಲವನ್ನೂ ಚೆನ್ನಾಗಿ ಕಲಿಸುತ್ತಾರೆ. ಈ ಶಾಲೆಯಲ್ಲಿ ಆರನೇ ತರಗತಿಯಲ್ಲಿದ್ದಾಳೆ ಪ್ರಿಯಾಂಕ. ತಮ್ಮ ಶಾಲೆಯಿಂದ ಅರ್ಧ ಕಿ.ಮೀ ದೂರವಿರುವ ಇನ್ನೊಂದು ಶಾಲೆಯ ಮೇಲೆ ಅವಳಿಗೆ ಮೋಹ. ಅದನ್ನೇ ಮುಂದಿಟ್ಟುಕೊಂಡು ಅಪ್ಪನ ಬಳಿ ಹೇಳುತ್ತಾಳೆ: “ನೋಡಿ ಪಪ್ಪಾ, ನಂಗೆ ಈ ಸ್ಕೂಲು ಇಷ್ಟವಾಗೊಲ್ಲ. ಆ ಸ್ಕೂಲಿನಲ್ಲಿ ಹೋಂವರ್ಕೇ ಕೊಡಲ್ಲ, ಗೊತ್ತಾ? ಆದ್ರೂ ಎ ಗ್ರೇಡ್‌ ಕೊಡ್ತಿದಾರೆ. ಮುಂದಿನ ವರ್ಷ ನನ್ನನ್ನು ಅಲ್ಲಿಗೇ ಸೇರಿಸಿ.’

– ಹೆಂಡತಿ ಸ್ವಲ್ಪ ಫ್ಯಾಷನೇಬಲ್‌ ಆಗಿಲ್ಲ ಎನ್ನುವುದು ಮೈಕಲ್‌ನ ಚಿಂತೆಗೆ ಕಾರಣ. ಅವಳಿಗೆ ಹಸಿ ಬಿಸಿ ಪ್ರೀತಿಯಲ್ಲಿ ಆಸಕ್ತಿಯಿಲ್ಲ. ಬೆಳಗ್ಗೆ ಎದ್ದವಳೇ ಗಂಡನಿಗೆ ಕಾಫಿ ಮಾಡಿಕೊಟ್ಟು, ಅಡುಗೆ ಮನೆ ಸೇರಿ ಬಿಡುತ್ತಾಳೆ. ಅನಂತರ ಪಾತ್ರೆ ತೊಳೆಯುವುದು, ಕಸ ಗುಡಿಸುವುದು, ಪೂಜೆ, ತಿಂಡಿ, ಮಕ್ಕಳನ್ನು ಶಾಲೆಗೆ ಕಳುಹಿಸುವುದು, ಆಪ್ತರಿಗೆ ಫೋನ್‌ ಮಾಡುವುದು ಇದರಲ್ಲೇ ಸಮಯ ಕಳೆದು ಹೋಗುತ್ತದೆ. ಇದರ ಮಧ್ಯೆಯೇ ಮೈಕಲ್‌ ಸರಸವಾಡಲು ಬರು ತ್ತಾನೆ ನಿಜ. ಇವಳ್ಳೋ, ಅವನನ್ನು ಹತ್ತಿರಕ್ಕೂ ಸೇರಿಸು ವುದಿಲ್ಲ. ಛೀಮಾರಿ ಹಾಕಿ ಕಳುಹಿಸುತ್ತಾಳೆ. ಇಂಥ ಸಂದರ್ಭದಲ್ಲೆಲ್ಲ ಮೈಕಲ್‌ಗೆ ಪಕ್ಕದ್ಮನೆಯ ವಯ್ನಾರಿ ನೆನಪಿಗೆ ಬರುತ್ತಾಳೆ. ನನಗೂ ಅಂಥ ಹೆಂಡತಿ ಸಿಗಬಾರದಿತ್ತೆ ಎಂದು ಯೋಚಿಸುತ್ತಾನೆ. ಹೆಂಗಸರು, ಅದರಲ್ಲೂ ಗೃಹಿಣಿ ಅನ್ನಿಸಿಕೊಂಡವರು ಹಾಗೆಲ್ಲ ಬೋಲ್ಡ್ ಆಗಿ ವರ್ತಿಸಿದರೆ ಅದರಿಂದ ಒಳ್ಳೆಯದಕ್ಕಿಂತ ಕೆಟ್ಟದ್ದೇ ಜಾಸ್ತಿ ಎಂಬುದು ಅವನಿಗೆ ಗೊತ್ತಿಲ್ಲದ ಸಂಗತಿಯಲ್ಲ. ಆದರೂ, ಇಲ್ಲದ್ದರ ಕಡೆಗೇ ಅವನ ಧ್ಯಾನ.

ಇನ್ನು ಕಾಲೇಜಿಗೆ ಹೋಗುವ ಮಕ್ಕಳು ಅಪ್ಪ/ಅಮ್ಮನಿಗೆ ಛೇಡಿಸುತ್ತಾರಲ್ಲ? ಅದನ್ನು ಹೇಳದಿರುವುದೇ ಮೇಲು. ಮಕ್ಕಳು ಕಾಲೇಜಿಗೆ ಹೋಗುತ್ತಾರೆ ಎಂದು ಗೊತ್ತಾದ ತತ್‌ಕ್ಷಣ ಅಪ್ಪ/ಅಮ್ಮ ತಾವು ಕೊಡಿಸಿಟ್ಟಿದ್ದ ಹಣವನ್ನೆಲ್ಲ ಹೊಂದಿಸಿ ಮೊಬೈಲು ತೆಗೆದುಕೊಡ್ತಾರೆ. ಮೊಬೈಲ್‌, ಬೈಕು ಕೊಡಿಸಲು ಪ್ರಯತ್ನಿಸುತ್ತಾರೆ. ಆದರೂ ಮಕ್ಕಳಿಗೆ ಸಮಾಧಾನ ಆಗುವುದಿಲ್ಲ. ಅವರ ಕಣ್ಣನ್ನು ಗೆಳೆಯನ ಬಳಿ ಇರುವ ದುಬಾರಿ ಬೆಲೆಯ ಬೈಕ್‌ ಮತ್ತು ಮೊಬೈಲ್‌ ಆವರಿಸಿಕೊಂಡಿರುತ್ತವೆ.

ಯಾಕೆ ಹೀಗಾಗುತ್ತದೆ? ಇರುವುದೆಲ್ಲವನ್ನೂ ಬಿಟ್ಟು ಇಲ್ಲದಿರುವುದಕ್ಕೇ ಈ ಮನಸೇಕೆ ಆಸೆಪಡುತ್ತದೆ ಎಂಬ ಪ್ರಶ್ನೆಗೆ ಇದಮಿತ್ಥಂ’ ಎಂಬಂಥ ಉತ್ತರವಿಲ್ಲ. ಆದರೆ, ಅಂಥದೊಂದು ತಹತಹಕ್ಕೆ ನಮ್ಮೊಳಗಿರುವ ದುರಾಸೆಯೇ ಕಾರಣ ಎಂಬುದರಲ್ಲಿ ಎರಡು ಮಾತಿಲ್ಲ. ಏಕೆಂದರೆ ಯಾವುದೇ ವ್ಯಕ್ತಿಗೆ ಬಯಸಿ¨ªೆಲ್ಲ ಸಿಗುವುದು ಸಾಧ್ಯವೂ ಇಲ್ಲ. ಅದು ಸಾಧುವೂ ಅಲ್ಲ. ಹಾಗಿದ್ದರೂ ಕೈಗೆ ಎಟುಕದ ದ್ರಾಕ್ಷಿಯನ್ನು ಕುರಿತೇ ಎಲ್ಲರೂ ಯೋಚಿಸುತ್ತಾರೆ. ಅದಕ್ಕಾಗಿ ಆಸೆಪಡುತ್ತಾರೆ. ಇಂಥ ಸಂದರ್ಭಗಳಲ್ಲಿ, ಚಿಕ್ಕಂದಿನಲ್ಲಿ ಬಾಯಿಪಾಠ ಮಾಡಿಕೊಂಡಿದ್ದ – “ಪಾಲಿಗೆ ಬಂದದ್ದು ಪಂಚಾಮೃತ,’ “ಕೈಗೆಟುಕದ ದ್ರಾಕ್ಷಿ ಯಾವತ್ತೂ ಹುಳಿ’, “ಅತಿಯಾಸೆ ಗತಿಗೇಡು’ ಎಂಬಂಥ ಮಾತುಗಳು ಎಲ್ಲರಿಗೂ ಮರೆತೇ ಹೋಗಿರುತ್ತವೆ.
ಹೀಗೇಕೆ ಎಂಬ ಪ್ರಶ್ನೆಗೆ ಯಾರಲ್ಲೂ ಉತ್ತರವಿಲ್ಲ.

– ಎ.ಆರ್‌.ಮಣಿಕಾಂತ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಚೆ ಅಣ್ಣನಿಗೆ ಒಂದು ಅಕ್ಕರೆಯ ಪತ್ರ

Postman ಅಂಚೆ ಅಣ್ಣನಿಗೆ ಒಂದು ಅಕ್ಕರೆಯ ಪತ್ರ

ಅಪ್ಪಾ ಹೆದರಬೇಡ, ನಿನ್ನ ಕಾಲಾಗಿ ನಾನಿರ್ತೇನೆ

ಅಪ್ಪಾ ಹೆದರಬೇಡ, ನಿನ್ನ ಕಾಲಾಗಿ ನಾನಿರ್ತೇನೆ

MUNNA

ಕೆಮರಾ ಕಣ್ಣು ಮಿಟುಕಿಸುತ್ತಾ “ಕಮಾಲ್‌”ಮಾಡಿದ!

ಕಷ್ಟ ಕೊಡುವ ದೇವರು ಖುಷಿಯನ್ನೂ ಕೊಡುತ್ತಾನೆ

ಕಷ್ಟ ಕೊಡುವ ದೇವರು ಖುಷಿಯನ್ನೂ ಕೊಡುತ್ತಾನೆ

ನಮ್ಮ ತಪ್ಪುಗಳಿಗೆ ಬದುಕಿದ್ದಾಗಲೇ ಶಿಕ್ಷೆ ಆಗಿಬಿಡುತ್ತದೆ

ನಮ್ಮ ತಪ್ಪುಗಳಿಗೆ ಬದುಕಿದ್ದಾಗಲೇ ಶಿಕ್ಷೆ ಆಗಿಬಿಡುತ್ತದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.