ಕೋವಿಡ್ ನೊಂದಿಗೇ ಬದುಕು ನಿಷ್ಕಾಳಜಿ ಬೇಡ


Team Udayavani, May 19, 2020, 5:50 AM IST

ಕೋವಿಡ್ ನೊಂದಿಗೇ ಬದುಕು ನಿಷ್ಕಾಳಜಿ ಬೇಡ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೇಂದ್ರ ಸರ್ಕಾರವು ಲಾಕ್‌ಡೌನ್‌ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಿದೆ. ಜನವರಿ 30ರಂದು ದೇಶದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಕೋವಿಡ್ ಸೋಂಕು ಈಗ 1 ಲಕ್ಷದ ಗಡಿಯ ಸನಿಹವಿದೆ.

ಭಾರತದಲ್ಲಿ ಸೋಂಕು ಪತ್ತೆಹಚ್ಚಲು ಇದುವರೆಗೂ 20ಲಕ್ಷಕ್ಕಿಂತ ಅಧಿಕ ಟೆಸ್ಟ್‌ಗಳನ್ನು ನಡೆಸಲಾಗಿದೆ. ಗಮನಾರ್ಹ ಸಂಗತಿಯೆಂದರೆ, ಮೇ ಅಂತ್ಯದ ವೇಳೆಗೆ ಇಷ್ಟೊಂದು ಟೆಸ್ಟ್‌ಗಳನ್ನು ನಡೆಸಬೇಕು ಎಂದು ಭಾರತ ಗುರಿ ಹಾಕಿಕೊಂಡಿತ್ತಾದರೂ, ದೇಶದ ಸರ್ಕಾರಿ ಮತ್ತು ಖಾಸಗಿ ಪ್ರಯೋಗಾಲಯಗಳ ಅವಿರತ ಪರಿಶ್ರಮದಿಂದಾಗಿ, ಈ ಪ್ರಮಾಣದ ಪರೀಕ್ಷೆಗಳು ಬೇಗನೆ ಸಾಧ್ಯವಾದವು.

ನಮ್ಮ ದೇಶದಲ್ಲಿ ಕೋವಿಡ್ ನಿಂದಾಗಿ ಮೃತಪಟ್ಟವರ ಸಂಖ್ಯೆ ಅಮೆರಿಕ ಹಾಗೂ ಯುರೋಪಿಯನ್‌ ರಾಷ್ಟ್ರಗಳಿಗಿಂತ ಬಹಳ ಕಡಿಮೆಯಿದೆಯಾದರೂ, ಸಾಂಕ್ರಾಮಿಕ ಹರಡುವಿಕೆ ವೇಗವಂತೂ ಅಜಮಾಸು ಒಂದೇ ರೀತಿಯಲ್ಲಿಯೇ ಇದೆ. ಒಟ್ಟು ಸೋಂಕಿತರ ಸಂಖ್ಯೆಯಲ್ಲಿ ಭಾರತವೀಗ ಚೀನಾವನ್ನೂ ಹಿಂದಿಕ್ಕಿದೆ.

ಚೀನಾ ತನ್ನ ಅಂಕಿಸಂಖ್ಯೆಯನ್ನು ಮುಚ್ಚಿಟ್ಟಿದೆ ಎಂಬ ಆರೋಪವೂ ಇದೆ ಎನ್ನುವುದನ್ನು ನಾವು ಮರೆಯುವಂತಿಲ್ಲ. ಇದೇನೇ ಇದ್ದರೂ ಚೀನಾದಲ್ಲಿ ವೈರಸ್‌ನ ಪ್ರಕೋಪ ಮುಖ್ಯವಾಗಿ, ವುಹಾನ್‌ ನಗರಕ್ಕೆ ಸೀಮಿತವಾಗಿತ್ತು. ಆದರೆ ಭಾರತದಲ್ಲಿ ಈ ರೋಗದ ಆರಂಭವು ದೇಶಾದ್ಯಂತ ಆಯಿತು.

ಇನ್ನೊಂದೆಡೆಯಲ್ಲಿ ಕೋವಿಡ್ ವಿರುದ್ಧ ಲಸಿಕೆ ಕಂಡುಹಿಡಿಯಲು ಭಾರತ ಸೇರಿದಂತೆ ಜಗತ್ತಿನ ವೈಜ್ಞಾನಿಕ ವಲಯ ಹಗಲುರಾತ್ರಿ ಶ್ರಮಿಸುತ್ತಿದೆ. ಲಸಿಕೆ ಕೆಲವೇ ತಿಂಗಳಲ್ಲಿ ಸಿದ್ಧವಾಗಬಹುದು/ವರ್ಷಗಳೇ ಹಿಡಿಯಬಹುದು ಅಥವಾ ಲಸಿಕೆಯೇ ಅಭಿವೃದ್ಧಿಯಾಗದೇ ಇರಬಹುದು ಎಂದೂ ಹೇಳಲಾಗುತ್ತಿದೆ. ಖುದ್ದು ವಿಶ್ವ ಆರೋಗ್ಯ ಸಂಸ್ಥೆಯೂ ಸಹ ಕೋವಿಡ್ ವೈರಸ್ ನೊಂದಿಗೆ ಬದುಕಲು ಕಲಿಯಬೇಕು ಎಂದು ಹೇಳುತ್ತಿದೆ.

ಕೋವಿಡ್ ಕೂಡ ಎಚ್‌ಐವಿಯಂತೆ ನಮ್ಮ ನಡುವೆಯೇ ಇರುವಂತಾಗಬಹುದು, ಅದು ತಗುಲದಂತೆ ಎಚ್ಚರಿಕೆಯ ಕ್ರಮಗಳನ್ನು ಪಾಲಿಸಬೇಕಷ್ಟೇ ಎಂಬ ಎಚ್ಚರಿಕೆಯು ನಿರಾಶೆ ಹುಟ್ಟಿಸುವಂಥ ಸಂಗತಿಯೇ. ಹಾಗೆಂದು, ಇದೇ ಸತ್ಯವಾಗಬೇಕು ಎಂದೇನೂ ಇಲ್ಲ.

ಈಗಾಗಲೇ ಹಲವು ಸಂಶೋಧನೆಗಳು ಆರಂಭಿಕ ಹಂತದಲ್ಲಿ ಪ್ರಾಣಿಗಳ ಮೇಲೆ ಯಶಸ್ಸು ತೋರಿದ್ದು, ಹ್ಯೂಮನ್‌ ಟ್ರಯಲ್ಸ್‌ನ ನಂತರ ಏನಾಗುತ್ತದೋ ನೋಡಬೇಕು. ಈ ವಿಚಾರದಲ್ಲಿ ಹೆಚ್ಚು ಆಶಾವಾದ ಅಥವಾ ನಿರಾಶಾವಾದ ಎರಡೂ ಅಗತ್ಯವಿಲ್ಲ.

ಲಸಿಕೆ ಲಭ್ಯವಾಗಲಿ ಬಿಡಲಿ, ನಮ್ಮ ಸುರಕ್ಷತೆಯಲ್ಲಿ ನಾವಿರುವುದು ಅತ್ಯಗತ್ಯ. ಜನವರಿ ತಿಂಗಳಿಂದ ವಿಶ್ವಾದ್ಯಂತ ಹಲವು ದೇಶಗಳು ಒಂದರ್ಥದಲ್ಲಿ ಲಾಕ್‌ಡೌನ್‌ನಲ್ಲಿಯೇ ಇವೆ. ಅಂತಾರಾಷ್ಟ್ರೀಯ ವಿಮಾನಯಾನಗಳು ನಿಂತಿವೆ, ಸಾಮಾಜಿಕ ಅಂತರದ ಪಾಲನೆಯಿಂದ ಹಿಡಿದು ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಪ್ರಯತ್ನಗಳು ನಡೆದೇ ಇವೆ.

ಆದರೆ ಹೆಚ್ಚು ದಿನಗಳವರೆಗೆ ಲಾಕ್‌ಡೌನ್‌ ಅನ್ನು ಮುಂದುವರಿಸುವುದು ಯಾವ ದೇಶದ ಹಿತದೃಷ್ಟಿಯಿಂದಲೂ ಒಳ್ಳೆಯದಲ್ಲ ಎನ್ನುವುದನ್ನು ಜಾಗತಿಕ ವಿತ್ತ ಪರಿಸ್ಥಿತಿಯ ದುಃಸ್ಥಿತಿ ಸಾರುತ್ತಿದೆ. ಹೀಗಾಗಿ, ಭಾರತದಲ್ಲೂ ಉದ್ಯೋಗ ಕ್ಷೇತ್ರ ಸೇರಿದಂತೆ, ಆರ್ಥಿಕ ಚಕ್ರಕ್ಕೆ ಮರುಚಾಲನೆ ನೀಡುವ ಕೆಲಸಗಳೂ ವೇಗಪಡೆದಿವೆ.

ನಿಸ್ಸಂಶಯವಾಗಿಯೂ ಇದು ಮಾನವಕುಲಕ್ಕೆ ಬಂದೆರಗಿರುವ ಅತಿದೊಡ್ಡ ಕಂಟಕವೇ ಸರಿ. ಆದರೆ, ನಾವು ಮುನ್ನೆಚ್ಚರಿಕೆ ಕ್ರಮಗಳನ್ನು ರೂಢಿಸಿಕೊಳ್ಳದೇ ಮೊದಲಿನಂತೆಯೇ ಅಜಾಗರೂಕತೆಯಿಂದ ಬದುಕಿದರೆ ಈ ಕಂಟಕದ ಜಟಿಲತೆ ಮತ್ತಷ್ಟು ಹೆಚ್ಚುತ್ತದೆ ಎನ್ನುವುದನ್ನು ಮರೆಯದಿರೋಣ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.