ಸಂವಿಧಾನ ಭಗವದ್ಗೀತೆ ಇದ್ದಂತೆ: ಕಾಗೇರಿ


Team Udayavani, Aug 1, 2019, 3:07 AM IST

sanvidhana

ವಿಧಾನಸಭೆ: “ನಾನು ಎಬಿವಿಪಿ, ಆರ್‌ಎಸ್‌ಎಸ್‌, ಬಿಜೆಪಿಯಿಂದ ಬಂದವನು. ಅದಕ್ಕೆ ಹೆಮ್ಮೆಯಿದೆ. ಆದರೆ, ಸಂವಿಧಾನವೇ ಭಗವದ್ಗೀತೆ ಇದ್ದಂತೆ. ಸಂವಿಧಾನದಡಿ ರಾಜ್ಯ ವಿಧಾನಮಂಡಲದ ನಿಯಮಾವಳಿ ಪ್ರಕಾರವೇ ನಾನು ಕೆಲಸ ಮಾಡಲಿದ್ದೇನೆ’ ಎಂದು ನೂತನ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ವಿಧಾನಸಭೆಯಲ್ಲಿ ಬುಧವಾರ ಸ್ಪೀಕರ್‌ ಆಗಿ ಆಯ್ಕೆಯಾದ ನಂತರ ಸದಸ್ಯರ ಶುಭ ಹಾರೈಕೆಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ ಅವರು, ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ದೇಶಕ್ಕೆ ಕೊಟ್ಟಿರುವ ಸಂವಿಧಾನವೇ ಶ್ರೇಷ್ಠ. ಅದುವೇ ಭಗವದ್ಗೀತೆ ಇದ್ದಂತೆ. ಸಂವಿಧಾನದ ಚೌಕಟ್ಟಿನಲ್ಲಿ ರೂಪಿತವಾದ ಕಾನೂನನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದರು. ಹೊಸ ಸದಸ್ಯರಿಗೆ ಹೆಚ್ಚು ಮಾತನಾಡಲು ಅವಕಾಶ ಕೊಡುತ್ತೇನೆ.

ಆದರೆ, ಸದಸ್ಯರು ಪೂರ್ಣ ಪ್ರಮಾಣದಲ್ಲಿ ಸದನದಲ್ಲಿ ಹಾಜರಿರಬೇಕು. ಚರ್ಚೆ ಸಂದರ್ಭದಲ್ಲಿ ಭಾಗಿಯಾಗಬೇಕು ಎಂದು ಹೇಳಿದರು. “ನಾನು 1994ರಲ್ಲಿ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾಗಿ ಬಂದಾಗ ರಮೇಶ್‌ಕುಮಾರ್‌ ಅವರು ಸ್ಪೀಕರ್‌ ಆಗಿದ್ದರು. ಹೊಸಬರಿಗೆ ಅವರು ಅವಕಾಶ ನೀಡುತ್ತಿದ್ದರು. ರಮೇಶ್‌ಕುಮಾರ್‌ ಅವರಿಂದ ರಮೇಶ್‌ಕುಮಾರ್‌ ಅವರವರೆಗೆ ಸ್ಪೀಕರ್‌ ಪೀಠ ಅಲಂಕರಿಸಿದ ನಂತರ ನಾನು ಇದೀಗ ಅಲಂಕರಿಸುತ್ತಿದ್ದೇನೆ’ ಎಂದು ಸ್ಮರಿಸಿದರು.

ಸಭಾಧ್ಯಕ್ಷ ಪೀಠದಲ್ಲಿ ಆಸೀನರಾದ ನಂತರ ಮಾತನಾಡಿದ ಅವರು, “ನನಗೆ ಈ ಸ್ಥಾನಕ್ಕೇರಲು ಅವಕಾಶ ಕೊಟ್ಟ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ, ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನನ್ನ ತಂದೆ-ತಾಯಿ, ಕ್ಷೇತ್ರದ ಜನತೆ, ರಾಜ್ಯದ ಜನತೆಯನ್ನೂ ಸ್ಮರಿಸಿಕೊಳ್ಳುತ್ತೇನೆ. ಇಂತಹ ಸ್ಥಾನದಲ್ಲಿ ಅಲಂಕರಿಸಿರುವುದು ನನ್ನ ಸುದೈವ’ ಎಂದು ಹೇಳಿದರು. ಈ ಹಂತಕ್ಕೆ ಬರಲು ಪಿ.ವಿ.ಕೃಷ್ಣಭಟ್‌, ದತ್ತಾತ್ರೇಯ ಹೊಸಬಾಳೆ, ಯಡಿಯೂರಪ್ಪ, ಅನಂತಕುಮಾರ್‌ ಅವರೂ ಕಾರಣ ಎಂದು ಹೇಳಿದರು.

ಕಣ್ತುಂಬಿಕೊಂಡ ಕುಟುಂಬ ವರ್ಗ: ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ತಾಯಿ, ಪತ್ನಿ, ಪುತ್ರಿಯರು ಸೇರಿ ಕುಟುಂಬ ವರ್ಗ ವೀಕ್ಷಕರ ಗ್ಯಾಲರಿಯಲ್ಲಿ ಕುಳಿತು ಸಭಾಧ್ಯಕ್ಷರಾಗಿ ಆಯ್ಕೆಯಾದ ಕ್ಷಣಗಳನ್ನು ಕಣ್ತುಂಬಿಕೊಂಡರು. ಕಾಗೇರಿ ಅವರಿಗೆ ಅಭಿನಂದನೆ ಸಲ್ಲಿಸಲು ಸ್ವ ಕ್ಷೇತ್ರದಿಂದ ಕಾರ್ಯಕರ್ತರು, ಗಣ್ಯರು ಆಗಮಿಸಿ ಸ್ಪೀಕರ್‌ ಕಚೇರಿಯಲ್ಲಿ ಶುಭ ಕೋರಿದರು.

ನಮ್ಮ ಮನೆತನದಲ್ಲಿ ಇವನು ದೊಡ್ಡವ. ಈಗ ಸಿಕ್ಕಿರುವ ಸ್ಥಾನವನ್ನು ನಡೆಸಿಕೊಂಡು ಹೋಗುತ್ತಾನೆ. ಜನರನ್ನು ನಿಭಾಯಿಸಿಕೊಂಡು ಹೋಗಿದ್ದಾನೆ. ಮುಂದೆಯೂ ಚೆನ್ನಾಗಿ ನಿಭಾಯಿಸುತ್ತಾನೆ. ದೇವರು ಒಳ್ಳೆಯದು ಮಾಡಲಿ.
-ಸರ್ವೇಶ್ವರಿ, ತಾಯಿ

ನನಗೆ ಹೆಚ್ಚು ಖುಷಿ ಆಗ್ತಿದೆ. ಇನ್ನೂ ಹೆಚ್ಚು ಹುದ್ದೆಗಳು ಸಿಗಲಿ, ಹೀಗೇ ಮುಂದುವರಿಯಲಿ. ದೇವರು ಒಳ್ಳೆಯದು ಮಾಡಲಿ.
-ಭಾರತಿ ಹೆಗಡೆ, ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪತ್ನಿ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.