Leelavati: ಪಶುವೈದ್ಯ ಆಸ್ಪತ್ರೆ ಉದ್ಘಾಟನೆ- ಡಿ.ಕೆ. ಶಿವಕುಮಾರ್ಗೆ ಲೀಲಾವತಿ ಆಹ್ವಾನ
Team Udayavani, Oct 14, 2023, 10:44 PM IST
ಬೆಂಗಳೂರು: ಸೋಲದೇವನಹಳ್ಳಿಯಲ್ಲಿ ಪಶು ವೈದ್ಯಕೀಯ ಆಸ್ಪತ್ರೆ ಉದ್ಘಾಟನೆ ಹಾಗೂ ನಿವೇಶನ ನೋಂದಣಿ ವಿಚಾರವಾಗಿ ಹಿರಿಯ ನಟಿ ಲೀಲಾವತಿ ಹಾಗೂ ಪುತ್ರ ವಿನೋದ್ ರಾಜ್ ಅವರು ಮಾಡಿದ ಮನವಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದರು.
ಸದಾಶಿವನಗರದ ತಮ್ಮ ನಿವಾಸಕ್ಕೆ ಶನಿವಾರ ಆಗಮಿಸಿದ್ದ ಲೀಲಾವತಿ ಹಾಗೂ ವಿನೋದ್ ರಾಜ್ ಅವರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಪ್ರಾಣಿಗಳ ರಕ್ಷಣೆ ಈ ತಾಯಿ ಮಗನ ನೆಚ್ಚಿನ ಹವ್ಯಾಸ. ಪಶುವೈದ್ಯಕೀಯ ಕಾಲೇಜು ಉದ್ಘಾಟನೆಗೆ ದಿನಾಂಕ ನೀಡಿ ಎಂದು ಅವರು ನನಗೆ ಕೇಳಿದ್ದಾರೆ. ನಾನು ಸಮಯ ನೋಡಿ ದಿನಾಂಕ ನೀಡುತ್ತೇನೆ. ಇನ್ನು ಅವರಿಗೆ ನಿಗದಿಯಾಗಿರುವ ನಿವೇಶನ ನೋಂದಣಿ ವಿಚಾರವಾಗಿಯೂ ಅವರು ಮನವಿ ಸಲ್ಲಿಸಿದ್ದಾರೆ. ಈ ವಿಚಾರಗಳ ಬಗ್ಗೆ ಅವರಿಗೆ ಅಗತ್ಯ ಸಹಕಾರ ನೀಡುತ್ತೇವೆ ಎಂದರು.
ಕಾರಿನ ಬಳಿಯೇ ಬಂದು ಆರೋಗ್ಯ ವಿಚಾರಿಸಿದ ಡಿಸಿಎಂ
ನಿಮ್ಮ ಆರೋಗ್ಯ ಸರಿ ಇಲ್ಲದ ಕಾರಣ ಇಷ್ಟು ದೂರ ಬರುವುದು ಬೇಡ ಎಂದು ಹೇಳಿದ್ದೆ, ಆದರೂ ನೀವು ಬಂದಿದ್ದು ಸಂತಸವಾಯಿತು. ನೀವು ಹೇಳಿದ ದಿನಾಂಕದಂದು ಬಂದು ಪಶುವೈದ್ಯಕೀಯ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎನ್ನುತ್ತಾ ಕಾರಿಗೆ ಬಳಿಗೇ ಬಂದು ಅವರ ಕ್ಷೇಮ ವಿಚಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್