ಹುಳಿಯಾರು: ಲಿಂಗಪ್ಪನಪಾಳ್ಯಕ್ಕೆ ಮೂಲಸೌಕರ್ಯ ಕಲ್ಪಿಸಿ
Team Udayavani, Jan 20, 2021, 4:27 PM IST
ಹುಳಿಯಾರು: ಪಪಂ ವ್ಯಾಪ್ತಿಯ ಲಿಂಗಪ್ಪನಪಾಳ್ಯ ಗ್ರಾಮಕ್ಕೆ ಮೂಲಸೌಕರ್ಯ ಕಲ್ಪಿಸುವಂತೆ ಇಲ್ಲಿನ ನಿವಾಸಿಗಳು ಒತ್ತಾಯಿಸಿದ್ದಾರೆ. ಸುಮಾರು 200 ಮನೆಗಳಿರುವ ಗ್ರಾಮದಲ್ಲಿ 650ಕ್ಕೂ ಹೆಚ್ಚು ಜನಸಂಖ್ಯೆ ಇದೆ. ಆದರೆ ರಸ್ತೆ, ನೀರು, ಬೀದಿ ದೀಪ, ಚರಂಡಿ ಸೇರಿದಂತೆ ಮೂಲ ಸೌಲಭ್ಯಗಳ ಕೊರತೆ ಇಲ್ಲಿದೆ. ಪಪಂ ವ್ಯಾಪ್ತಿಗೆ ಒಳಪಟ್ಟರೂ ಅಲ್ಲಿನ ಅಧಿಕಾರಿಗಳ ನಿರ್ಲಕ್ಷ್ಯದಿಂದ
ಸ್ಥಳೀಯರಿಗೆ ತೊಂದರೆಯಾಗಿದೆ.
ಇಡೀ ಗ್ರಾಮದಲ್ಲಿ ಮಾಡಿದ 2 ಸಿಮೆಂಟ್ ರಸ್ತೆಗಳು ಬಿಟ್ಟರೆ ಉಳಿದ ಕಡೆಯ ಕಲ್ಲುಮಣ್ಣಿನ ರಸ್ತೆಗಳಿವೆ. ಗ್ರಾಮದಲ್ಲಿ ಒಳಚರಂಡಿ ವ್ಯವಸ್ಥೆಯಿಲ್ಲದೆ ತ್ಯಾಜ್ಯ ನೀರು ಅಲ್ಲಲ್ಲಿ ನಿಂತಿದ್ದು, ಅನೈರ್ಮಲ್ಯಕ್ಕೆ ಕಾರಣವಾಗಿದೆ. ರಸ್ತೆಗೆ ಕೊಳಚೆ ನೀರು ಹರಿಯುತ್ತಿದ್ದರೂ ಪಪಂ ಸಿಬ್ಬಂದಿ ಸ್ವತ್ಛ ಮಾಡದ ಪರಿಣಾಮ ಮೂಗು ಮುಚ್ಚಿಕೊಂಡು ಜನ ಓಡಾಡುವಂತ್ತಾಗಿದೆ ಎಂದು ಗ್ರಾಮಸ್ಥರದೂರಿದ್ದಾರೆ.
ನೀರಿಗೆ ತತ್ವಾರ: ಶುದ್ಧ ಕುಡಿವ ನೀರಿನ ಘಟಕ ನಿರ್ಮಿಸಲು ದಶಕಗಳಿಂದ ಮನವಿ ಮಾಡಿದರೂ ಸ್ಪಂದಿಸದ ಪರಿಣಾಮ ಎರಡು ಮೂರು ಕಿ.ಮೀ. ದೂರ ಕ್ರಮಿಸಿ ಶುದ್ಧ ನೀರು ತರಬೇಕಿದೆ. ಅಲ್ಲದೆ ಗ್ರಾಪಂನಿಂದ ಅಸಮರ್ಪಕವಾಗಿ ನೀರು
ಪೂರೈಸುತ್ತಿರುವುದರಿಂದ ನಿತ್ಯವೂ ಅವರಿವರ ಜಮೀನಿನ ಕೊಳವೆ ಬಾವಿಯಲ್ಲಿ ಬೇಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅಳಲನ್ನು ತೋಡಿಕೊಂಡರು.
ಇದನ್ನೂ ಓದಿ:ಹೆದ್ದಾರಿ ಕಾಮಗಾರಿಗೆ ಕಲ್ಲುಸ್ಫೋಟ : ರಸ್ತೆ ಅಕ್ಕಪಕ್ಕದ ಮನೆಗಳ ಗೋಡೆಗಳು ಬಿರುಕು, ಆಕ್ರೋಶ
ಹುಳಿಯಾರು ಪಟ್ಟಣದ ಸಮೀಪದಲ್ಲಿರುವ ಹಿಂದುಳಿದ ವರ್ಗದವರು, ರೈತಾಪಿ ವರ್ಗದವರು, ಕೂಲಿ ಕಾರ್ಮಿಕರು ವಾಸಿಸುತ್ತಿರುವ ಈ ಗ್ರಾಮದ ಸಮಸ್ಯೆಗೆ ಜನಪ್ರತಿನಿಧಿಗಳೂ ಸ್ಪಂದಿಸುತ್ತಿಲ್ಲ. ಚುನಾವಣೆ ವೇಳೆ ಆಶ್ವಾಸನೆ ನೀಡಲು ಮಾತ್ರ
ರಾಜಕಾರಣಿಗಳು ಬರುತ್ತಾರೆ. ಚುನಾವಣೆಯಲ್ಲಿ ಗೆದ್ದ ತರವಾಯ ಇತ್ತ ತಿರುಗಿಯೂ ನೋಡುವುದಿಲ್ಲ ಎಂದು ಜನರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್