ಇಲ್ಲಿ ಕನಕರಾಯನಿಗೆ ಮದ್ಯವೇ ನೈವೇದ್ಯ!

ಇಷ್ಟಾರ್ಥ ಈಡೇರಿಕೆಗೆ ತಮಗಿಷ್ಟದ ಮದ್ಯ ಅರ್ಪಿಸಿ ಕೃತಾರ್ಥರಾದ ಭಕ್ತರು | ಇಂದು ಜಾತ್ರಾ ಮಹೋತ್ಸವ

Team Udayavani, Mar 15, 2023, 2:16 PM IST

gule

ಗುಳೇದಗುಡ್ಡ: ಸಮೀಪದ ಕೆಲವಡಿ-ಲಿಂಗಾಪುರ ಗ್ರಾಮದಲ್ಲಿ ಮಂಗಳವಾರ ನಡೆದ ಕನಕರಾಯರ ಜಾತ್ರೆಯಲ್ಲಿ ಭಕ್ತರು ನೆಚ್ಚಿನ ದೇವರಿಗೆ ಮದ್ಯ ನೈವೇದ್ಯ ಮಾಡಿದರಲ್ಲದೇ ಅರ್ಚಕರು ನೀಡಿದ ಮದ್ಯವನ್ನೇ ತೀರ್ಥವೆಂದು ಸ್ವೀಕರಿಸಿದರು. ಭಕ್ತರು ಬೆಳಿಗ್ಗೆಯಿಂದಲೇ ತಮಗಿಷ್ಟವಾದ ಮದ್ಯವನ್ನು ತಂದು ತಮ್ಮ ಇಷ್ಟಾರ್ಥ ನೆರವೇರಿಸಲು ಕನಕರಾಯನಿಗೆ ಭಕ್ತಿಯಿಂದ ಸಮರ್ಪಿಸಿದರು.

ಹಿನ್ನೆಲೆ: ಕೆಲವಡಿ ಗ್ರಾಮದ ಆರಾಧ್ಯ ದೈವ ಶ್ರೀ ಲಕ್ಷ್ಮೀ ರಂಗನಾಥಸ್ವಾಮಿ ದೇವರು ಹಾಗೂ ಕನಕರಾಯ ಅಣ್ಣ ತಮ್ಮಂದಿರು. ಈ ಇಬ್ಬರೂ ತೀರ್ಥ ಪ್ರಿಯರೆಂಬುದು ಇಲ್ಲಿನ ಭಕ್ತರ ನಂಬಿಕೆಯಾಗಿದೆ. ರಂಗನಾಥನಿಗೂ ಹಾಗೂ ಕನಕರಾಯನಿಗೂ ಯಾವುದೋ ವಿಷಯದಲ್ಲಿ ಮನಸ್ತಾಪ ಉಂಟಾಗಿ ಕನಕರಾಯ ಲಿಂಗಾಪೂರ-ಶಿರೂರ ಮಾರ್ಗದ ಮಧ್ಯ ನೆಲೆಸಿದ, ರಂಗನಾಥಸ್ವಾಮಿ ಕೆಲವಡಿ ಗ್ರಾಮದಲ್ಲಿ ನೆಲೆಸಿದನೆಂಬ ಪ್ರತೀತಿ ಇದೆ. ಪ್ರತಿವರ್ಷ ರಂಗನಾಥಸ್ವಾಮಿ ರಥೋತ್ಸವ ಎರಡು ದಿನ ಇರುವಾಗಲೇ ಹಂಸನೂರ ಅಮ್ಮನವರು ಕೆಲವಡಿ ಗ್ರಾಮಕ್ಕೆ ಬರುತ್ತಾರೆ. ರಂಗನಾಥಸ್ವಾಮಿ ತನ್ನ ಅಣ್ಣನಾದ ಕನಕರಾಯನನ್ನು ತನ್ನ ಜಾತ್ರೆಯ ಒಂದು ದಿನದ ಮುಂಚೆ ಜಾತ್ರೆಗೆ ಆಹ್ವಾನಿಸಲು
ಲಿಂಗಾಪೂರ-ಶಿರೂರ ಮಾರ್ಗದಲ್ಲಿನ ಕನಕರಾಯನ ಗುಡಿಗೆ ತೆರಳುತ್ತಾನೆಂಬುದು ಕೆಲವಡಿ, ಲಿಂಗಾಪೂರ ಗ್ರಾಮಸ್ಥರ ನಂಬಿಕೆಯಾಗಿದೆ.

ಕೆಲವಡಿಯ ಶ್ರೀ ಲಕ್ಷ್ಮೀ ರಂಗನಾಥ ಗುಡಿಯಿಂದ ಲಿಂಗಾಪುರ-ಶಿರೂರ ಮಾರ್ಗ ಮಧ್ಯದಲ್ಲಿ ಇರುವ ಕನಕರಾಯನ ಸನ್ನಿ ಧಿಗೆ ಭಕ್ತರು ಪಾಲಿಕೆಯನ್ನು ಮೆರವಣಿಗೆ ಮೂಲಕ ತಂದು ಪೂಜೆ ಮಾಡಿದ ನಂತರ ಭಕ್ತರು ಮದ್ಯದ ಪ್ರಸಾದ ಸ್ವೀಕರಿಸುತ್ತಾರೆ. ನಂತರ ಕನಕರಾಯನ ಗುಡಿಯಲ್ಲಿ ಭಕ್ತರು ಅನ್ನ ಸಂತರ್ಪಣೆ ಮಾಡುತ್ತಾರೆ.

ಬೇಡಿಕೆ ಈಡೇರಿಕೆಗೆ ಮದ್ಯ ನೈವೇದ್ಯ: ಕೆಲವಡಿ ರಂಗನಾಥ ಹಾಗೂ ಕನಕರಾಯರ ದೇವಸ್ಥಾನಗಳಿಗೆ ಬರುವ ಭಕ್ತರು ತಮ್ಮ ಕಷ್ಟಗಳು ನಿವಾರಣೆಯಾದರೆ ಅಥವಾ ದೇವರ ಸನ್ನಿ ಧಿಯಲ್ಲಿ ಭಕ್ತರು ಬೇಡಿಕೊಂಡ ಹರಕೆಗಳು ನೆರವೇರಿದರೆ ಇಂತಿಷ್ಟು ಮದ್ಯದ ಬಾಟಲಿಗಳನ್ನು ಸಮರ್ಪಿಸುವುದಾಗಿ ಬೇಡಿಕೊಳ್ಳುತ್ತಾರೆ. ಅದರಂತೆ ಭಕ್ತರು ತಮ್ಮ ಇಷ್ಟಾರ್ಥಗಳು ಈಡೇರಿದಾಗ ಇಲ್ಲಿಗೆ ಬಂದು ಮದ್ಯದ ಬಾಟಲಿಗಳನ್ನು ತಂದು ದೇವರಿಗೆ ನೈವೇದ್ಯ ಅರ್ಪಿಸಿ, ತಮ್ಮ ಹರಕೆ ತೀರಿಸುತ್ತಾರೆ. ಜಾತ್ರೆಗೆ ಇನ್ನು ಐದು ದಿನಗಳು ಬಾಕಿ ಇರುವಾಗ ಲಕ್ಷ್ಮೀರಂಗನಾಥ ದೇವಸ್ಥಾನದಲ್ಲಿ ನಿತ್ಯ ವಿವಿಧ ರೀತಿಯ ಮೆರವಣಿಗೆ ನಡೆದು ದೇವರಿಗೆ ಅಭಿಷೇಕ, ಅರ್ಚನೆ ನಡೆಯುತ್ತದೆ. ಬೇರೆ ಊರಿನಿಂದ ಬರುವ ಭಕ್ತರು ಉತ್ತಮ ದರದ ಮದ್ಯ ಹಿಡಿದು ಬಿಯರ್‌, ವಿಸ್ಕಿ, ರಮ್‌ ಹೀಗೆ ತಮ್ಮ ಭಕ್ತಿ ಹಾಗೂ ತಾವು ಸೇವಿಸುವ ಇಷ್ಟದ ಮದ್ಯವನ್ನು ತೆಗೆದುಕೊಂಡು ಹೋಗಿ ನೈವೇದ್ಯ ಅರ್ಪಿಸುತ್ತಾರೆ. ಕೆಲವಡಿ, ಲಿಂಗಾಪೂರ ಗ್ರಾಮಗಳಿಂದ ಕೆಲಸಕ್ಕಾಗಿ ಬೆಂಗಳೂರು, ಮಂಗಳೂರು, ಗೋವಾ ಮುಂತಾದ ಕಡೆಗಳಲ್ಲಿ ತೆರಳಿದ್ದ ಜನರು ತಪ್ಪದೇ ತಮ್ಮ ನೆಚ್ಚಿನ ದೇವರ ಜಾತ್ರೆಗೆ ಆಗಮಿಸುತ್ತಾರೆ.

„ಮಲ್ಲಿಕಾರ್ಜುನ ಕಲಕೇರಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.