ಜೀವ ರಕ್ಷಕರ ಬದುಕೇ ಈಗ ಜೀವಭಯದಲ್ಲಿ!
Team Udayavani, Jul 1, 2019, 3:07 AM IST
ಬೆಂಗಳೂರು: ಜೀವ ರಕ್ಷಕರೇ ಈಗ ಜೀವಭಯದಲ್ಲಿ ಬದುಕುವಂತಾಗಿದೆ. “ನಮಗೆ ನಿರ್ಭೀತಿಯಿಂದ ಕಾರ್ಯ ನಿರ್ವಹಿಸುವ ವಾತಾವರಣ ನಿರ್ಮಿಸಿ ಕೊಡಿ’ ಎಂದು ಕೇಳುವ ಪರಿಸ್ಥಿತಿ ಎದುರಾಗಿದೆ. ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ವೈದ್ಯರ ಮೇಲಿನ ಹಲ್ಲೆ ಪ್ರಕರಣಗಳೇ ಇದಕ್ಕೆ ಸಾಕ್ಷಿ.
ರಾಜ್ಯದಲ್ಲಿ ವೈದ್ಯರ ಮೇಲಿನ ಹಲ್ಲೆ ಕುರಿತು ಪ್ರತ್ಯೇಕ ಕಾನೂನು ಜಾರಿಯಾಗಿ ದಶಕ ಕಳೆದಿದೆ. ಈ ಪೈಕಿ ವೈದ್ಯರ ಮೇಲಿನ ಹಲ್ಲೆ ಪ್ರಕರಣಗಳ ಸಂಖ್ಯೆ 250ಕ್ಕೂ ಅಧಿಕ. ಆದರೆ, ಇದರಲ್ಲಿ ಶಿಕ್ಷೆಗೊಳಗಾದವರ ಸಂಖ್ಯೆ ಬೆರಳೆಣಿಕೆಯಷ್ಟು ಮಾತ್ರ. ಈ ಮಧ್ಯೆ ರಾಜ್ಯದಲ್ಲಿ 2009ರಲ್ಲಿ ಪ್ರತ್ಯೇಕ ಕಾನೂನು ಜಾರಿಯಾದರೂ ವರ್ಷದಿಂದ ವರ್ಷಕ್ಕೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆ ಮುಖ್ಯ ಕಾರಣ, ಸೂಕ್ತ ರೀತಿಯಲ್ಲಿ ಕಾನೂನು ಜಾರಿಯಾಗದಿರುವುದು ಎಂದು ಭಾರತೀಯ ವೈದ್ಯಕೀಯ ಸಂಘದ ಆರೋಪ.
ಕಾನೂನು ಯಾಕೆ ಜಾರಿಯಾಗಿಲ್ಲ?: 2009ರಲ್ಲಿ ರಾಜ್ಯದಲ್ಲಿ ವೈದ್ಯರ ಮೇಲಿನ ಹಲ್ಲೆ ಕುರಿತು ಪ್ರತ್ಯೇಕ ಕಾನೂನು ಜಾರಿಗೊಳಿಸಿ, 3 ವರ್ಷ ಜೈಲು ಶಿಕ್ಷೆ ನಿಗದಿ ಪಡಿಸಲಾಗಿತ್ತು. ಆ ವೇಳೆ 3 ವರ್ಷದ ಜೈಲು ಶಿಕ್ಷೆ ಜಾಮೀನು ರಹಿತವಾಗಿತ್ತು. ಬಳಿಕ ಶಿಕ್ಷೆ ಪ್ರಮಾಣ, 7 ವರ್ಷಕ್ಕೆ ಹೆಚ್ಚಿಸಲಾಯಿತು. ಆದರೆ, ಜಾಮೀನು ಲಭ್ಯವಾಗುವಂತೆ ತಿದ್ದುಪಡಿ ತರಲಾಯಿತು. ಬಳಿಕ ಕಾನೂನು ತಿದ್ದುಪಡಿಗೆ ಯಾವ ಸರ್ಕಾರವೂ ಮುಂದಾಗಲಿಲ್ಲ ಎಂಬುದು ಭಾರತೀಯ ವೈದ್ಯಕೀಯ ಸಂಘದ ಅಳಲು.
2010 ರಿಂದ ಕಳೆದ ವರ್ಷದವರೆಗೂ ಒಟ್ಟು 254 ಪ್ರಕರಣ ದಾಖಲಾಗಿದ್ದು, 2010 - 04, 2011 -07, 2012 -16, 2013 -35, 2014-24, 2015 -40, 2016-31, 2017-51, 2018-45 ಪ್ರಕರಣಗಳು ದಾಖಲಾಗಿವೆ.
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಯಂ ವೈದ್ಯರಾಗಿ ಸುಮಾರು 4,750 ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೇ 1,04,795 ನೋಂದಾಯಿತ ವೈದ್ಯರು, 75 ಸಾವಿರಕ್ಕೂ ಹೆಚ್ಚು ಐಎಂಎ ನೋಂದಾಯಿತ ವೈದ್ಯರಿದ್ದಾರೆ. ಬೆಂಗಳೂರಿನಲ್ಲಿಯೇ 20 ಸಾವಿರಕ್ಕೂ ಅಧಿಕ ವೈದ್ಯರಿದ್ದಾರೆ. ರಾಜ್ಯದಲ್ಲಿ ವೈದ್ಯರ ಮೇಲಿನ ಹಲ್ಲೆಗೆ ಕಠಿಣ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸದಿರುವುದರಿಂದ ಇವರೆಲ್ಲರಿಗೂ ಕಾನೂನಿನ ವ್ಯಾಪ್ತಿಯಲ್ಲಿ ಭದ್ರತೆ ಇಲ್ಲದಂತಾಗಿದೆ.
ಕುಸಿತ: ವೈದ್ಯರ ಮೇಲಿನ ಹಲ್ಲೆ ಪ್ರವೃತ್ತಿ ಮುಂದೊಂದು ದಿನ ವೈದ್ಯರೊಳಗಿನ ಸೇವಾ ಮನೋಭಾವವನ್ನೇ ಮರೆಸುತ್ತದೆ ಎನ್ನುವುದು ಹಿರಿಯ ವೈದ್ಯರ ಅನಿಸಿಕೆ. ಮೆಟ್ರೋ ನಗರಗಳಲ್ಲೇ ವೈದ್ಯರಿಗೆ ರಕ್ಷಣೆ ಇಲ್ಲದ ವಾತಾವರಣವಿದೆ. ಇನ್ನು ತಾಲೂಕು, ಹಳ್ಳಿ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಸೇವೆ ಸಲ್ಲಿಸುವ ವೈದ್ಯರು ಯಾವ ಧೈರ್ಯದ ಮೇಲೆ ಕಾರ್ಯ ನಿರ್ವಹಿಸಬೇಕು ಎಂಬ ಪ್ರಶ್ನೆ ತಲೆದೂರಿದ್ದು, ವೈದ್ಯಕೀಯ ವಿದ್ಯಾರ್ಥಿಗಳು ಕಡ್ಡಾಯ ಗ್ರಾಮೀಣ ಸೇವೆಯಿಂದ ದೂರ ಉಳಿಯುತ್ತಿದ್ದಾರೆ ಎಂಬುದು ಐಎಂಎ ವೈದ್ಯರ ಅಭಿಪ್ರಾಯ.
ಆರೋಪಿಗಳು ಪಾರು: ಇನ್ನು, ವೈದ್ಯರ ಮೇಲೆ ನಿಂದನೆ, ಬೆದರಿಕೆಯಂತಹ ಸಾವಿರಾರು ಪ್ರಕರಣಗಳಿವೆ. ಹಲ್ಲೆ, ಬೆದರಿಕೆ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದರೆ ಸದ್ಯ ಇರುವ ಕಾನೂನಿನಡಿ ಜಾಮೀನು ಪಡೆದು ಹೊರಬರುತ್ತಾರೆ. ಕೆಲವು ಬಾರಿ ರಾಜಕಾರಣಿಗಳು ಮತ್ತಿತರರಿಂದ ಲಾಬಿ ಮಾಡಿಸಿ ಹೊರಬರುತ್ತಾರೆ ಎಂದು ವೈದ್ಯರು ಹೇಳುತ್ತಾರೆ.
13,556 ಮಂದಿಗೆ ಒಬ್ಬ ಸರ್ಕಾರಿ ವೈದ್ಯ: ರಾಷ್ಟ್ರೀಯ ಆರೋಗ್ಯ ವರದಿ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ 13,556 ಜನಕ್ಕೆ ಒಬ್ಬ ಸರ್ಕಾರಿ ವೈದ್ಯರಿದ್ದಾರೆ. ಹಲ್ಲೆ ಪ್ರಕರಣಗಳು ಸರ್ಕಾರಿ ಸೇವೆಗೆ ಬರಲು ವೈದ್ಯರು ಹಿಂದೇಟು ಹಾಕಲು ಕಾರಣ ಎಂಬ ಮಾತುಗಳಿವೆ.
ವೈದ್ಯರ ಮೇಲಿನ ಹಲ್ಲೆ ಪ್ರಕರಣಗಳಲ್ಲಿ ಶಿಕ್ಷೆಯಾಗಿರುವುದು ತೀರ ಕಡಿಮೆ. ಹಲ್ಲೆ ಮಾಡಿದವರು ಪ್ರಭಾವಿಗಳು, ರಾಜಕಾರಣಿಗಳಿಂದ ಲಾಬಿ ಮಾಡಿಸುತ್ತಾರೆ. ಸದ್ಯ ಆರೋಪಿಗೆ ಜಾಮೀನು ಲಭ್ಯವಿರುವುದರಿಂದ ವೈದ್ಯರು ಕೂಡ ಕೋರ್ಟ್ ಅಲೆದಾಟ ಯಾಕೆ ಎಂದು ರಾಜಿ ಮಾಡಿಕೊಳ್ಳುತ್ತಿದ್ದಾರೆ. ವೈದ್ಯರ ಮೇಲಿನ ಹಲ್ಲೆಗೆ ಏಳು ವರ್ಷದ ಜಾಮೀನು ರಹಿತ ಶಿಕ್ಷೆ ಜಾರಿಯಾಗಬೇಕು.
-ಎಸ್.ಶ್ರೀನಿವಾಸ. ಕಾರ್ಯದರ್ಶಿ, ಭಾರತೀಯ ವೈದ್ಯಕೀಯ ಸಂಘ, ರಾಜ್ಯ ಘಟಕ
* ಜಯಪ್ರಕಾಶ್ ಬಿರಾದಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್