ಬರ ಪ್ರದೇಶದ‌ಲ್ಲಿ ಜಾನುವಾರು ಶಿಬಿರ

ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿಗೆ ನಿರ್ಧಾರದ ಅಧಿಕಾರ

Team Udayavani, Nov 29, 2019, 3:07 AM IST

dd-62

ಬೆಂಗಳೂರು: ಬರಪೀಡಿತ ಪ್ರದೇಶಗಳಲ್ಲಿ ಈಗಾಗಲೇ ತೆರೆಯಲಾಗಿರುವ ಜಾನುವಾರು ಶಿಬಿರಗಳನ್ನು ಮುಚ್ಚುವ ಮತ್ತು ಈಗ ಮುಂಗಾರು ಹಂಗಾಮಿನಲ್ಲಿ ಬರಪೀಡಿತ ಎಂದು ಘೋಷಿಸಲಾಗಿರುವ ತಾಲೂಕುಗಳಲ್ಲಿ ಜಾನುವಾರು ಶಿಬಿರಗಳನ್ನು ತೆರೆಯುವ ಬಗ್ಗೆ ಪ್ರಕೃತಿ ವಿಕೋಪ ಪರಿಸ್ಥಿತಿ ನಿರ್ವಹಿಸುವ ನಿಟ್ಟಿನಲ್ಲಿ ರಚಿಸಲಾಗಿರುವ ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿಯೇ ತೀರ್ಮಾನ ಕೈಗೊಳ್ಳಲಿ ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಸಲಹೆ ನೀಡಿದೆ.

ಹೈಕೋರ್ಟ್‌ನ ಕಾನೂನು ಸೇವೆಗಳ ಸಮಿತಿ ಮತ್ತು ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದ ಎ. ಮಲ್ಲಿಕಾರ್ಜುನ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿರುವ ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ, ಈ ಸಲಹೆ ನೀಡಿತು. ಅದಕ್ಕೆ ಸರಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಧ್ಯಾನ್‌ ಚಿನ್ನಪ್ಪ ಸಮ್ಮತಿ ವ್ಯಕ್ತಪಡಿಸಿದರು.

ಹೈಕೋರ್ಟ್‌ ಸಲಹೆ
ವಿಚಾರಣೆ ವೇಳೆ, ಜಾನುವಾರು ಶಿಬಿರಗಳ ಸ್ಥಿತಿಗತಿ ಬಗ್ಗೆ ನ್ಯಾಯಪೀಠ ಪ್ರಶ್ನಿಸಿತು. ಆಗ ಕೆಲವು ಕಡೆ ಜಿಲ್ಲಾಧಿಕಾರಿಗಳ ವರದಿಯಂತೆ ಜಾನುವಾರು ಶಿಬಿರಗಳನ್ನು ಮುಚ್ಚಲಾಗಿದೆ ಎಂದು ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಉತ್ತರಿಸಿದರು. ಅದಕ್ಕೆ ಜಿಲ್ಲಾಧಿಕಾರಿಗಳಿಗೆ ಆ ಅಧಿಕಾರ ಕೊಟ್ಟವರು ಯಾರು? ಒಂದೊಮ್ಮೆ ಜಾನುವಾರು ಶಿಬಿರ ತೆರೆಯುವ ಮತ್ತು ಮುಚ್ಚುವ ತೀರ್ಮಾನ ರಾಜ್ಯ ಕಾರ್ಯಕಾರಿ ಸಮಿತಿ ಕೈಗೊಂಡರೆ ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ. ಕಾರ್ಯಕಾರಿ ಸಮಿತಿ ಈ ತೀರ್ಮಾನ ಕೈಗೊಳ್ಳಲು “ವಿಪತ್ತು ನಿರ್ವಹಣಾ ಕಾಯ್ದೆ-2005’ಯಲ್ಲೂ ಅವಕಾಶವಿದೆಯಲ್ಲ ಎಂದು ನ್ಯಾಯಪೀಠ ಹೇಳಿತು.

ಮುಂದಿನ ದಿನಗಳಲ್ಲಿ ಇದ ರಂತೆಯೇ ನಡೆದುಕೊಳ್ಳಲಾಗುವುದು ಎಂದು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಭರವಸೆ ನೀಡಿದರು. ಉಳಿ ದಂತೆ, ಮುಂಗಾರು ಹಂಗಾಮಿ ನಲ್ಲಿ 49 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ನ್ಯಾಯಾಧೀಶರ ಪ್ರಶ್ನೆಗೆ ಉತ್ತರಿಸಿದರು.

ಬರಪೀಡಿತ ಪ್ರದೇಶಗಳಲ್ಲಿ ತೆರೆಯಲಾಗಿದ್ದ ಜಾನುವಾರು ಶಿಬಿರಗಳನ್ನು ಮುಚ್ಚಿದ್ದರೆ, ಅವುಗಳ ಸ್ಥಿತಿಗತಿಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡು, ಒಂದು ವೇಳೆ ಜಾನುವಾರು ಶಿಬಿರಗಳನ್ನು ಮುಚ್ಚಿರುವುದಕ್ಕೆ ಸಮರ್ಪಕ ಕಾರಣಗಳು ಇಲ್ಲದಿದ್ದರೆ, ಅಂಥ ಕಡೆ ಶಿಬಿರಗಳನ್ನು ಪುನರ್‌ ಸ್ಥಾಪಿಸುವ ಬಗ್ಗೆಯೂ ಕಾರ್ಯಕಾರಿ ಸಮಿತಿ ತೀರ್ಮಾನ ಕೈಗೊಳ್ಳಬೇಕು ಎಂದು ನ್ಯಾಯಪೀಠ ಹೇಳಿತು.

ಅನುಪಾಲನ ವರದಿ ಸಲ್ಲಿಕೆಗೆ ಸೂಚನೆ
ವಿಪತ್ತು ನಿರ್ವಹಣ ಕಾಯ್ದೆ-2005ರ ಅನುಷ್ಠಾನ, ಕಾಯ್ದೆಗೆ ಪೂರಕವಾಗಿ ನಿಯಮಗಳನ್ನು ರೂಪಿಸಿರುವ ಬಗ್ಗೆ ಹಾಗೂ ರಾಜ್ಯ ಮತ್ತು ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣ ಪ್ರಾಧಿಕಾರಗಳ ಕಾರ್ಯಚರಣೆ, ರಾಜ್ಯ ಮತ್ತು ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣೆ ಮತ್ತು ವಿಪತ್ತು ಉಪಶಮನ ನಿಧಿ ಸ್ಥಾಪನೆ, ನಿಧಿಯಲ್ಲಿರುವ ಹಣ, ಈವರೆಗೆ ಎಷ್ಟು ಖರ್ಚಾಗಿದೆ ಸೇರಿಕೊಂಡಂತೆ ವಿಪತ್ತು ನಿರ್ವಹಣ ಕಾಯ್ದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೋರ್ಟ್‌ ನೀಡಿರುವ ಆದೇಶಗಳ ಅನುಪಾಲನಾ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಡಿ.17ಕ್ಕೆ ಮುಂದೂಡಿತು.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.