Karnataka: ರಾಜ್ಯದಲ್ಲಿ ಲೋಡ್‌ಶೆಡ್ಡಿಂಗ್‌: ಜಾರ್ಜ್‌


Team Udayavani, Sep 5, 2023, 11:52 PM IST

george

ಬೆಂಗಳೂರು: ಒಂದೆಡೆ ಕೈಕೊಟ್ಟ ಮಳೆ. ಮತ್ತೂಂದೆಡೆ ಸಾಮಾನ್ಯವಾಗಿ ಬೇಸಗೆಯಲ್ಲಿ ಇರುವಷ್ಟು ವಿದ್ಯುತ್‌ ಬೇಡಿಕೆ ಈಗಲೇ ಎದುರಾಗಿದೆ. ಇದೇ ಸ್ಥಿತಿ ಮುಂದುವರಿದರೆ, ರಾಜ್ಯದಲ್ಲಿ ಲೋಡ್‌ಶೆಡ್ಡಿಂಗ್‌ ಅನಿವಾರ್ಯ ಆಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

ಮಳೆಯೂ ಬಾರದೆ, ವಿದ್ಯುತ್‌ ಕೊರತೆ ಹೀಗೇ ಮುಂದುವರಿದರೆ ಅಧಿಕೃತವಾಗಿ ಲೋಡ್‌ಶೆಡ್ಡಿಂಗ್‌ ಮಾಡಬೇಕಾಗುತ್ತದೆ. ಆದರೆ, ಆ ಸಂದರ್ಭ ಸದ್ಯಕ್ಕಿಲ್ಲ. ಅಂತಹ ಸ್ಥಿತಿ ಬಾರದಿರಲಿ ಅಂತ ನಾವು ಕೂಡ ಪ್ರಾರ್ಥಿಸುತ್ತೇವೆ ಎಂದು ಅವರು ತಿಳಿಸಿದರು.

ನಗರದ ಮಲ್ಲೇಶ್ವರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಭೂಗತ ಪರಿವರ್ತಕ ಕೇಂದ್ರಕ್ಕೆ ಚಾಲನೆ ನೀಡಿದ ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಕೊರತೆಯಿಂದ ಅನಿರೀಕ್ಷಿತವಾಗಿ ಬೇಡಿಕೆ ಹೆಚ್ಚಳವಾಗಿದೆ. ಕಳೆದ ಒಂದು ವಾರದಿಂದ ಸಮಸ್ಯೆ ಆಗಿದ್ದು ನಿಜ. ಉತ್ಪಾದನೆಯಲ್ಲಿ 17 ಮಿ.ಯೂ. ಕಡಿಮೆ ಆಗಿತ್ತು. ಇಂತಹ ಸಂದರ್ಭದಲ್ಲಿ ಇದನ್ನು ನಮ್ಮ ಎಂಜಿನಿಯರ್‌ಗಳು ಸಮತೋಲನ ಮಾಡಬೇಕಾಗುತ್ತದೆ. ಆಗ ತಾತ್ಕಾಲಿಕ ವಾಗಿ ಕಡಿತಗೊಂಡಿರುತ್ತದೆ ಎಂದವರು ಹೇಳಿದರು.

ವಿದ್ಯುತ್‌ ಕಡಿತ; ಅಭಿವೃದ್ಧಿಗೆ ಹಿನ್ನಡೆ
ಸ್ವತಃ ಇಂಧನ ಸಚಿವರು ಕರೆಂಟ್‌ ಕಣ್ಣಾಮುಚ್ಚಾಲೆ ಆಗುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ. ಪ್ರಕೃತಿ, ಪರಿಸರ ಅಂತಹ ಅಸಹಾಯಕತೆ ತೋಡಿಕೊಂಡಿದ್ದಾರೆ. ಎಲ್ಲಿ ಹೆಚ್ಚುವರಿ ಇರುತ್ತದೆಯೋ ಅಲ್ಲಿಂದ ತಂದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಮಾಜಿ ಸಚಿವ ಡಾ| ಸಿ.ಎನ್‌. ಅಶ್ವತ್ಥ ನಾರಾಯಣ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದಲ್ಲಿ ವಿದ್ಯುತ್‌ ಕಡಿತ ತುಂಬಾ ಆಗುತ್ತಿದೆ. ಗ್ರಾಮೀಣ ಭಾಗದಲ್ಲಿ ಕೇವಲ ಮೂರು ತಾಸು ಮಾತ್ರ ರೈತರಿಗೆ ಕರೆಂಟ್‌ ಸಿಗುತ್ತಿದೆ. ನಗರ ಭಾಗದಲ್ಲೂ ಸ್ಥಿತಿ ಇದಕ್ಕಿಂತ ಭಿನ್ನವಾಗಿದೆ. ವಿದ್ಯುತ್‌ ಕಡಿತದಿಂದ ಹೂಡಿಕೆದಾರರಿಗೆ, ತಂತ್ರಜ್ಞಾನ ಕ್ಷೇತ್ರಕ್ಕೆ ಹಿನ್ನಡೆ ಆಗುವ ಸಾಧ್ಯತೆ ಇದೆ. ಆದ್ದರಿಂದ ಕೂಡಲೇ ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದರು.

ಸರಕಾರದಿಂದ ಕತ್ತಲೆ ಭಾಗ್ಯ
ಬೆಂಗಳೂರು: ಬೇಡಿಕೆಗೆ ತಕ್ಕಷ್ಟು ವಿದ್ಯುತ್‌ ಉತ್ಪಾದನೆ ಮತ್ತು ಪೂರೈಕೆ ಮಾಡುವಲ್ಲಿ ವಿಫ‌ಲವಾಗಿರುವ ರಾಜ್ಯ ಸರಕಾರ, ದುಬಾರಿ ಬೆಲೆ ತೆತ್ತು ವಿದ್ಯುತ್‌ ಖರೀದಿಸಿದರೂ ಕತ್ತಲೆ ಕರ್ನಾಟಕದ ಭಾಗ್ಯವನ್ನು ನೀಡುತ್ತಿದೆ ಎಂದು ಮಾಜಿ ಸಚಿವ ವಿ. ಸುನಿಲ್‌ ಕುಮಾರ್‌ ಆರೋಪಿಸಿದರು. ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಹಿಂದೆ ನಮ್ಮ ಸರಕಾರ ಇದ್ದಾಗ ರಾಜ್ಯದಲ್ಲಿ ಹೆಚ್ಚುವರಿ ವಿದ್ಯುತ್‌ ಉತ್ಪಾದಿಸಿ ಗ್ರಿಡ್‌ಗೆ ನೀಡುವಷ್ಟು ಸಾಮರ್ಥ್ಯವಿತ್ತು. ಇದೀಗ ಬೇಡಿಕೆಗೆ ತಕ್ಕಷ್ಟು ಉತ್ಪಾದನೆಯೂ ಆಗುತ್ತಿಲ್ಲ, ಬೇಡಿಕೆ ಹಾಗೂ ಪೂರೈಕೆ ನಡುವೆಯೂ ಸಾಕಷ್ಟು ವ್ಯತ್ಯಾಸವಿದೆ ಎಂದರು.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.