ಲೋಕಲ್‌ ಎಲೆಕ್ಷನ್‌ “ಡೋಲಾಯಮಾನ’


Team Udayavani, Sep 30, 2019, 3:10 AM IST

local

ಬೆಂಗಳೂರು: ಮೀಸಲಾತಿ “ಗೊಂದಲ’ ಎದುರಿ ಸುತ್ತಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇದೀಗ ಅನರ್ಹ ಶಾಸಕರ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ “ಗುಮ್ಮ’ ಎದುರಾಗಿದೆ. ರಾಜ್ಯದ 15 ಕ್ಷೇತ್ರಗಳ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಡಿ.5ರಂದು ಚುನಾವಣೆ ನಿಗದಿ ಪಡಿಸಿ ವೇಳಾಪಟ್ಟಿ ಪ್ರಕಟಿಸಿದ್ದರಿಂದ 2019ರ ಡಿಸೆಂಬರ್‌ನಲ್ಲಿ ಅವಧಿ ಮುಕ್ತಾಯವಾಗಲಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸ್ಥಿತಿ “ಡೋಲಾಯಮಾನ’ ಆಗಿದೆ.

ರಾಜ್ಯದ ಒಟ್ಟು 274 ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಈ ವರ್ಷಾಂತ್ಯಕ್ಕೆ ಅವಧಿ ಪೂರ್ಣಗೊಳ್ಳಲಿರುವ 106 ಸಂಸ್ಥೆಗಳ ಪೈಕಿ 44 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕಿದೆ. ಆದರೆ, ಉಪ ಚುನಾವಣೆಯ ಘೋಷಣೆ ರಾಜ್ಯ ಚುನಾವಣಾ ಆಯೋಗವನ್ನು ಇಕ್ಕಟ್ಟಿನ ಸ್ಥಿತಿಗೆ ತಂದಿಟ್ಟಿದೆ. ಚುನಾವಣೆ ನಡೆಸಬೇಕಿರುವ 44 ನಗರ ಸ್ಥಳೀಯ ಸಂಸ್ಥೆಗಳ ಪೈಕಿ ನ್ಯಾಯಾಲಯದಲ್ಲಿ ವ್ಯಾಜ್ಯ ಇತ್ಯರ್ಥಗೊಂಡಿರುವ 17 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಈ ಮಧ್ಯೆ, ನ್ಯಾಯಾಲಯದಲ್ಲಿ ಪ್ರಕರಣ ಬಾಕಿಯಿರುವ 26 ನಗರ ಸ್ಥಳೀಯ ಸಂಸ್ಥೆಗಳ ವಿಚಾರವಾಗಿ ರಾಜ್ಯ ಸರ್ಕಾರದ ಜತೆಗೆ ಪತ್ರ ವ್ಯವಹಾರ ನಡೆಸಲಾಗುತ್ತಿದೆ. ಎಲ್ಲ ಸೇರಿ ಒಂದೇ ಬಾರಿಗೆ ಚುನಾವಣೆ ನಡೆಸಬೇಕು ಎಂಬುದು ಆಯೋಗದ ಚಿಂತನೆಯಾಗಿದೆ. ವಿಧಾನಸಭಾ ಚುನಾವಣೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಸಂಸ್ಥೆಗಳು ಬೇರೆ, ಬೇರೆ ಆಗಿದ್ದರೂ, ಆಡಳಿತಾತ್ಮಕ ಸಮಸ್ಯೆಗಳು ಎದುರಾಗುತ್ತವೆ.

ಚುನಾವಣೆ ನಡೆಯಬೇಕಿರುವ 44 ಸ್ಥಳೀಯ ಸಂಸ್ಥೆಗಳಲ್ಲಿ ಕೆಲವು ಕಡೆ ಆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಇದೆ. ಅದೇ ರೀತಿ, ವಿಧಾನ ಸಭಾ ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಹಲವು ಕಡೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಬೇಕಿದೆ. ಒಂದೇ ಕಡೆ ಏಕಕಾಲಕ್ಕೆ ಅಥವಾ ಕಡಿಮೆ ದಿನಗಳ ಅಂತರದಲ್ಲಿ ಎರಡೆರಡು ಚುನಾವಣೆ ನಡೆಸುವುದು ಕಷ್ಟ. ಇದು ಚುನಾವಣಾ ಸಿದ್ಧತೆ, ನೀತಿ ಸಂಹಿತೆ ಜಾರಿ ಇತ್ಯಾದಿ ಕಾನೂನು ಮತ್ತು ಆಡಳಿತಾತ್ಮಕ ಗೊಂದಲಗಳಿಗೆ ಕಾರಣವಾಗುತ್ತದೆ.

ಮೀಸಲಾತಿ ಗೊಂದಲದಿಂದ ವಿಳಂಬ: ಮೀಸಲಾತಿ ಗೊಂದಲ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾ ವಣೆ ವಿಳಂಬಕ್ಕೆ ಅವಿನಾಭಾವ ಸಂಬಂಧ ಇದ್ದಂತಿದೆ. ಚುನಾವಣೆಗೆ ಮೊದಲು ವಾರ್ಡ್‌ವಾರು ಮೀಸಲಾತಿ ಮತ್ತು ಚುನಾವಣೆ ನಂತರದ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ವಿವಾದ ನ್ಯಾಯಾಲಯದ ಅಂಗಳಕ್ಕೆ ಹೋಗಿ ಬರುವುದು ನಿಶ್ಚಿತ. ಪ್ರಮುಖವಾಗಿ ಇದೇ ವಿಚಾರ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಚುನಾಯಿತ ಪ್ರತಿನಿಧಿಗಳ ಆಡಳಿತ ವ್ಯವಸ್ಥೆ ಜಾರಿಗೆ ಬರಲು ವಿಳಂಬವಾಗುತ್ತದೆ.

ರಾಜ್ಯದಲ್ಲಿ 10 ಮಹಾನಗರ ಪಾಲಿಕೆಗಳು, 54 ನಗರಸಭೆಗಳು, 116 ಪುರಸಭೆ ಹಾಗೂ 90 ಪಟ್ಟಣ ಪಂಚಾಯಿತಿಗಳು ಸೇರಿ ಒಟ್ಟು 274 ನಗರ ಸ್ಥಳೀಯ ಸಂಸ್ಥೆಗಳಿವೆ. ಇದರಲ್ಲಿ ಮೊದಲ ಹಂತದಲ್ಲಿ 2018ರ ಆಗಸ್ಟ್‌ನಲ್ಲಿ 109 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾ ವಣೆ ನಡೆದಿತ್ತು. ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ವಿವಾದ ಕೋರ್ಟ್‌ನಲ್ಲಿ ಬಾಕಿ ಇರುವುದರಿಂದ ವರ್ಷ ಕಳೆದರೂ, ಈ ಸಂಸ್ಥೆಗಳಲ್ಲಿ ಚುನಾಯಿತ ಜನಪ್ರತಿನಿಧಿಗಳ ಆಡಳಿತ ವ್ಯವಸ್ಥೆ ಜಾರಿಗೆ ಬಂದಿಲ್ಲ.

ಅದೇ ರೀತಿ, 2019ರ ಮಾರ್ಚ್‌, ಜೂನ್‌ ಮತ್ತು ಡಿಸೆಂಬರ್‌ನಲ್ಲಿ ಅವಧಿ ಪೂರ್ಣಗೊಳ್ಳಲಿರುವ 106 ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಈಗಾಗಲೇ ಈ ವರ್ಷದ ಮೇ ತಿಂಗಳಲ್ಲಿ 63 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿದೆ. ಆದರೆ, ಮೀಸಲಾತಿ ವಿವಾದ ದಿಂದಾಗಿ ಇಲ್ಲಿಯೂ ಜನಪ್ರತಿನಿಧಿಗಳ ಕೈಗೆ ಆಡಳಿತ ಸಿಕ್ಕಿಲ್ಲ. ಇನ್ನು, ಚುನಾವಣೆ ನಡೆಯಬೇಕಿರುವ 44 ಸ್ಥಳೀಯ ಸಂಸ್ಥೆಗಳ ಪೈಕಿ ವಾರ್ಡ್‌ವಾರು ಮೀಸಲಾತಿ ಪ್ರಶ್ನಿಸಿದ್ದ ಪ್ರಕರಣದಲ್ಲಿ 17 ನಗರ ಸ್ಥಳೀಯ ಸಂಸ್ಥೆಗಳ ವ್ಯಾಜ್ಯವನ್ನು ಹೈಕೋರ್ಟ್‌ ಇತ್ಯರ್ಥಪಡಿಸಿದೆ. ಇನ್ನುಳಿದ 26 ಸಂಸ್ಥೆಗಳ ಮೀಸಲಾತಿ ವಿವಾದ ಹೈಕೋರ್ಟ್‌ ನಲ್ಲಿ ವಿಚಾರಣೆಗೆ ಬಾಕಿ ಇದೆ.

ಒಟ್ಟು 44 ಕಡೆ ಚುನಾವಣೆ ನಡೆಯಬೇಕಿದೆ. ಇದರಲ್ಲಿ 17 ಕಡೆಗಳಲ್ಲಿ ನ್ಯಾಯಾಲಯದಿಂದ ಒಪ್ಪಿಗೆ ಸಿಕ್ಕಿದೆ. ಎಲ್ಲ ಸೇರಿಸಿ ಚುನಾವಣೆ ನಡೆಸಬೇಕು ಎಂದು ಇನ್ನುಳಿದವುಗಳ ಬಗ್ಗೆ ಕಾಯುತ್ತಿದ್ದೇವೆ. ಈ ಮಧ್ಯೆ, ವಿಧಾನಸಭೆಗೆ ಉಪಚುನಾವಣೆ ಘೋಷಣೆಯಾಗಿದೆ. ಇದು ನಮಗೆ ಸಮಸ್ಯೆ ಆಗಲಿಕ್ಕಿಲ್ಲ ಅಂದುಕೊಂಡಿದ್ದೇವೆ. ಆದರೂ, ಎಲ್ಲವನ್ನೂ ನೋಡಿಕೊಂಡು ಮುಂದುವರಿಯುತ್ತೇವೆ.
-ಬಿ. ಬಸವರಾಜು, ರಾಜ್ಯ ಚುನಾವಣಾ ಆಯುಕ್ತ

* ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.