ಲಾಕ್ಡೌನ್ ಸಡಿಲಿಕೆಯಾಗಿ ಮೂರು ದಿನ ವಹಿವಾಟು ಯಥಾಸ್ಥಿತಿಗೆ
Team Udayavani, May 7, 2020, 5:35 AM IST
ಉಡುಪಿ: ಲಾಕ್ಡೌನ್ ಸಡಿಲಿಕೆಯಾಗಿ ಎರಡನೇ ದಿನವಾದ ಬುಧವಾರ ನಗರದಲ್ಲಿ ಜನಸಂಚಾರ ಸಾಮಾನ್ಯವಾಗಿದ್ದು, ಅಂಗಡಿ ಮುಂಗಟ್ಟುಗಳ ವ್ಯಾಪಾರ ಯಥಾಸ್ಥಿತಿಗೆ ಮರಳಿದೆ.
ಬುಧವಾರ ಬೆಳಗ್ಗೆ 7ರಿಂದ ಸಂಜೆ 7ವರೆಗೆ ಎಲೆಕ್ಟ್ರಾನಿಕ್, ಚಿನ್ನಾಭರಣ ಮಳಿಗೆ, ಬಟ್ಟೆ ಮಳಿಗೆ ತೆರೆಯಲು ಅವಕಾಶ ನೀಡಿರುವುದರಿಂದ ಜನರು ಸರತಿ ಸಾಲಿನಲ್ಲಿ ಕಾದು ವಸ್ತುಗಳನ್ನು ಖರೀದಿಸುತ್ತಿರುವುದು ಕಂಡು ಬಂತು.
ದಿನಸಿ-ತರಕಾರಿ ಖರೀದಿ ವಿರಳ
ಒಂದೂವರೆ ತಿಂಗಳಲ್ಲಿ ಲಾಕ್ಡೌನ್ ಬಳಿಕ ಇದೇ ಮೊದಲ ಬಾರಿಗೆ ಉಡುಪಿ ನಗರದಲ್ಲಿ ದಿನಸಿ ಹಾಗೂ ತರಕಾರಿ ಖರೀದಿಸುವವರ ಸಂಖ್ಯೆ ಕಡಿಮೆ ಇತ್ತು. ಜಿಲ್ಲಾಡಳಿತ ಖರೀದಿಯ ಸಮಯವನ್ನು ವಿಸ್ತರಿಸಿರುವುದರಿಂದ ಇದಕ್ಕೆ ಕಾರಣವಿರಬಹುದು ಎನ್ನುವುದು ವ್ಯಾಪಾರಿಗಳ ಅಭಿಪ್ರಾಯ.
ವಾಹನ ಓಡಾಟ ಹೆಚ್ಚಳ
ನಗರದಲ್ಲಿ ಬಸ್ ವ್ಯವಸ್ಥೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಜನರು ಬೆಳಗ್ಗೆಯಿಂದ ದ್ವಿಚಕ್ರ, ಕಾರು, ಆಟೋಗಳಲ್ಲಿ ಸಂಚರಿಸುತ್ತಿರುವುದು ಕಂಡು ಬಂತು. ನಗರದ ವಿವಿಧ ಕಡೆಗಳ ಚೆಕ್ ಪೋಸ್ಟ್ಗಳಲ್ಲಿ ಪೊಲೀಸರು ಬೇರೆ ಜಿಲ್ಲೆಯ ನಂಬರ್ ಹೊಂದಿರುವ ಪ್ರತಿಯೊಂದು ವಾಹನಗಳ ಮಾಹಿತಿಯನ್ನು ಪಡೆಯುತ್ತಿದ್ದರು.
ಹೊಟೇಲ್ ಪ್ರಾರಂಭ
ಇತ್ತ ನಗರದಲ್ಲಿ ಹೆಚ್ಚಿನ ಹೊಟೇಲ್ಗಳು ಕಾರ್ಯಾಚರಿಸಲಾರಂಭಿಸಿವೆ. ಗ್ರಾಹಕರಿಗೆ ಪಾರ್ಸೆಲ್ಗೆ ಅವಕಾಶ ನೀಡಲಾಗಿದೆ. ಕೆಲವು ಹೊಟೇಲ್ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪಾರ್ಸೆಲ್ ಪಡೆಯುತ್ತಿದ್ದರು.
ತೆರೆದ ಸರ್ವಿಸ್ ಸೆಂಟರ್
ಜಿಲ್ಲೆಯ ಗ್ರಾಮೀಣ ಭಾಗ ಸೇರಿದಂತೆ ನಗರದ ಸಣ್ಣ ಪುಟ್ಟ ವಾಹನ ಸರ್ವಿಸ್ ಸೆಂಟರ್ ತೆರೆದಿದ್ದು, ಸಾರ್ವಜನಿಕರು ಒಂದೂವರೆ ತಿಂಗಳ ಬಳಿಕ ವಾಹನಗಳನ್ನು ಸರ್ವಿಸ್ಗೆ ನೀಡುತ್ತಿರುವ ದೃಶ್ಯಗಳು ಕಂಡು ಬಂದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್