ಜನಾಭಿಪ್ರಾಯಕ್ಕೆ ತಕ್ಕಂತೆ ಲಾಕ್‌ಡೌನ್‌ ವಿಸ್ತರಣೆ: ಸಚಿವ ಕೋಟ


Team Udayavani, Apr 20, 2020, 6:44 AM IST

ಜನಾಭಿಪ್ರಾಯಕ್ಕೆ ತಕ್ಕಂತೆ ಲಾಕ್‌ಡೌನ್‌ ವಿಸ್ತರಣೆ: ಸಚಿವ ಕೋಟ

ಉಡುಪಿ: ಜನರು ಕೋವಿಡ್ 19 ನಿಯಂತ್ರಿಸಲು ಲಾಕ್‌ಡೌನ್‌ ಮುಂದುವರಿಸಿ ಎಂದಿರುವುದರಿಂದ ಮುಖ್ಯಮಂತ್ರಿಗಳು ಪುನಃ ಪರಿಶೀಲನೆ ನಡೆಸಿ ಕಠಿನ ಲಾಕ್‌ಡೌನ್‌ ಮುಂದುವರಿಸಿದ್ದಾರೆ ಎಂದು ಮೀನುಗಾರಿಕಾ ಮತ್ತು ಧಾರ್ಮಿಕ ದತ್ತಿ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಜನಾಭಿಪ್ರಾಯವೇ ಮುಖ್ಯ.

ಜನಾಭಿಪ್ರಾಯಕ್ಕೆ ಮಾನ್ಯತೆ ನೀಡುವುದು ಸರಕಾರದ ಜವಾಬ್ದಾರಿ. ಲಾಕ್‌ಡೌನ್‌ ಸಡಿಲಿಕೆಗೆ ಮುಖ್ಯಮಂತ್ರಿಗಳು ಒಲವು ತೋರಿದ್ದರು. ಕಠಿನವಾದ ಜೀವನ ನಡೆಸಲು ಸಿದ್ಧ ಎಂಬ ಜನಾಭಿಪ್ರಾಯ ಮೂಡಿದೆ. ಹೀಗಾಗಿ ನಿರ್ಧಾರ ವನ್ನು ಪರಿಷ್ಕರಿಸಲಾಯಿತು ಎಂದರು.

ಜನರು ಮತ್ತು ಸರಕಾರದ ಮೇಲೆ ಆರ್ಥಿಕ ಹೊರೆ ಬರುವುದು ಸಹಜ. ಕೋವಿಡ್ 19 ನಿಯಂತ್ರಣಕ್ಕೆ ಬರುವವರೆಗೆ ಮನಸ್ಸು ಕಠೊರ ಮಾಡಿಕೊಳ್ಳಬೇಕು. ಎಲ್ಲರೂ ಸರಳ ಜೀವನ ನಡೆಸು ವುದು ಅನಿವಾರ್ಯವಾಗಲಿದೆ ಎಂದರು.

ಮೀನುಗಾರಿಕೆಗೆ ಅಡ್ಡಿ ಇಲ್ಲ
ಕರ್ನಾಟಕ ಕರಾವಳಿಯಲ್ಲಿ ಮೀನುಗಾರಿಕೆಗೆ ಅಡ್ಡಿಯಿಲ್ಲ. ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದೇ ಸವಾಲು. ಯಾಂತ್ರಿಕ ಮೀನುಗಾರಿಕೆ ಆರಂಭವಾದರೆ ಸಾವಿರಾರು ಜನ ಸೇರುತ್ತಾರೆ.ಮೀನುಗಾರಿಕೆಗೆ ಅವಕಾಶ ಹೆಚ್ಚಿಸಲು ಹಂತ ಹಂತವಾಗಿ ತೀರ್ಮಾನ ಮಾಡುತ್ತೆವೆ. ಮುಂದಿನ ಎರಡು ದಿನಗಳಲ್ಲಿ ಅಧಿಕಾರಿಗಳ ಜೊತೆ ಸಮಾಲೋಚಿಸಿ ತೀರ್ಮಾನ ತಳೆಯುತ್ತೇವೆ ಎಂದರು.

ಲೈಟ್‌ಫಿಶಿಂಗ್‌ಗೆ ತಡೆ
ಅತಿಕ್ರಮ ಮೀನುಗಾರಿಕೆ ಬಗ್ಗೆ ಮೀನು ಗಾರರು ದೂರು ಕೊಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಜತೆ ಮಾತನಾಡಿದ್ದೇನೆ. ಕಾನೂನು ಬಾಹಿರ ಮೀನುಗಾರಿಕೆ ತಡೆಯುವಂತೆ ಸೂಚನೆ ಕೊಟ್ಟಿದ್ದೇನೆ. ಕರಾವಳಿ ಕಾವಲು ಪಡೆಗೆ ಅವರು ಆದೇಶ ನೀಡಲಿದ್ದಾರೆ. ಅನ್ಯ ರಾಜ್ಯದವರ ಲೈಟ್‌ ಫಿಶಿಂಗ್‌ಗೆ ತಡೆ ಹಾಕುತ್ತೇವೆ ಎಂದರು.

ಕನ್ನಡಿಗರ ಹಿತ ಕಾಯುತ್ತೇವೆ
ಬೆಂಗಳೂರು, ಮುಂಬಯಿಯಿಂದ ಸಾವಿರಾರು ಜನ ಕರೆ ಮಾಡುತ್ತಿದ್ದಾರೆ. ಕರಾವಳಿ ಮೂಲದ ಜನರು ಕರೆ ಮಾಡಿ ಊರಿಗೆ ಬರುತ್ತೇವೆ ಎನ್ನುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಕೋವಿಡ್ 19 ವ್ಯಾಪಕವಾಗಿ ಹಬ್ಬಿದೆ. ಕನ್ನಡಿಗರ ಹಿತ ಕಾಯಲು ಸರಕಾರ ಬದ್ಧವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿ ಜತೆಗೆ ಮಾತನಾಡಿದ್ದೇನೆ. ಕನ್ನಡಿಗರಿಗೆ ಇರುವಲ್ಲೇ ಆಹಾರ ಮತ್ತು ಔಷಧ ಸಿಗುವಂತೆ ನೋಡಿಕೊಳ್ಳುತ್ತೇವೆ. ಕೇರಳದಲ್ಲಿರುವ ನಮ್ಮ ಮೀನುಗಾರರ ಹಿತವನ್ನೂ ಕಾಯುತ್ತೇವೆ. ಕೋವಿಡ್ 19 ಗಂಡಾಂತರ ಮುಗಿಯುವವರೆಗೆ ಆತ್ಮಸ್ಥೈರ್ಯ ಕಾಪಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ದೇವಸ್ಥಾನಗಳಿಂದ ನೆರವು
ಕೋವಿಡ್ 19 ಹಾವಳಿಯಿಂದಾಗಿ ಅಗತ್ಯವುಳ್ಳವ ರಿಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ 2,500 ಕಿಟ್‌, ಮಂದಾರ್ತಿ ದೇವಾಲಯದಿಂದ 2,500 ಕಿಟ್‌, ಅನಂತೇಶ್ವರ ದೇವಸ್ಥಾನದಿಂದ 1,000 ಆಹಾರ ಕಿಟ್‌ ವಿತರಣೆ ಮಾಡುತ್ತೇವೆ. ಅರ್ಚಕರಿಗೆ ಆಹಾರ ಸಾಮಗ್ರಿ ಕೊಡಲು ಶೀಘ್ರ ತೀರ್ಮಾನ ಕೈಗೊಳ್ಳುತ್ತೇವೆ. ಅರ್ಚಕರ ತಸ್ತೀಕು ಮುಂಗಡವಾಗಿ ನೀಡುವ ಚಿಂತನೆ ಇದೆ. ಕಲಾವಿದರು ಮತ್ತು ಅರ್ಚಕರಿಗೆ ಆಹಾರ ಸಾಮಗ್ರಿ ನೀಡುತ್ತೇವೆ ಎಂದು ಶ್ರೀನಿವಾಸ ಪೂಜಾರಿ ತಿಳಿಸಿದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.