ಅಲ್ಲಲ್ಲಿ ಮತ್ತೆ ಲಾಕ್‌ಡೌನ್‌: ಪುಣೆೆ, ಬೆಂಗಳೂರು ರೀತಿ ಕೆಲವು ನಗರಗಳಿಗೆ ಲಾಕ್‌ಡೌನ್‌ ಬಿಸಿ


Team Udayavani, Jul 13, 2020, 1:01 PM IST

ಅಲ್ಲಲ್ಲಿ ಮತ್ತೆ ಲಾಕ್‌ಡೌನ್‌: ಪುಣೆೆ, ಬೆಂಗಳೂರು ರೀತಿ ಕೆಲವು ನಗರಗಳಿಗೆ ಲಾಕ್‌ಡೌನ್‌ ಬಿಸಿ

ಹೊಸದಿಲ್ಲಿ: ದೇಶಾದ್ಯಂತ ಕೊರೊನಾ ಪ್ರಕರ ಣ ಗಳು ಹೆಚ್ಚಾಗುತ್ತಲೇ ಇವೆ. ಕರ್ನಾಟಕದಲ್ಲಿ ನಿಯಂತ್ರಣ ಮೀರಿ ಪ್ರಕರಣಗಳು ದಾಖ ಲಾದ ಹಿನ್ನೆಲೆಯಲ್ಲಿ, ಒಂದು ವಾರದ ಕಾಲ ಲಾಕ್‌ಡೌನ್‌ ನಡೆಸಲು ಸಿದ್ಧತೆಗಳು ಆರಂಭ ವಾಗಿವೆ. ಕೆಲವೆಡೆ ಪ್ರಕರಣಗಳು ಹೆಚ್ಚಾಗಿರುವ ನಗರಗಳು, ಪ್ರಾಂತ್ಯಗಳಲ್ಲಿ ಲಾಕ್‌ಡೌನ್‌ನನ್ನು ಕೆಲವು ದಿನಗಳ ಕಾಲ ವಿಸ್ತರಿಸಲು ನಿರ್ಧರಿಸಲಾಗಿದ್ದರೆ, ಮತ್ತೂ ಕೆಲವೆಡೆ ಭಾಗಶಃ ಲಾಕ್‌ಡೌನ್‌ ಅಂದರೆ ವೀಕೆಂಡ್‌ ಅಥವಾ ನಿರ್ದಿಷ್ಟ ದಿನಗಳಲ್ಲಿ ಮಾತ್ರ ಲಾಕ್‌ಡೌನ್‌ ಮಾಡಲು ತೀರ್ಮಾನಿಸಲಾಗಿದೆ.

ಬೆಂಗಳೂರಿನಲ್ಲಿ ಮಂಗಳವಾರದಿಂದ ಜಾರಿಗೆ ಬರುವಂತೆ 7 ದಿನಗಳ ಕಾಲ ಲಾಕ್‌ಡೌನ್‌ಗಾಗಿ ನಿರ್ಧರಿಸಿದೆ. ಆದರೆ ಉತ್ತರ ಪ್ರದೇಶ, ತಮಿಳುನಾಡು, ಜಮ್ಮು- ಕಾಶ್ಮೀರ ದಲ್ಲಿ ಕೆಲವು ಕಡೆ ಲಾಕ್‌ಡೌನ್‌ ಜಾರಿಗೊಳಿ ಸಲಾಗಿದೆ. ಅಸ್ಸಾಂನಲ್ಲಿ ಗುವಾಹಾಟಿ ಹಾಗೂ ಕಾಮರೂಪ್‌ಗ್ಳಲ್ಲಿ ಮಾತ್ರ 14 ದಿನಗಳವರೆಗೆ ಲಾಕ್‌ಡೌನ್‌ ಜಾರಿಗೊಳಿ ಸಲು ತೀರ್ಮಾನಿಸಲಾಗಿದೆ.

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ದಿನೇದಿನೆ ಪ್ರಕರಣಗಳು ಹೆಚ್ಚಾಗ ತೊಡಗಿ ರುವ ಹಿನ್ನೆಲೆಯಲ್ಲಿ ವೀಕೆಂಡ್‌ಗಳಲ್ಲಿ ಲಾಕ್‌ಡೌನ್‌ ಜಾರಿಗೊಳಿಸುವ ನಿರ್ಧಾರ ಕೈಗೊಳ್ಳ ಲಾಗಿದೆ. ಅಸಲಿಗೆ, ರಾಜ್ಯಪೂರ್ತಿ ಲಾಕ್‌ಡೌನ್‌ ಜಾರಿ ಮಾಡುವಂತೆ ಒತ್ತಾಯಗಳು ಕೇಳಿಬಂದಿವೆ. ಶನಿವಾರದಂದು, ಅಲ್ಲಿ ಒಂದೇ ದಿನ 35,000 ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಲಾಕ್‌ಡೌನ್‌ ಅನಿವಾರ್ಯ ಎಂಬಂತಾಗಿದ್ದು, ಅದರ ಮೊದಲ ಹೆಜ್ಜೆ ಯಾಗಿ ಶನಿವಾರ ಹಾಗೂ ರವಿವಾರದಂದು ರಾಜ್ಯಾದ್ಯಂತ ಲಾಕ್‌ಡೌನ್‌ ಮಾಡಬೇಕೆಂದು ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲಿನ ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿ (ಗೃಹ ಮತ್ತು ಮಾಹಿತಿ ತಂತ್ರಜ್ಞಾನ) ಅವನೀಶ್‌ ಅವಾಸ್ತಿ, ಈ ವಿಷಯ ಪ್ರಕಟಿಸಿದ್ದಾರೆ. ಜನನಿಬಿಡ ಸ್ಥಳಗಳಾದ ಮಾರುಕಟ್ಟೆ, ಕಚೇರಿಗಳು, ಸಿನೆಮಾ ಗೃಹಗಳು ಇತ್ಯಾದಿ ಕಡೆಗಳಲ್ಲಿ ಜನರು ಹೆಚ್ಚೆಚ್ಚು ಸಂಖ್ಯೆ ಯಲ್ಲಿ ಜಮಾಯಿಸುವುದರಿಂದ ಅಲ್ಲಿ ಪ್ರಕರಣಗಳು ಹೆಚ್ಚಾಗಿರುವ ಸಾಧ್ಯತೆಗಳಿರು ತ್ತವೆ. ಈ ಹಿನ್ನೆಲೆಯಲ್ಲಿ ವೀಕೆಂಡ್‌ಗಳಲ್ಲಿ ಲಾಕ್‌ಡೌನ್‌ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಗುರುವಾರ, ಉತ್ತರ ಪ್ರದೇಶ ಸರಕಾರ 55 ಗಂಟೆಗಳ ಲಾಕ್‌ಡೌನ್‌ ಜಾರಿಗೊಳಿಸುವುದಾಗಿ ಘೋಷಿಸಿತ್ತು. ಶುಕ್ರವಾರ
ರಾತ್ರಿ 10 ಗಂಟೆಯಿಂದ ಶುರುವಾಗಿದ್ದ ಲಾಕ್‌ಡೌನ್‌, ಸೋಮವಾರ ಬೆಳಗ್ಗೆ 5 ಗಂಟೆಯ ವರೆಗೂ ಜಾರಿಯಲ್ಲಿತ್ತು. ಆ ಸಂದರ್ಭದಲ್ಲಿ, ಅಗತ್ಯ ಸೇವೆಗಳನ್ನು ಜಾರಿಯಲ್ಲಿಡಲಾಗಿತ್ತು. ಅದೇ ಮಾದರಿಯಲ್ಲಿ, ವೀಕೆಂಡ್‌ ಲಾಕ್‌ಡೌನ್‌ಗಳ ವೇಳೆಯಲ್ಲೂ ಅಗತ್ಯ ಹಾಗೂ ತುರ್ತು ಸೇವೆಗಳನ್ನು ಜಾರಿಯಲ್ಲಿಡಲಾಗುತ್ತದೆ ಎಂದು ತಿಳಿಸಿದರು.

ಜಮ್ಮು ಮತ್ತು ಕಾಶ್ಮೀರ: ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಆಂಶಿಕ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ. ಕೊರೊನಾ ಪ್ರಕರಣಗಳು ಜಾಸ್ತಿಯಿರುವ ಸುಮಾರು 68 ಪ್ರಕರಣಗಳನ್ನು ಗುರುತು ಮಾಡಲಾಗಿದ್ದು, ಆ ಪ್ರಾಂತ್ಯಗಳನ್ನು ಕಡ್ಡಾಯವಾಗಿ ಸೀಲ್‌ಡೌನ್‌ ಮಾಡುವುದು ಹಾಗೂ ಕೆಂಪು ವಲಯಗಳಲ್ಲಿ ಕಟ್ಟುನಿಟ್ಟಾದ ಲಾಕ್‌ಡೌನ್‌ ಜಾರಿಗೊಳಿಸುವ ನಿರ್ಧಾರವನ್ನು ಕೈಗೊಳ್ಳ ಲಾಗಿದೆ. ಈ ಪ್ರಾಂತ್ಯಗಳಲ್ಲಿ ವಾಹನ ಹಾಗೂ ಜನರ ಸಂಚಾರವನ್ನು ಕಟ್ಟುನಿಟ್ಟಾಗಿ ನಿರ್ಬಂಧಿ ಸಲಾಗಿದೆ. ಕಳೆದೊಂದು ವಾರದಲ್ಲಿ ಶ್ರೀನಗರದಲ್ಲಿ 1,600ಕ್ಕೂ ಹೆಚ್ಚು ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಅಸ್ಸಾಂ-ಮೇಘಾಲಯ: ಕೋವಿಡ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಅಸ್ಸಾಂ ಸರಕಾರ, ಗುವಾಹಾಟಿ ಹಾಗೂ ಪ್ರಕರಣಗಳು ಹೆಚ್ಚಾಗಿರುವ ಕಾಮರೂಪ್‌ (ಮೆಟ್ರೋ) ಜಿಲ್ಲೆಯಲ್ಲಿ ಲಾಕ್‌ಡೌನ್‌ ನಿಯಮಗಳನ್ನು 14 ದಿನಗಳ ಮುಂದುವರಿಸಲು ನಿರ್ಧರಿಸಿದೆ. ಜು. 19ರ ವರೆಗೆ ಈ ನಿರ್ಬಂಧ ಮುಂದುವರಿಯಲಿದೆ. ಮೇಘಾಲಯದಲ್ಲಿ ಸೋಮವಾರ ಹಾಗೂ ಮಂಗಳವಾರದ ಲಾಕ್‌ಡೌನ್‌ ಜಾರಿಗೊಳಿಸಲಾಗುತ್ತದೆ.

ಸ್ವಯಂ ದೃಢೀಕರಣ ಘೋಷಣೆ ಅವಧಿ ಇಳಿಕೆ
ಹೊಸದಿಲ್ಲಿ: ವಿಮಾನಯಾನಕ್ಕೆ ಮುಂಚಿತವಾಗಿ ಪ್ರಯಾಣಿಕರು ಸ್ವಯಂ ಘೋಷಣ ಫಾರ್ಮ್ ಸಲ್ಲಿಸಿ, 3 ವಾರಗಳ ಅವಧಿಯಲ್ಲಿ ಕೋವಿಡ್ ಇರಲಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು. ಅಂಥವರಿಗೆ ಪ್ರಯಾಣಿಸಲು ಅವಕಾಶ ನೀಡಿ ಎಂದು ಕೇಂದ್ರ ಸೂಚಿಸಿದೆ. ಮೇ 21ರಂದು ಈ ಸಂಬಂಧ ಆದೇಶ ಹೊರಡಿಸಿದ್ದ ಸಚಿವಾಲಯ, ಪ್ರಯಾಣಕ್ಕೂ ಮುಂಚೆ ಪ್ರಯಾಣಿಕರು 2 ತಿಂಗಳ ಅವಧಿಯಲ್ಲಿ ಕೋವಿಡ್ ಪಾಸಿಟಿವ್‌ ಇಲ್ಲ ಎಂಬ ಬಗ್ಗೆ ಸ್ವಯಂ ದೃಢೀಕರಣ ಸಲ್ಲಿಸಲು ಸೂಚಿಸಿತ್ತು. ದೇಶದಲ್ಲಿ ಚೇತರಿಕೆಯ ಪ್ರಮಾಣ ಹೆಚ್ಚಿದೆ. ಹೀಗಾಗಿ, ಘೋಷಣ ಫಾರ್ಮ್ ಸಲ್ಲಿಕೆ ಅವಧಿ ಇಳಿಕೆ ಮಾಡಲಾಗಿದೆ.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.