ಲಾಕ್‌ಡೌನ್‌ ಸಡಿಲಿಕೆಯಾದರೂ ಆಳಸಮುದ್ರ ಮೀನುಗಾರಿಕೆ ಅನಿಶ್ಚಿತ!


Team Udayavani, May 11, 2020, 6:30 AM IST

ಲಾಕ್‌ಡೌನ್‌ ಸಡಿಲಿಕೆಯಾದರೂ ಆಳಸಮುದ್ರ ಮೀನುಗಾರಿಕೆ ಅನಿಶ್ಚಿತ!

ವಿಶೇಷ ವರದಿ-ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೈಗಾರಿಕೆ ಸಹಿತ ಬಹುತೇಕ ವಹಿವಾಟು ಆರಂಭವಾಗಿದೆ. ಆದರೆ ಕರಾವಳಿಯ ಆರ್ಥಿಕ ಚಟುವಟಿಕೆಗೆ ಆಧಾರವಾಗುವ ಆಳಸಮುದ್ರ ಮೀನುಗಾರಿಕೆ ಆರಂಭದ ಬಗ್ಗೆ ಅನಿಶ್ಚಿತತೆ ಮುಂದುವರಿದಿದೆ.

ಮೇ 31ರವರೆಗೆ ಈ ಬಾರಿಯ ಮೀನುಗಾರಿಕಾ ಋತು ಇರಲಿದೆ. ಬಳಿಕ 61 ದಿನಗಳ ಅನಂತರವಷ್ಟೇ ಮೀನುಗಾರಿಕೆ. ಆದರೆ ಆಳಸಮುದ್ರ ಮೀನುಗಾರಿಕೆಗೆ ಜಿಲ್ಲಾಡಳಿತ ಇನ್ನೂ ಅನುಮತಿ ನೀಡದಿರುವ ಕಾರಣ, ಅನುಮತಿ ನೀಡಿದರೂ ಕಾರ್ಮಿಕರಿಲ್ಲದ ಕಾರಣ ಆಳಸಮುದ್ರ ಮೀನುಗಾರಿಕೆಯ ಸದ್ಯದ ಪರಿಸ್ಥಿತಿ ಅಯೋಮಯವಾಗಿದೆ.

ಕಾರ್ಮಿಕರಿಲ್ಲದೆ ಸಂಕಷ್ಟ
ಎ. 26ರಂದು 150 ಬಸ್‌ಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಸಹಿತಬೇರೆ ಬೇರೆ ರಾಜ್ಯದ ಕಾರ್ಮಿಕರು ತೆರಳಿದ್ದಾರೆ. ಅನಂತರವೂ ಹಲವು ಕಾರ್ಮಿಕರು ಊರಿಗೆ ಹೋಗಿದ್ದಾರೆ. ಒಟ್ಟು 5 ಸಾವಿರದಷ್ಟು ಕಾರ್ಮಿಕರು ತೆರಳಿದ ಕಾರಣ ಮೀನುಗಾರಿಕೆಗೆ ಕಾರ್ಮಿಕರ ಕೊರತೆ ಎದುರಾಗಿದೆ. ಸದ್ಯ ಮಂಗಳೂರು ಬಂದರಿನಲ್ಲಿ ಬಾಕಿಯಾಗಿರುವ ಒಡಿಶಾ, ಝಾರ್ಖಂಡ್‌, ತಮಿಳುನಾಡು ಭಾಗದ ಸುಮಾರು 500ರಷ್ಟು ಕಾರ್ಮಿಕರು ಕೂಡ ಊರಿಗೆ ತೆರಳಲು ಸಿದ್ಧತೆ ನಡೆಸಿದ್ದಾರೆ.

“ಸೇವಾ ಸುವಿಧ’ ಮೂಲಕ ದಾಖಲೆಗಳನ್ನು ಅಪ್‌ಲೋಡ್‌ ಮಾಡುತ್ತಿದ್ದು, ಒಂದೆರಡು ದಿನದಲ್ಲಿ ಅವರೂ ಊರಿಗೆ ತೆರಳಲಿದ್ದಾರೆ. ಹೀಗಾಗಿ ಕಾರ್ಮಿಕರೇ ಇಲ್ಲದೆ ಮೀನುಗಾರಿಕೆಯ ಈ ಋತು ಪೂರ್ಣಗೊಳಿಸಬೇಕಾದ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ!

8 10 ದಿನಗಳವರೆಗೆ ಕಡಲ ಮಧ್ಯೆ ಮೀನುಗಾರಿಕೆ ನಡೆಸುವ ಬೋಟ್‌ಗಳಿಗೆ ಕಾರ್ಮಿಕರ ಕೊರತೆಯಾದರೆ, ಒಂದೇ ದಿನದಲ್ಲಿ ಹೋಗಿ ಬರುವ ಯಾಂತ್ರೀಕೃತ ಬೊಟ್‌ಗಳಿಗೆ ಅನುಮತಿ ನೀಡುವಂತೆ ಮೀನುಗಾರರು ಜಿಲ್ಲಾಡಳಿತವನ್ನು ಕೋರಿದ್ದಾರೆ. ಇದರಲ್ಲಿ ಉಳ್ಳಾಲ, ಬೆಂಗರೆ ಭಾಗದವರು ಕೆಲಸ ಮಾಡಲು ಸಿದ್ಧರಾಗಿದ್ದಾರೆ. ಇದಕ್ಕೆ ಅವಕಾಶ ದೊರೆತರೆ ಮಂಗಳೂರಿನ 150ರಷ್ಟು ಬೋಟ್‌ಗಳು ಮೀನುಗಾರಿಕೆ ನಡೆಸಲು ಸಾಧ್ಯವಾಗಬಹುದು. ಮೀನುಗಾರಿಕಾ ದಕ್ಕೆ ಅಂದಾಗ ಮೀನುಗಾರರು, ಗ್ರಾಹಕರು ಜಮಾಯಿಸುವುದು ಸಾಮಾನ್ಯ. ಆದರೆ ಸಾಮಾಜಿಕ ಅಂತರ ಕಾಯ್ದುಕೊಂಡರೆ ಮಾತ್ರ ಮೀನು ಗಾರಿಕೆಗೆ ಅವಕಾಶವಿದೆ. ದಕ್ಕೆಯಲ್ಲಿ ಅಂತರ ಕಾಯ್ದು ಕೊಳ್ಳುವುದು ಯಾವ ರೀತಿಯಲ್ಲಿ ಎಂಬುದು ಮೀನುಗಾರರ ಪ್ರಶ್ನೆ.

 ಸದ್ಯಕ್ಕಿಲ್ಲ ಅವಕಾಶ
ದ.ಕ. ಜಿಲ್ಲೆ ಆರೆಂಜ್‌ ಝೋನ್‌ನಲ್ಲಿರುವ ಕಾರಣದಿಂದ ಸದ್ಯಕ್ಕೆ ಆಳಸಮುದ್ರ ಮೀನುಗಾರಿಕೆಗೆ ಜಿಲ್ಲಾಡಳಿತ ಅವಕಾಶ ನೀಡುವ ಸಾಧ್ಯತೆ ಕಡಿಮೆ. ಜತೆಗೆ ಈ ಬಗ್ಗೆ ಯಾವುದೇ ತೀರ್ಮಾನವೂ ಆಗಿಲ್ಲ.
 -ಹರೀಶ್‌ ಕುಮಾರ್‌, ಮೀನುಗಾರಿಕಾ ಉಪನಿರ್ದೇಶಕ, ದ.ಕ.

 ಕಾರ್ಮಿಕರಿಲ್ಲದೆ ಕಷ್ಟ
ಸುಮಾರು 5 ಸಾವಿರಕ್ಕೂ ಅಧಿಕ ಮೀನುಗಾರ ಕಾರ್ಮಿಕರು ಸದ್ಯ ಊರುಗಳಿಗೆ ತೆರಳಿದ್ದಾರೆ. ಮೀನುಗಾರಿಕಾ ಋತು ಪೂರ್ಣಗೊಳ್ಳಲು ಕೆಲವೇ ದಿನ ಬಾಕಿ. ಹೀಗಾಗಿ ಯಾಂತ್ರೀಕೃತ ಮೀನುಗಾರಿಕೆ ಕಷ್ಟ. ಆದರೂ ಸಿಂಗಲ್‌ ಡೇ ಬೋಟ್‌ಗಳ ಸಂಚಾರಕ್ಕೆ ಅವಕಾಶ ನೀಡಿದರೆ ಉತ್ತಮ.
-ನಿತಿನ್‌ ಕುಮಾರ್‌, ಮೀನುಗಾರರ ಮುಖಂಡ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.