ಲಾಕ್ಡೌನ್ ಮ್ಯಾರೇಜ್ ಸ್ಟೋರಿ
Team Udayavani, Jun 19, 2020, 7:53 AM IST
ಲಾಕ್ ಡೌನ್ನಲ್ಲಿ ಅನೇಕರು ಕೃಷಿ, ಬರವಣಿಗೆ ಸೇರಿದಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡರೆ ಇನ್ನು ಕೆಲವರು ಸಂಸಾರಿಗಳಾಗಿದ್ದಾರೆ, ಮತ್ತೆ ಕೆಲವರು ಸಂಸಾರಿಗಳಾಗುವ ಬಗ್ಗೆ ಹೇಳಿಕೊಂಡಿದ್ದಾರೆ. ಈಗಾಗಲೇ ನಿರ್ದೇಶಕ ಎ.ಪಿ.ಅರ್ಜುನ್ ಲಾಕ್ ಡೌನ್ನಲ್ಲಿ ಸರಳವಾಗಿ ವಿವಾಹವಾಗಿದ್ದಾರೆ. ಈಗ ನಟಿಮಣಿಯರ ಸರದಿ. ಈಗಾಗಲೇ ನಟಿ ಮಯೂರಿ ಕ್ಯಾತರಿ ತಮ್ಮ ಬಹುವರ್ಷದ ಗೆಳೆಯ ಅರುಣ್ ಅವರನ್ನು ಸರಳವಾಗಿ ವಿವಾಹವಾಗಿದ್ದಾರೆ.
ಈಗ ನಟಿ ಶುಭಾ ಪೂಂಜಾ ತಮ್ಮ ಮದುವೆ ಸುದ್ದಿಯನ್ನು ಘೋಷಿಸಿಕೊಂಡಿದ್ದಾರೆ. ಮೊಗ್ಗಿನ ಮನಸು ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶಿಸಿದ್ದ ನಟಿ ಶುಭಾ ಪೂಂಜಾ ಈಗ ಹಸೆಮಣೆ ಏರಲು ಸಿದ್ದತೆ ನಡೆಸಿದ್ದಾರೆ. ಜಯಕರ್ನಾಟಕ ಸಂಘಟನೆಯ ಮುಖಂಡ, ಉದ್ಯಮಿ ಸುಮಂತ್ ಮಹಾಬಲ ಅವರೊಂದಿಗೆ ವಿವಾಹವಾಗಲು ನಟಿ ಶುಭಾ ಪೂಂಜಾ ನಿರ್ಧರಿಸಿದ್ದಾರೆ.
ಇವರಿಬ್ಬರ ವಿವಾಹ ಮಂಗಳೂರಿನಲ್ಲಿ ನೆರವೇರಲಿದ್ದು, ಬೆಂಗಳೂರಿನಲ್ಲಿ ಆರತಕ್ಷತೆ ನಡೆಯಲಿದೆ. ಇನ್ನು ಶುಭಾ ಅವರನ್ನು ವರಿಸುತ್ತಿರುವ ಸುಮಂತ್ ಜಯಕರ್ನಾಟಕ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲೆ ವಿಭಾಗದ ಉಪಾಧ್ಯಕ್ಷರಾಗಿದ್ದಾರೆ. ಈ ಇಬ್ಬರೂ ಒಂದು ವರ್ಷದಿಂದ ಪ್ರೀತಿಸುತ್ತಿದ್ದು ಈ ಡಿಸೆಂಬರ್ನಲ್ಲಿ ಈ ಜೋಡಿ ಸಪ್ತಪದಿ ತುಳಿಯುವ ನಿರೀಕ್ಷೆ ಇದೆ ಎನ್ನಲಾಗಿದೆ.
ತ್ರಿದೇವಿ ಚಿತ್ರದ ಮೂಲಕ ನಿರ್ಮಾಪಕಿಯಾಗಿ ಬಡ್ತಿ ಪಡೆದಿರುವ ನಟಿ ಶುಭಾ ಪೂಂಜಾ ಸದ್ಯ ರೈಮ್ಸ್ ಚಿತ್ರದಲ್ಲಿ ಟಿವಿ ವಾಹಿನಿಯೊಂದರ ನಿರೂಪಕಿ ಪಾತ್ರದಲ್ಲಿ ಕಾಣಿಸುತ್ತಿದ್ದಾರೆ. ಇತ್ತೀಚೆಗಷ್ಟೆ ನಟಿ ಶುಭಾ ಪೂಂಜಾ ಅವರೇ ತಮ್ಮ ಮದುವೆಯ ವಿಷಯವನ್ನು ಬಹಿರಂಗಪಡಿಸಿದ್ದು, ಶೀಘ್ರದಲ್ಲಿಯೇ ಮದುವೆಯ ದಿನಾಂಕ ತಿಳಿಸುವುದಾಗಿ ಹೇಳಿದ್ದಾರೆ. ಇದು ಶುಭಾ ಕಥೆಯಾದರೆ, ಇನ್ನೊಂದಿಷ್ಟು ಮಂದಿಯ ಮದುವೆ ಮಾತುಕತೆ ನಡೆಯುತ್ತಿರಬಹುದು. ಸದ್ಯದಲ್ಲೇ ಆ ಸುದ್ದಿ ಹೊರಬೀಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ