ಲಾಕ್‌ಡೌನ್‌ ನೆಪ: ಹಣ್ಣು, ತರಕಾರಿಗೆ ತರಹೇವಾರಿ ದರ


Team Udayavani, Apr 18, 2020, 6:29 AM IST

ಲಾಕ್‌ಡೌನ್‌ ನೆಪ: ಹಣ್ಣು, ತರಕಾರಿಗೆ ತರಹೇವಾರಿ ದರ

ಮಂಗಳೂರು: ಲಾಕ್‌ಡೌನ್‌ ಹಾಗೂ ಸೆಂಟ್ರಲ್‌ ಮಾರ್ಕೆಟ್‌ನಲ್ಲಿ ವ್ಯವಹಾರ ಸ್ಥಗಿತವಾಗಿರುವ ಸಂದರ್ಭ ಹಣ್ಣು-ತರಕಾರಿಗಳಿಗೆ ನಗರದ ಒಂದೊಂದು ಮಾರುಕಟ್ಟೆಯಲ್ಲಿ ಒಂದೊಂದು ದರ ವಸೂಲು ಮಾಡಲಾಗುತ್ತಿದೆ. ಕೆಲವು ಕಡೆ ಮನಬಂದಂತೆ ಹಣ ವಸೂಲಿ ಮೂಲಕ ವ್ಯಾಪಾರಿಗಳು ಹಗಲು ದರೋಡೆ ನಡೆಸುತ್ತಿರುವ ಆರೋಪಗಳೂ ಕೇಳಿ ಬರುತ್ತಿವೆ.

ಆವಶ್ಯಕ ವಸ್ತುಗಳ ಮಾರಾಟಕ್ಕೆ ಬೆಳಗ್ಗೆ 7ರಿಂದ 12 ಗಂಟೆ ತನಕ ಮಾತ್ರ ಅವಕಾಶ ಇದ್ದು, ಈ ಸೀಮಿತ ಅವಧಿಯಲ್ಲಿ ವ್ಯಾಪಾರಿಗಳು ಹೇಳಿದಷ್ಟು ಹಣ ತೆತ್ತು ಸಿಕ್ಕಿದ್ದನ್ನು ಕೊಂಡೊಯ್ಯುವ ಅನಿವಾರ್ಯ ಗ್ರಾಹಕರದು. ಕೆಲವು ವ್ಯಾಪಾರಿಗಳು ಇದನ್ನೇ ಸುಸಂದರ್ಭ ಎಂದುಕೊಂಡು ಬೇಕಾಬಿಟ್ಟಿ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ಪತ್ರಿಕಾ ಕಚೇರಿಗೆ ದೂರುಗಳು ಬರುತ್ತಿವೆ.

ಕೇಂದ್ರ ಮಾರುಕಟ್ಟೆಯ ತರಕಾರಿ ಮತ್ತು ಹಣ್ಣು-ಹಂಪಲು ಸಗಟು ವ್ಯವಹಾರವನ್ನು ಬೈಕಂಪಾಡಿಯ ಎಪಿಎಂಸಿ ಯಾರ್ಡ್‌ಗೆ ಸ್ಥಳಾಂತರಿಸಲಾಗಿದ್ದು, ಮಾರ್ಕೆಟ್‌ನಲ್ಲಿ ಹೊಸ ಕಟ್ಟಡ ನಿರ್ಮಿಸಲು ಉದ್ದೇಶಿಸಿರುವ ಕಾರಣ ಅಲ್ಲಿ ರಿಟೇಲ್‌ ವ್ಯಾಪಾರವನ್ನು ರದ್ದುಪಡಿಸಲಾಗಿದೆ. ಆದ್ದರಿಂದ ತರಕಾರಿ ಮಾರಾಟಕ್ಕೆ ನಿದಿಷ್ಟ ವ್ಯವಸ್ಥೆಯಿಲ್ಲ. ಬೈಕಂಪಾಡಿಯ ಸಗಟು ವ್ಯಾಪಾರಿಗಳಿಂದ ಖರೀದಿಸುವ ರಿಟೇಲ್‌ ವ್ಯಾಪಾರಿಗಳು ತಾವೇ ಒಂದು ದರ ನಿಗದಿಪಡಿಸಿ ಗ್ರಾಹಕರಿಗೆ ಮಾರುತ್ತಾರೆ.

ಸೆಂಟ್ರಲ್‌ ಮಾರ್ಕೆಟ್‌ನಲ್ಲಿ ರಿಟೇಲ್‌ ವ್ಯಾಪಾರ ಇದ್ದಾಗ ಅಲ್ಲಿರುವ ದರಗಳನ್ನು ಪರಿಗಣಿಸಿ ಇತರ ಮಾರ್ಕೆಟ್‌ಗಳಲ್ಲಿ ತರಕಾರಿಗಳ ದರ ನಿಗದಿ ಮಾಡಲಾಗುತ್ತಿತ್ತು. ಆದರೆ ಈಗ ಒಂದೊಂದು ಕಡೆ ಒಂದೊಂದು ದರ ಇದೆ. ಮಹಾನಗರ ಪಾಲಿಕೆ ಮತ್ತು ಜಿಲ್ಲಾಡಳಿತವು ಹಾಪ್‌ಕಾಮ್ಸ್‌ ಮಳಿಗೆಗಳಲ್ಲಿ ಇರುವ ದರವನ್ನು ಮಾನದಂಡವಾಗಿ ಪರಿಗಣಿಸುತ್ತಿವೆ. ಆದರೆ ಈಗ ಎಲ್ಲ ವ್ಯಾಪಾರಿಗಳೂ ಅದೇ ಮಾನದಂಡ ಅನುಸರಿಸುತ್ತಿದ್ದಾರೆ ಎನ್ನುವುದಕ್ಕೆ ಯಾವ ಆಧಾರವೂ ಇಲ್ಲ. (ಈ ಹಿಂದೆ ಸೆಂಟ್ರಲ್‌ ಮಾರ್ಕೆಟ್‌ನಲ್ಲಿ ತರಕಾರಿ ದರಗಳು ಹಾಪ್‌ಕಾಮ್ಸ್‌ನ ದರಗಳಿಗಿಂತ ಕಡಿಮೆ ಇದ್ದವು ಎನ್ನುವುದು ಬೇರೆ ಪ್ರಶ್ನೆ).

ಬಿಲ್‌ ಸಹಿತ ದೂರು ನೀಡಿ
ಗ್ರಾಹಕರು ಖರೀದಿಸಿದ ಸಾಮಗ್ರಿಗೆ ಅಂಗಡಿಯವರಿಂದ ಬಿಲ್‌ ತೆಗೆದುಕೊಳ್ಳಬೇಕು. ಅಧಿಕ ಹಣ ವಸೂಲಿ ಮಾಡಿದ್ದಾರೆ ಎನಿಸಿದರೆ ಅಂತಹ ವ್ಯಾಪಾರಿಯ ವಿರುದ್ಧ ಬಿಲ್‌ನ ಪ್ರತಿಯ ಸಹಿತ ಪಾಲಿಕೆಗೆ ದೂರು ನೀಡಬಹುದು. ಹಾಗಾದರೆ ನಮಗೆ ವಿಚಾರಣೆ ನಡೆಸಿ ವ್ಯಾಪಾರಿಯ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ.
 - ಅಜಿತ್‌ ಕುಮಾರ್‌ ಹೆಗ್ಡೆ ಶಾನಾಡಿ, ಮನಪಾ ಆಯುಕ್ತರು

ಗ್ರಾಮಾಂತರದಲ್ಲಿ ಇದೆ ದರ ಪಟ್ಟಿ
ಗ್ರಾಮಾಂತರ ಪ್ರದೇಶಗಳಲ್ಲಿನ ಅಂಗಡಿಗಳಲ್ಲಿ ದರ ಪಟ್ಟಿ ನಮೂದಿಸುವಂತೆ ಸ್ಥಳೀಯಾಡಳಿತಗಳು ಸೂಚಿಸಿವೆ. ಆದರೆ ಮಂಗಳೂರಿನಲ್ಲಿ ಅಂತಹ ವ್ಯವಸ್ಥೆ ಇಲ್ಲ. ಹಾಪ್‌ಕಾಮ್ಸ್‌ ಮಳಿಗೆಗಳಲ್ಲಿ ಮಾತ್ರ ದರ ಪಟ್ಟಿ ಇದೆ.

ವ್ಯಾಪಾರಿಗಳು ಮನಬಂದಂತೆ ವಸೂಲಿ ಮಾಡುತ್ತಿರುವ ವಿಚಾರವನ್ನು ಉದಯವಾಣಿಯು ನಗರ ಪಾಲಿಕೆಯ ಆಯುಕ್ತರ ಗಮನಕ್ಕೆ ತಂದಾಗ, ತರಕಾರಿ, ಹಣ್ಣು ಹಂಪಲುಗಳ ದರವನ್ನು ಹಾಪ್‌ಕಾಮ್ಸ್‌ ನಿಗದಿಪಡಿಸುತ್ತದೆ. ಹಾಪ್‌ಕಾಮ್ಸ್‌ ಮಳಿಗೆಗಳಲ್ಲಿ ಮತ್ತು ಇತರ ಮಾರ್ಕೆಟ್‌ಗಳಲ್ಲಿ ದರ ಸುಮಾರಾಗಿ ಒಂದೇ ರೀತಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.