Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


Team Udayavani, Apr 25, 2024, 7:25 AM IST

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

ರಾಜ್ಯದ ಪ್ರಜಾಪ್ರಭುತ್ವದ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ನಡೆಯಲಿದೆ. ಮತದಾನ ಎನ್ನುವುದು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಅತ್ಯಂತ ಮಹತ್ವದ ಕಾರ್ಯ. ಉದಾಸೀನತೆಯಿಂದ ಮತದಾನವನ್ನು ಮಿಸ್‌ ಮಾಡಿಕೊಳ್ಳುವವರ ಸಂಖ್ಯೆ ಈಗಲೂ ಸಾಕಷ್ಟಿದೆ. ಅದರಲ್ಲೂ ನಗರ ಭಾಗದ ಹಲವರಿಗೆ ಮತದಾನದ ಕುರಿತು ಆಸಕ್ತಿಯೇ ಇಲ್ಲದಿರುವುದು ಇಡೀ ಪ್ರಜಾಪ್ರಭುತ್ವದ ಸೋಲು. ಈ ಹಿನ್ನೆಲೆಯಲ್ಲಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ “ಉದಯವಾಣಿ’ ನಾಡಿನ ಗಣ್ಯರನ್ನು ಮಾತನಾಡಿಸಿ ಅಭಿಪ್ರಾಯವನ್ನು ಸಂಗ್ರಹಿಸಿತು. ಪ್ರತಿಯೊಬ್ಬ ಗಣ್ಯರ ಮಾತಿನ ತಥ್ಯ ಒಂದೇ- ದೇಶದ ಅಭಿವೃದ್ಧಿ ದೃಷ್ಟಿಯಿಂದ ಪ್ರತಿಯೊಬ್ಬರೂ ಮತದಾನದಲ್ಲಿ ಭಾಗವಹಿಸಿ, ಯಾವುದೇ ಜಾತಿ, ಧರ್ಮದ ಹಂಗಿಲ್ಲದೆ ಮತಚಲಾಯಿಸಿ ಎಂದು ಮನವಿ ಮಾಡಿದ್ದಾರೆ. ಅಭ್ಯರ್ಥಿಯ ಬಗ್ಗೆ ತಿಳಿದು ಮತಚಲಾಯಿಸಿ, ಮತವನ್ನು ಮಾರಿಕೊಳ್ಳಬೇಡಿ ಎಂದು ಹಲವು ಗಣ್ಯರು ಕೋರಿದ್ದಾರೆ.

ಪ್ರಾಮಾಣಿಕ ಅಭ್ಯರ್ಥಿಗೆ ಮತ ಹಾಕಿ
ಪ್ರಾಮಾಣಿಕ ಅಭ್ಯರ್ಥಿಗೆ ಅಮೂಲ್ಯವಾದ ಮತ ಹಾಕಿದರೆ ಉತ್ತಮ. ಭ್ರಷ್ಟಾಚಾರದ ವಿರುದ್ಧ ಹೋರಾಡುವವರನ್ನು ಆರಿಸಿ ತರಬೇಕು. ಇದರಿಂದ ದೇಶದ ಅಭಿವೃದ್ಧಿಗೆ ಸಹಕಾರವಾಗುತ್ತದೆ. ಎಲ್ಲರೂ ಮತದಾನ ಮಾಡಿ ಅಮೂಲ್ಯವಾದ ಹಕ್ಕು ಚಲಾಯಿಸಿ.
-ನ್ಯಾ.ಬಿ.ಎಸ್‌.ಪಾಟೀಲ್‌, ಲೋಕಾಯುಕ್ತರು

ಮೂಲಭೂತ ಹಕ್ಕು ಚಲಾಯಿಸಿ
ಮತದಾನ ಮಾಡುವ ಮೂಲಕ ಹಕ್ಕು ಚಲಾಯಿಸಿ. ಮತದಾನದಿಂದ ದೂರ ಉಳಿದರೆ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಮಾಡುವ ಅತಿ ದೊಡ್ಡ ಅನ್ಯಾಯ. ಜವಾಬ್ದಾರಿಯುತ ನಾಯಕರನ್ನು ಆಯ್ಕೆ ಮಾಡಿ.
-ಡಾ. ಎಚ್‌.ಸುದರ್ಶನ ಬಲ್ಲಾಳ್‌, ಅಧ್ಯಕ್ಷರು, ಮಣಿಪಾಲ ಸಮೂಹ ಆಸ್ಪತ್ರೆಗಳು

ಪ್ರತಿಯೊಂದು ಮತವೂ ಮಹತ್ವದ್ದೇ
ನಮ್ಮ ವೈಯಕ್ತಿಕ ಸಂಭ್ರಮಗಳನ್ನು ಹೇಗೆ ಮಿಸ್‌ ಮಾಡಿಕೊಳ್ಳುವುದಿಲ್ಲವೋ ಅದೇ ರೀತಿ ಈ ಸಂಭ್ರಮ ವನ್ನು ಮಿಸ್‌ ಮಾಡಬಾರದು. ಮತದಾನ ಅನ್ನೋ ಮ್ಯಾಚ್‌ನಲ್ಲಿ ಒಂದೇ ಬಾಲ್‌ ಇರೋದು. ಅದರಲ್ಲೇ ಸಿಕ್ಸರ್‌ ಹೊಡಿಬೇಕು. ಪ್ರತಿಯೊಂದು ಮತವೂ ಮಹತ್ವದ್ದೇ.
-ರಮೇಶ್‌ ಅರವಿಂದ್‌, ಚಿತ್ರನಟ

ನಮಗೆ ಸಿಕ್ಕ ಶ್ರೇಷ್ಠ ಹಕ್ಕು
ಪ್ರಜಾಪ್ರಭುತ್ವದಲ್ಲಿ ನಮಗೆ ಸಿಕ್ಕ ಶ್ರೇಷ್ಠ ಹಕ್ಕು ಮತದಾನ. ಈ ಹಕ್ಕನ್ನು ನಾವು ಸರಿಯಾಗಿ ಬಳಸಿದರೆ ನ‌ಮ್ಮ ಭವಿಷ್ಯ ಚೆನ್ನಾಗಿರುತ್ತದೆ. ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವ, ಗೆದ್ದ ನಂತರವೂ ಕೆಲಸ ಮಾಡುವ ವ್ಯಕ್ತಿಯನ್ನು ಆಯ್ಕೆ ಮಾಡುವತ್ತ ನಿಮ್ಮ ಮತ ಚಲಾವಣೆಯಾಗಲಿ.
-ಗಣೇಶ್‌, ಚಿತ್ರನಟ

5 ವರ್ಷಗಳ ಭವಿಷ್ಯ ನಮ್ಮ ಕೈಯಲ್ಲಿದೆ
ಮುಂದಿನ 5 ವರ್ಷಗಳ ದೇಶದ ಭವಿಷ್ಯ ನಮ್ಮ ಕೈಯಲ್ಲಿದೆ. ಐದು ವರ್ಷ ಕಾಲ ದೇಶ ಹೇಗಿರಬೇಕು ಎಂದು ನಿರ್ಧರಿಸಬೇಕಾದರೆ ನಾವು ಮತದಾನ ಮಾಡಬೇಕು.
-ಎಚ್‌.ನೇಹಾ, 2011ರ ಏಕಲವ್ಯ ಪ್ರಶಸ್ತಿ ವಿಜೇತ ಪವರ್‌ ಲಿಫ್ಟರ್‌

ಮತ ಮಾರಿಕೊಳ್ಳದಿರಿ
ನಿಮ್ಮ ಮತ ನಿಮ್ಮ ಹಕ್ಕು. ಯಾವ ಕಾರಣಕ್ಕೂ ಇದನ್ನು ಮಾರಿಕೊಳ್ಳದಿರಿ. ಅದರಲ್ಲೂ ಮೊದಲ ಬಾರಿಗೆ ಮತದಾನ ಮಾಡುವವರು ಎಚ್ಚರದಿಂದ ಮತ ಚಲಾಯಿಸಿ. ಮತದಾನದ ಅರಿವು ಹೆಚ್ಚಾಗಬೇಕಾದರೆ ಒಳ್ಳೆಯ ಶಿಕ್ಷಣದ ಅಗತ್ಯವೂ ಇದೆ.
-“ದುನಿಯಾ’ ವಿಜಿ, ಚಿತ್ರನಟ

ಟಾಪ್ ನ್ಯೂಸ್

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

3-uv-fusion

UV Fusion: ನಿಷ್ಕಲ್ಮಶ ಮನ ನಮ್ಮದಾಗಲಿ

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

2-uv-fusion

UV Fusion: ಆರಾಮಕ್ಕಿರಲಿ  ವಿರಾಮ…

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.