Lok Sabha Election 2024: ಬಾಗಲಕೋಟೆ-ಬಂಡಾಯಗಾರರ ಬೆಂಬಲ ಯಾರಿಗೆ?


Team Udayavani, Apr 1, 2024, 6:05 PM IST

Lok Sabha Election 2024: ಬಾಗಲಕೋಟೆ-ಬಂಡಾಯಗಾರರ ಬೆಂಬಲ ಯಾರಿಗೆ?

ಉದಯವಾಣಿ ಸಮಾಚಾರ
ಬಾಗಲಕೋಟೆ: ಕಳೆದ ವಿಧಾನಸಭೆ ಚುನಾವಣೆಯಲ್ಲಿತಮ್ಮ ಮಾತೃಪಕ್ಷದ ಟಿಕೆಟ್‌ ಆಕಾಂಕ್ಷಿಗಳಾಗಿದ್ದವರು, ಟಿಕೆಟ್‌ ಸಿಗದೇ ಬಂಡಾಯವೆದಿದ್ದ ಹಲವು ನಾಯಕರು ಸದ್ಯ ಅತಂತ್ರದಲ್ಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಈ ಬಂಡಾಯಗಾರರ ಬೆಂಬಲದ ಬಲ ಯಾರಿಗೆ ? ಎಂಬ ಪ್ರಶ್ನೆ ಹಲವರಲ್ಲಿ ಕಾಡುತ್ತಿದೆ.

ನಿಜ, ಬಾಗಲಕೋಟೆ, ಜಮಖಂಡಿ, ಹುನಗುಂದ, ಮುಧೋಳ ಹಾಗೂ ತೇರದಾಳ ವಿಧಾನಸಭೆ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಎರಡೂ ಪಕ್ಷಗಳಲ್ಲಿ ಬಂಡಾಯ ಕಾಣಿಸಿಕೊಂಡಿತ್ತು. ಈ ಬಂಡಾಯಗಾರರ ಸ್ಪರ್ಧೆಯೇ, ಆಯಾ ಪಕ್ಷಗಳ ಅಧಿಕೃತ ಅಭ್ಯರ್ಥಿಗಳ ಸೋಲಿಗೆ ಕಾರಣವಾಗಿತ್ತು ಎಂಬುದು ಹಳೆಯ ಮಾತು. ಆದರೆ, ಅವರೆಲ್ಲ ಪ್ರಸ್ತುತ ಲೋಕಸಭೆ ಚುನಾವಣೆಗೆ ಯಾವ ಪಕ್ಷದ ಅಭ್ಯರ್ಥಿಗೆ ಬೆಂಬಲ ಕೊಡುತ್ತಾರೆ ಎಂಬ ಚರ್ಚೆ ನಡೆಯುತ್ತಿದೆ.

ಬಾಗಲಕೋಟೇಲಿ ಎಂಸಿಸಿ-ಡಾ| ಪಾಟೀಲ:
ಬಾಗಲಕೋಟೆ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ ಟಿಕೆಟ್‌ಗೆ ಪ್ರಬಲ ಬೇಡಿಕೆ ಇಟ್ಟಿದ್ದ ಡಾ| ದೇವರಾಜ ಪಾಟೀಲ, ಟಿಕೆಟ್‌ ಕೈ ತಪ್ಪಿದ ಬಳಿಕ ಜೆಡಿಎಸ್‌ ಸೇರ್ಪಡೆಗೊಂಡು ಅಭ್ಯರ್ಥಿಯಾಗಿದ್ದರು. ಆ ಚುನಾವಣೆಯಲ್ಲಿ ಅವರು 3,470 ಮತ ಪಡೆದಿದ್ದರು. ಬಿಜೆಪಿಯ ಟಿಕೆಟ್‌ ಕೊಡಿ ಇಲ್ಲವೇ ಟಿಕೆಟ್‌ ಬದಲಾವಣೆ ಮಾಡಿ ಎಂಬ ಅಭಿಯಾನ ಮಾಡಿದ್ದ ಚರಂತಿಮಠ ಮತ್ತು ವಸ್ತ್ರದ ಫೌಂಡೇಶನ್‌ ಅಧ್ಯಕ್ಷ ಮಲ್ಲಿಕಾರ್ಜುನ ಚರಂತಿಮಠ ಕೂಡ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆಗ 10,116 ಮತ ಪಡೆದು ಗಮನ ಸೆಳೆದಿದ್ದರು. ಇಲ್ಲಿ ಕಾಂಗ್ರೆಸ್‌ನ ಹಾಲಿ ಶಾಸಕ ಎಚ್‌.ವೈ. ಮೇಟಿ, ಬಿಜೆಪಿ ಬಂಡಾಯದ ಲಾಭ ಪಡೆದು 5,878 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಜಮಖಂಡಿಯಲ್ಲಿ ಬೆಳಗಲಿ: ಜಿಲ್ಲೆಯ ಜಮಖಂಡಿ ವಿಧಾನಸಭೆ ಕ್ಷೇತ್ರದಲ್ಲಿ ಜಿ.ಪಂ. ಮಾಜಿ ಉಪಾಧ್ಯಕ್ಷ ಸುಶೀಲಕುಮಾರ ಬೆಳಗಲಿ, ಕಾಂಗ್ರೆಸ್‌ ಟಿಕೆಟ್‌ ಗಾಗಿ ಕೊನೆವರೆಗೂ ಕಸರತ್ತು ನಡೆಸಿದ್ದರು. ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಅವರೂ ಕಾಂಗ್ರೆಸ್‌ಗೆ ಬಂಡಾಯವಾಗಿ ಸ್ಪರ್ಧೆ ಮಾಡಿದ್ದರು. ಇಲ್ಲಿ ಬೆಳಗಲಿ ಅವರು 5,975 ಮತ ಪಡೆದು ಗಮನ ಸೆಳೆದರು. ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿ ಆನಂದ ನ್ಯಾಮಗೌಡರು, 4,716 ಮತಗಳಿಂದ ಪರಾಭವಗೊಂಡರು. ಕಾಂಗ್ರೆಸ್‌ನ ಬಂಡಾಯದ ಲಾಭ ಪಡೆದ
ಬಿಜೆಪಿಯ ಜಗದೀಶ ಗುಡಗುಂಟಿ ಶಾಸಕರಾಗಿ ಆಯ್ಕೆಯಾಗಿದ್ದರು.

ಮುಧೋಳದಲ್ಲಿ ಫಲಿತಾಂಶ ಉಲ್ಟಾಪಲ್ಟಾ:
ಜಿಲ್ಲೆಯ ಏಕೈಕ ಮೀಸಲು ಕ್ಷೇತ್ರ ಮುಧೋಳದಲ್ಲೂ ಕಾಂಗ್ರೆಸ್‌ಗೆ ಬಂಡಾಯವಿತ್ತು. 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸತೀಶ ಬಂಡಿವಡ್ಡರ ಆಗ ಪರಾಭಗೊಂಡಿದ್ದರು. ಸೋತರೂ 2023ರ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಲೇ ಬಂದಿದ್ದರು.

ಮೊನ್ನೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ಕೈ ತಪ್ಪಿತ್ತು. ಆಗ ಅವರೂ ಕಾಂಗ್ರೆಸ್‌ಗೆ ರೆಬೆಲ್‌ ಆಗಿ ಸ್ಪರ್ಧೆ ಮಾಡಿ, 17,902 ಮತ ಪಡೆದಿದ್ದರು. ಬಂಡಿವಡ್ಡರ ಅವರು ಕಾಂಗ್ರೆಸ್‌ಗೆ ಬಂಡಾಯವಾಗಿ ಸ್ಪರ್ಧೆ ಮಾಡಿದ್ದರೂ ಅದರ ಲಾಭ ಇಲ್ಲಿ ಬಿಜೆಪಿಗೆ ತಟ್ಟಲಿಲ್ಲ. ಬದಲಾಗಿ ಬಿಜೆಪಿಗೇ ಮುಳುವಾಗಿತ್ತು. ಬಿಜೆಪಿಯ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಇಲ್ಲಿ, 17,335 ಮತಗಳ ಅಂತರದಿಂದ ಪರಾಭವಗೊಂಡರು. ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿ ಆರ್‌.ಬಿ. ತಿಮ್ಮಾಪುರ,
17 ವರ್ಷಗಳ ಬಳಿಕ ಸಾರ್ವತ್ರಿಕ ಚುನಾವಣೆಯಲ್ಲಿ 17 ಸಾವಿರ ಮತಗಳ ಅಂತರದಿಂದ ಗೆದ್ದು, ಕಾಂಗ್ರೆಸ್‌ ಸರ್ಕಾರದಲ್ಲಿ ಅಬಕಾರಿ ಸಚಿವರೂ ಆಗಿದ್ದಾರೆ.

ತೇರದಾಳದಲ್ಲಿ ಡಾ|ಪದ್ಮಜೀತ: ಇನ್ನು ತೇರದಾಳ ವಿಧಾನಸಭೆ ಮತಕ್ಷೇತ್ರದ ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ದೊಡ್ಡ
ಪೈಪೋಟಿಯೇ ಇತ್ತು. ಸುಮಾರು 13ಕ್ಕೂ ಹೆಚ್ಚು ಜನ ಇಲ್ಲಿ ಆಕಾಂಕ್ಷಿಗಳಾಗಿದ್ದರು. ಪ್ರಮುಖ ಆಕಾಂಕ್ಷಿಯಾಗಿದ್ದ ಡಾ|ಪದ್ಮಜೀತ ನಾಡಗೌಡ ಪಾಟೀಲರು, ಕಾಂಗ್ರೆಸ್‌ ಟಿಕೆಟ್‌ ತಪ್ಪಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ, ಬರೋಬ್ಬರಿ 22,480 ಮತ ಪಡೆದಿದ್ದರು. ಇಲ್ಲಿನ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿ ಸಿದ್ದು ಕೊಣ್ಣೂರ, 10,745 ಮತಗಳ ಅಂತರದಿಂದ ಪರಾಭವಗೊಂಡರೆ, ಬಿಜೆಪಿಯ ಸಿದ್ದು ಸವದಿ, 4ನೇ ಬಾರಿ ಶಾಸಕರಾಗಿ ಆಯ್ಕೆಯಾದ ದಾಖಲೆ ತಮ್ಮದಾಗಿಸಿಕೊಂಡರು.

ಒಟ್ಟಾರೆ, ಜಿಲ್ಲೆಯ ಏಳು ವಿಧಾನಸಭೆ ಮತಕ್ಷೇತ್ರ ವ್ಯಾಪ್ತಿಯ ಐದು ಕ್ಷೇತ್ರಗಳಲ್ಲಿ ಕಳೆದ ಬಾರಿ ಬಂಡಾಯ ಉಂಟಾಗಿತ್ತು. ಈ ಬಂಡಾಯ ಬಳಸಿಕೊಳ್ಳಲು ಸಚಿವ ಶಿವಾನಂದ ಪಾಟೀಲ ಗಂಭೀರ ಪ್ರಯತ್ನದಲ್ಲಿದ್ದಾರೆ ಎಂದು ಜಿಲ್ಲೆಯಾದ್ಯಂತ ಹರಡಿರುವ ಸುದ್ದಿ. ಆದರೆ, ಬಿಜೆಪಿ ಮನಸ್ಥಿತಿ ಇರುವ, ಅದೇ ಪಕ್ಷದಿಂದ ಹೊರ ಬಂದವರನ್ನು ಮರಳಿ, ತಮ್ಮ ಪಕ್ಷಕ್ಕೆ ಕರೆ ತರುವ ಪ್ರಯತ್ನ ಬಿಜೆಪಿಯಲ್ಲಿ ನಡೆದಿಲ್ಲ ಎನ್ನಲಾಗಿದೆ.

ಬಂಡಾಯಗಾರರಿಗೆ ಸಚಿವ ಶಿವಾನಂದ ಗಾಳ !
ವಿಜಯಪುರ ಜಿಲ್ಲೆಯ ರಾಜಕೀಯದಲ್ಲಿ ಟ್ರಿಬಲ್‌ ಶ್ಯೂಟರ್‌ ಎಂದೇ ಹೆಸರು ಪಡೆದ ಸಕ್ಕರೆ-ಜವಳಿ ಸಚಿವ ಶಿವಾನಂದ ಪಾಟೀಲ, ತಮ್ಮ ಪುತ್ರಿಯ ಗೆಲುವಿಗೆ ನಾನಾ ರೀತಿ ತಂತ್ರಗಾರಿಕೆ ಹೆಣೆಯುತ್ತಿದ್ದಾರೆ. ಸ್ವತಃ ತಾವು ಹಾಗೂ ತಮ್ಮ ಪುತ್ರಿ ಸಂಯುಕ್ತಾ ಪಾಟೀಲರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದ ಹಲವರನ್ನು ಭೇಟಿ ಮಾಡಿ, ಈ ಬಾರಿ ತಮಗೆ ಬೆಂಬಲ ಕೊಡಲು ಕೋರಿದ್ದಾರೆ. ಟಿಕೆಟ್‌ ಘೋಷಣೆಗೂ ನಾಲ್ಕು ದಿನ ಮುಂಚೆ ಕೆಲ ನಾಯಕರನ್ನು ಭೇಟಿ ಮಾಡಿ ಸಪೋರ್ಟ್‌ ಕೇಳಿದ್ದಾರೆ ಎನ್ನಲಾಗಿದೆ. ಸಚಿವ ಶಿವಾನಂದ ಪಾಟೀಲರು, ತಮ್ಮ ಪುತ್ರಿಯನ್ನು ಶತಾಯಗತಾಯ ಗೆಲ್ಲಿಸಲೇಬೇಕೆಂಬ
ಹಠಕ್ಕೆ ಬಿದ್ದಿದ್ದು, ಬಿಜೆಪಿ-ಕಾಂಗ್ರೆಸ್‌ನಲ್ಲಿ ಅಸಮಾಧಾನಗೊಂಡು ದೂರ ಉಳಿದವರನ್ನೂ ಸಂಪರ್ಕಿಸಿ, ನೀವು ನೇರವಾಗಿ ಪಕ್ಷಕ್ಕೆ ಬರದಿದ್ದರೂ ಪರವಾಗಿಲ್ಲ. ನಮಗೆ ಬೆಂಬಲ ಕೊಡಿ ನಾನು ನಿಮ್ಮೊಂದಿಗೆ ಇರುವೆ ಎಂಬ ಅಭಯ ನೀಡಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

ಹೊಕ್ರಾಣಿ-ನವಲಿಹಿರೇಮಠ ನಿಲುವೇನು?
ಕಳೆದ 2018ರ ಚುನಾವಣೆಯಲ್ಲಿ ಹುನಗುಂದ ಕ್ಷೇತ್ರಕ್ಕೆ ಜೆಡಿಎಸ್‌ ಬೆಂಬಲಗೊಂದಿಗೆ ಅಭ್ಯರ್ಥಿಯಾಗಿದ್ದ, 2023ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಬರೋಬ್ಬರಿ 33,790 ಮತ ಪಡೆದಿದ್ದ ಸಮಾಜ ಸೇವಕ ಎಸ್‌.ಆರ್‌. ನವಲಿಹಿರೇಮಠರು, ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಬೆಂಬಲ ನೀಡುತ್ತಾರೆ ಎಂಬ ಕುತೂಹಲ ಹೆಚ್ಚಿದೆ. ಕಳೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ದೊಡ್ಡನಗೌಡ ಪಾಟೀಲರು 30,007 ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಕಾಂಗ್ರೆಸ್‌ನ ವಿಜಯಾನಂದ ಕಾಶಪ್ಪನವರ, ಜಿಲ್ಲೆಯಲ್ಲೇ ಅತಿಹೆಚ್ಚು ಅಂತರದಿಂದ ಗೆದ್ದ ಖ್ಯಾತಿ ಪಡೆದಿದ್ದರು. ನವಲಿಹಿರೇಮಠರ ಸ್ಪರ್ಧೆ, ಬಿಜೆಪಿ ಅಭ್ಯರ್ಥಿ ಸೋಲಿಗೆ ಕಾರಣವಾಯಿತು ಎಂಬ ವಿಶ್ಲೇಷಣೆ ಆಗ ನಡೆಸಲಾಯಿತು.

ಪ್ರಸ್ತುತ ಲೋಕಸಭೆ ಚುನಾವಣೆಗೆ ಅವರ ಬೆಂಬಲ ಯಾರಿಗೆ ದೊರೆಯಲಿದೆ ಕಾದು ನೋಡಬೇಕು. ಇನ್ನು ಬಾಗಲಕೋಟೆ
ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ತಮ್ಮದೇ ಆದ ಛಾಪು ಹೊಂದಿರುವ ಯುವ ನಾಯಕ ಸಂತೋಷ ಹೊಕ್ರಾಣಿ ಕೂಡ, ಕಳೆದ
ವಿಧಾನಸಭೆ ಚುನಾವಣೆಗೂ ಮುಂಚೆ, ಬಿಜೆಪಿಯಿಂದ ಉಚ್ಛಾಟನೆಗೊಂಡವರು. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ
ಬಂಡಾಯವೆದ್ದಿದ್ದ ಮಲ್ಲಿಕಾರ್ಜುನ ಚರಂತಿಮಠ ಜತೆಗೂಡಿ ಚುನಾವಣೆ ಎದುರಿಸಿದ್ದರು. ಇದೀಗ ಯಾವುದೇ ಪಕ್ಷದಲ್ಲಿ
ಗುರುತಿಸಿಕೊಂಡಿಲ್ಲವಾದರೂ ಕಾಂಗ್ರೆಸ್‌ -ಬಿಜೆಪಿಯಲ್ಲೂ ಅವರ ಗೆಳೆಯರ ಬಳಗವಿದೆ. ಆದರೆ, ಲೋಕಸಭೆ ಚುನಾವಣೆಗೆ ಅವರ ನೇರ  ಬೆಂಬಲ ಯಾರಿಗೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ

*ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.