Lok Sabha Elections; ಕಾಂಗ್ರೆಸ್‌, ಬಿಜೆಪಿ ಪ್ರಾಬಲ್ಯ: ಜೆಡಿಎಸ್‌ ನಿರ್ಣಾಯಕ! 

ಕಾಂಗ್ರೆಸ್‌ ಬಲಿಷ್ಠವಾಗಿದ್ದ ಕ್ಷೇತ್ರದಲ್ಲೀಗ ಬಿಜೆಪಿಯದೇ ಪ್ರಾಬಲ್ಯ

Team Udayavani, Mar 4, 2024, 7:15 AM IST

ಮೈಸೂರು:  ಸಾಂಸ್ಕೃತಿಕ ರಾಜಧಾನಿ ಎಂದೇ ಹೆಗ್ಗಳಿಕೆ ಪಡೆದಿರುವ ಮೈಸೂರು ಹಾಗೂ ವಿಶಿಷ್ಟ ಸಂಸ್ಕೃತಿಯ ನಾಡಾದ ಕೊಡಗು ಜಿಲ್ಲೆಗಳನ್ನು ಒಳಗೊಂಡ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ರಾಜಕೀಯವಾಗಿ ಅತ್ಯಂತ ಪ್ರಭಾವಿ ಕ್ಷೇತ್ರ. ಒಂದು ಕಾಲದಲ್ಲಿ ಇದು ಕಾಂಗ್ರೆಸ್‌ನ ಭದ್ರಕೋಟೆ ಎಂದೇ ಪರಿಗಣಿತವಾಗಿದ್ದು, ಕಳೆದ ಒಂದೂವರೆ ದಶಕದಲ್ಲಿ ಬಿಜೆಪಿಯ ಕಮಲ ಇಲ್ಲಿ ಅರಳಲಾರಂಭಿಸಿದೆ.

ಘಟಾನುಘಟಿಗಳು ಈ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಕಾಂಗ್ರೆಸ್‌ನ ಎಂ.ಎಸ್‌. ಗುರುಪಾದಸ್ವಾಮಿ, ತುಳಸೀದಾಸ್‌ ದಾಸಪ್ಪ, ಎಂ.ರಾಜಶೇಖರ ಮೂರ್ತಿ, ಶ್ರೀಕಂಠದತ್ತ ಒಡೆಯರ್‌ ಅವರು ಸಂಸದರಾಗಿದ್ದ ಈ ಕ್ಷೇತ್ರವನ್ನು 1998ರಲ್ಲಿ ಸಿ.ಎಚ್‌.ವಿಜಯಶಂಕರ್‌ ಬಿಜೆಪಿಯ ತೆಕ್ಕೆಗೆ ಎಳೆದುಕೊಂಡ  ಬಳಿಕ ಇಲ್ಲಿ ಕಾಂಗ್ರೆಸ್‌ ಪಾರಮ್ಯ ಮುರಿಯಿತು. 1952ರಲ್ಲಿ ಆರಂಭಗೊಂಡ ಮೈಸೂರು ಲೋಕಸಭಾ ಕ್ಷೇತ್ರ ಇದುವರೆಗೆ ಒಟ್ಟು 17 ಚುನಾವಣೆಯನ್ನು ಕಂಡಿದ್ದು, 12 ಬಾರಿ ಕಾಂಗ್ರೆಸ್‌ ಗೆಲುವು ಸಾಧಿಸಿದ್ದರೆ, ಕ್ಷೇತ್ರ ಮರು ವಿಂಗಡಣೆಗೂ ಮುನ್ನ ಬಿಜೆಪಿ ಎರಡು ಬಾರಿ ಗೆದ್ದಿದೆ. ಬಳಿಕ ಮತ್ತೆರೆಡು ಬಾರಿ ಬಿಜೆಪಿ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಒಟ್ಟು ನಾಲ್ಕು ಬಾರಿ ಗೆದ್ದಿದೆ.

ಆರಂಭದಲ್ಲಿ ಕಿಸಾನ್‌ ಮಜ್ದೂರ್‌ ಪ್ರಜಾಪಾರ್ಟಿ ಗೆಲುವು ಕಂಡಿದೆ. 2004ರಲ್ಲಿ ಮತ್ತೆ ವಿಜಯಶಂಕರ್‌ ಗೆಲುವು ಸಾಧಿಸಿದರೆ, 2009ರಲ್ಲಿ ಅಡಗೂರು ವಿಶ್ವನಾಥ್‌ ಕಾಂಗ್ರೆಸ್‌ನಿಂದ ಸಂಸದರಾದರು. ಬಳಿಕ ಕ್ಷೇತ್ರ ಪುನರ್‌ ವಿಂಗಡಣೆ ಆಗಿ ಅಚ್ಚರಿಯ ಅಭ್ಯರ್ಥಿಯಾಗಿ 2014ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದ ಹಾಲಿ ಸಂಸದ ಪ್ರತಾಪಸಿಂಹ, 2019ರ ಚುನಾವಣೆಯಲ್ಲೂ ಸ್ಪರ್ಧಿಸಿ ಪ್ರಚಂಡ ಗೆಲುವು ಸಾಧಿಸಿದರು.

ಕ್ಷೇತ್ರದ ಪರಿಚಯ
ಕೊಡಗು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ ಹಾಗೂ ಮೈಸೂರಿನ ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ಸಹಿತ  8 ವಿಧಾನಸಭಾ ಕ್ಷೇತ್ರಗಳು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟಿವೆ. ಮಡಿಕೇರಿ ಮತ್ತು ವಿರಾಜಪೇಟೆ, ಪಿರಿಯಾಪಟ್ಟಣ, ಚಾಮರಾಜ ಮತ್ತು ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳ‌ಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸುವ ಮೂಲಕ 5 ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದರೆ, ಜೆಡಿಎಸ್‌ ಚಾಮುಂಡೇಶ್ವರಿ ಮತ್ತು ಹುಣಸೂರು ಕ್ಷೇತ್ರದಲ್ಲಿ ಗೆದ್ದು 2 ಕ್ಷೇತ್ರಗಳು ಉಳಿಸಿಕೊಂಡಿವೆ. ಬಿಜೆಪಿ ಕೃಷ್ಣರಾಜ ಕ್ಷೇತ್ರಕ್ಕಷ್ಟೇ ಸೀಮಿತವಾಗಿದೆ.

ಜೆಡಿಎಸ್‌ ಮತಗಳೇ ನಿರ್ಣಾಯಕ
ಕ್ಷೇತ್ರದಲ್ಲಿ ಹಿಂದಿನ ಎಲ್ಲ ಚುನಾವಣೆಗಳಲ್ಲೂ ಬಹುತೇಕ ತ್ರಿಕೋನ ಸ್ಪರ್ಧೆ ನಡೆದು ಬಂದಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್‌, ಜೆಡಿಎಸ್‌ ನಡುವೆ ಪ್ರಬಲ ಪೈಪೋಟಿ ಇದೆ. ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಶಾಸಕರು ಹೆಚ್ಚು ಇದ್ದಾಗಲೂ ಬಿಜೆಪಿ ಅದರ ಲಾಭ ಪಡೆದು ಗೆಲುವು ಸಾಧಿಸಿರುವ ಉದಾಹರಣೆಗಳಿವೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಮಾಡಿಕೊಂಡು ಸ್ಪರ್ಧೆ ಮಾಡಿದ್ದರೂ ಬಿಜೆಪಿಗೆ ಜಯ ಒಲಿದಿತ್ತು. ಆದರೆ ಈಗ ಬಿಜೆಪಿ ಹಾಗೂ ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡಿದೆ. ಕಾಂಗ್ರೆಸ್‌ ಮಣಿಸಲು ಅಥವಾ ರಾಜಕೀಯ ಉದ್ದೇಶಕ್ಕಾಗಿ ಜಿಲ್ಲೆಯ ಜೆಡಿಎಸ್‌ ನಾಯಕರು, ಪರೋಕ್ಷವಾಗಿ ಬಿಜೆಪಿಯೊಂದಿಗೆ ಪರೋಕ್ಷ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದದ್ದು ಗುಟ್ಟಾಗಿ ಉಳಿದಿಲ್ಲ. ಈಗ ಬಹಿರಂಗವಾಗಿಯೇ ಕಣಕ್ಕೆ ಇಳಿಯಲಿದ್ದಾರೆ. ಹೀಗಾಗಿ, ಇಲ್ಲಿ ಬಿಜೆಪಿ, ಕಾಂಗ್ರೆಸ್‌ ನಡುವೆ ನೇರ ಹಣಾಹಣಿ ಇದ್ದರೂ, ಜೆಡಿಎಸ್‌ ಬಲವೂ ನಿರ್ಣಾಯಕವಾಗಿದೆ.

ಕಳೆದ ಎರಡು ಚುನಾವಣೆಗಳ ಫ‌ಲಿತಾಂಶ ಗಮನಿಸಿದರೆ, ಈ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯ ಹೆಚ್ಚಿರುವುದರಿಂದ ಯಾವ ಪಕ್ಷ ಒಕ್ಕಲಿಗ ಅಭ್ಯರ್ಥಿಗೆ ಮಣೆ ಹಾಕುವುದೋ ಆ ಅಭ್ಯರ್ಥಿ ಗೆಲವು ಸಾಧಿಸುವ ಸಾಧ್ಯತೆಗಳಿವೆ. ಈ ಕಾರಣಕ್ಕಾಗಿಯೇ ಬಿಜೆಪಿ ಎರಡು ಬಾರಿ ಗೆಲುವು ಸಾಧಿಸಿದೆ. ಇದರ ಜತೆಗೆ ಜೆಡಿಎಸ್‌ ಬೆಂಬಲವೂ ಅಷ್ಟೇ ಮುಖ್ಯವಾಗಿರುತ್ತದೆ ಎಂದರೆ ತಪ್ಪಾಗಲಾರದು.

ಒಕ್ಕಲಿಗರ ಬಾಹುಳ್ಯದ ಕ್ಷೇತ್ರ
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ 15 ಲಕ್ಷಕ್ಕೂ ಹೆಚ್ಚು ಮತದಾರರಿದ್ದು, ಒಕ್ಕಲಿಗ ಸಮುದಾಯದ ಮತದಾರರೇ ಹೆಚ್ಚಿದ್ದಾರೆ. ಕುರುಬ ಸಮುದಾಯದ ಮತಗಳೂ ಇಲ್ಲಿ ನಿರ್ಣಾಯಕವಾಗಿರುವುದರಿಂದ ಕುರುಬ ಸಮುದಾಯದ ಅಭ್ಯರ್ಥಿಗಳೂ ಇಲ್ಲಿ ಗೆದ್ದಿದ್ದರು. 5.5 ಲಕ್ಷಕ್ಕೂ ಒಕ್ಕಲಿಗ ಸಮುದಾಯದ ಮತಗಳಿದ್ದರೆ, ಇದರೊಂದಿಗೆ ಪರಿಶಿಷ್ಟ ಜಾತಿ, ಲಿಂಗಾಯತ, ಕುರುಬ, ಮುಸ್ಲಿಂ, ನಾಯಕ, ಬ್ರಾಹ್ಮಣ, ಕೊಡಗು ಗೌಡ, ಕೊಡವರು, ನಾಯಕ, ಅಲ್ಪಸಂಖ್ಯಾಕ ಸಮುದಾಯ, ಹಿಂದುಳಿದ ವರ್ಗಗಳ ಮತಗಳು ಇವೆ.

-ಸತೀಶ್‌ ದೇಪುರ

 

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.