Lok Sabha Elections; 20 ಕಡೆ ಕಾಂಗ್ರೆಸ್ ಗೆಲುವು ಖಚಿತ: ಡಿಕೆಶಿ
ದೇವೇಗೌಡರ ಕುಟುಂಬದ ವಿರುದ್ಧ ಮೊದಲ ಹೋರಾಟವಲ್ಲ
Team Udayavani, Mar 16, 2024, 10:51 PM IST
ಬೆಂಗಳೂರು: ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚುನಾವಣಾ ದಿನಾಂಕ ಪ್ರಕಟಗೊಂಡ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಇಲ್ಲಿ ನಾವು ಹೋರಾಟ ಮಾಡಬೇಕು. ಅದನ್ನು ಸಂಭ್ರಮಿಸಿ, ಆನಂದಿಸಬೇಕು. ನಾವು ಮಾಡಿರುವ ಸಾಧನೆ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕು. ಈ ಚುನಾವಣೆಯಲ್ಲಿ ನಾವು 20ಕ್ಕಿಂತ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವಿದೆ. ನಾವು ನಮ್ಮ ಅಭ್ಯರ್ಥಿಗಳನ್ನು ಬಹುತೇಕ ಅಂತಿಮಗೊಳಿಸಿದ್ದೇವೆ ಎಂದರು.
ದೇವೇಗೌಡರ ಕುಟುಂಬದ ವಿರುದ್ಧದ ಮೊದಲಲ್ಲ
ಇದು ಕುಟುಂಬದ ನಡುವಣ ಯುದ್ಧವೋ ಅಥವಾ ಸಿದ್ಧಾಂತ ನಡುವಣ ಯುದ್ಧವೋ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ನಾವು ದೇವೇಗೌಡರ ಕುಟುಂಬದ ವಿರುದ್ಧ ಅನೇಕ ಬಾರಿ ಹೋರಾಟ ಮಾಡಿದ್ದೇವೆ. ನಾನು ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರನ್ನು ಎದುರಿಸಿ ಸೋಲಿಸಿದ್ದೇವೆ. ಈ ಹಿಂದೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಎದುರಿಸಿದ್ದೇವೆ ಎಂದು ತಿಳಿಸಿದರು.
ಮಂಜುನಾಥ್ ಅವರು ಈ ಚುನಾವಣೆಯನ್ನು ಧರ್ಮ ಯುದ್ಧ ಎಂದು ಹೇಳಿದ್ದಾರೆ ಎಂದು ಕೇಳಿದಾಗ, ಇದೆಲ್ಲದರ ಬಗ್ಗೆ ಚುನಾವಣೆ ವೇದಿಕೆಯಲ್ಲಿ ಮಾತನಾಡೋಣ ಎಂದು ತಿಳಿಸಿದರು.
ಜೆಡಿಎಸ್ ಮೇಲೆ ನಂಬಿಕೆ ಇಲ್ಲದಕ್ಕೆ ಮಂಜುನಾಥ್ ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ ಎಂಬ ಸಂಸದ ಡಿ.ಕೆ. ಸುರೇಶ್ ಹೇಳಿಕೆ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ಜೆಡಿಎಸ್ ಪರಿಸ್ಥಿತಿ ನೋಡಿ ಅಯ್ಯೋ ಎನಿಸುತ್ತದೆ. ಅವರಿಗೆ ಅವರ ಪಕ್ಷದ ಮೇಲೆ ನಂಬಿಕೆಯಿಲ್ಲ. ಜೆಡಿಎಸ್ ಕಾರ್ಯಕರ್ತರು ಬೇಸರಗೊಂಡಿದ್ದಾರೆ. ಆ ಮೂಲಕ ಜೆಡಿಎಸ್ ಪಕ್ಷ ಇನ್ನು ಉಳಿದಿಲ್ಲ. ಹೀಗಾಗಿ ಆ ಪಕ್ಷದ ಕಾರ್ಯಕರ್ತರು ಯಾವುದೇ ಇತರೆ ರಾಜಕೀಯ ಪಕ್ಷ ಸೇರಲು ಮುಕ್ತರಾಗಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ