“ಆ್ಯಪ್‌’ ನೋಡಿ, ಕಾರ್ಮಿಕರಿಗೆ ಕೆಲಸ ಕೊಡಿ


Team Udayavani, Dec 23, 2019, 3:08 AM IST

app-nodi

ಬಳ್ಳಾರಿ: ಅಸಂಘಟಿತ ಕಾರ್ಮಿಕರ ಅಭ್ಯುದಯಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿರುವ ಕಾರ್ಮಿಕ ಇಲಾಖೆ, ಇದೀಗ ಮತ್ತೂಂದು ಹೊಸ ಹೆಜ್ಜೆ ಇಟ್ಟಿದೆ. ಅಸಂಘಟಿತ ಕಾರ್ಮಿಕರ ಸಂಪೂರ್ಣ ಮಾಹಿತಿಯುಳ್ಳ “ಆ್ಯಪ್‌’ ಸಿದ್ಧಪಡಿಸಿ, ಕಾರ್ಮಿಕರ ಅಗತ್ಯವುಳ್ಳವರು ನೇರವಾಗಿ ಅವರನ್ನು ಸಂಪರ್ಕಿಸಿ ಕೆಲಸ ನೀಡುವ ಅವಕಾಶ ಕಲ್ಪಿಸಿದೆ.

ಕಾರ್ಮಿಕರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲರನ್ನಾಗಿಸಲು ಈಗಾಗಲೇ ಹಲವು ಯೋಜನೆಗಳು ಜಾರಿಯಲ್ಲಿವೆ. ಕಟ್ಟಡ, ಕಾರ್ಪೇಂಟರ್‌, ಪ್ಲಂಬರ್‌, ಸೆಂಟರಿಂಗ್‌, ಇಲೆಕ್ಟ್ರಿಷಿಯನ್‌ ಸೇರಿ ಇತರ ಅಸಂಘಟಿತ ವಲಯದ ಕಾರ್ಮಿಕರು ಇಲಾಖೆಯಲ್ಲಿ ಹೆಸರು ನೋಂದಾಯಿಸಿ ಕೊಂಡಿದ್ದಾರೆ. ಈ ಅಸಂಘಟಿತ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪರಿಣಿತಿ ಹೊಂದಿರುವ ಕಾರ್ಮಿಕರ ಹೆಸರು, ವಿಳಾಸ, ಮೊಬೈಲ್‌ ಸಂಖ್ಯೆ ಸೇರಿ ಇನ್ನಿತರ ಮಾಹಿತಿಯುಳ್ಳ ಪ್ರತ್ಯೇಕ “ಆ್ಯಪ್‌’ ಸಿದ್ಧಪಡಿಸಲು ಇಲಾಖೆ ಮುಂದಾಗಿದೆ.

ಸಾರ್ವಜನಿಕರ ಬಳಕೆಗೆ ಅನುಕೂಲವಾಗುವಂತೆ ಈ “ಆ್ಯಪ್‌’ ಸಿದ್ಧಪಡಿಸಲಾಗುತ್ತಿದ್ದು, ಇದರ ಮೂಲಕ ಕಟ್ಟಡ ನಿರ್ಮಾಣ ಹಾಗೂ ಅದಕ್ಕೆ ಸಂಬಂಧಿಸಿದ ಯಾವುದೇ ಕೆಲಸಗಳಿದ್ದರೂ, ಅಂತಹ ಕಾರ್ಮಿಕರನ್ನು ಸಂಪರ್ಕಿಸಿ ಕೆಲಸ ವಹಿಸಬಹುದಾಗಿದೆ. ಇದರಿಂದ ಕಾರ್ಮಿಕರಿಗೆ ಉದ್ಯೋಗ ಲಭಿಸುವುದರ ಜತೆಗೆ ಸಾರ್ವಜನಿಕರಿಗೂ ಅನುಕೂಲವಾಗಲಿದೆ.

ಈ ಬಗ್ಗೆ ಇಲಾಖೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, “ಆ್ಯಪ್‌’ ಸಿದ್ಧಪಡಿಸುವ ಜವಾಬ್ದಾರಿಯನ್ನು ಕಿಯೋನಿಕ್ಸ್‌ ಸಂಸ್ಥೆಗೆ ವಹಿಸಿದೆ. ಒಂದು ವೇಳೆ, “ಆ್ಯಪ್‌’ನಲ್ಲಿನ ಮಾಹಿತಿಯನ್ನಾಧರಿಸಿ ಕಾರ್ಮಿಕರಿಗೆ ಕೆಲಸ ನೀಡಿದ ನಂತರ ಏನಾದರೂ ಸಮಸ್ಯೆ ಎದುರಾದರೂ ಸಹ ಕಾರ್ಮಿಕರಿಗೆ ಸಂಬಂಧಿ ಸಿದ ಎಲ್ಲ ಮಾಹಿತಿಯೂ ಇಲಾಖೆಯಲ್ಲಿ ಲಭ್ಯವಿರಲಿದೆ ಎನ್ನುತ್ತಾರೆ ಇಲಾಖೆ ಸಿಬ್ಬಂದಿ.

ಲಭ್ಯ ಕಾರ್ಮಿಕರು: ರಾಜ್ಯ ಸರ್ಕಾರವು ಕಾರ್ಮಿಕ ಇಲಾಖೆಯಲ್ಲಿ ನೋಂದಣಿಯಾಗಿರುವ 43 ವಲಯ ಕಾರ್ಮಿಕರನ್ನು ಸಂಘಟಿತ ವಲಯವೆಂದು ಗುರುತಿಸಿದೆ. ಈ ಪೈಕಿ 12 ಅಸಂಘಟಿತ ವಲಯಗಳಾದ ಹಮಾಲರು, ಮನೆಗೆಲಸ ದವರು, ಚಿಂದಿ ಆಯುವವರು, ಟೇಲರ್, ಮೆಕ್ಯಾನಿಕ್‌, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಖಾಸಗಿ ವಾಣಿಜ್ಯ ಚಾಲಕರನ್ನು ನೋಂದಾಯಿಸಿ ಸ್ಮಾರ್ಟ್‌ಕಾರ್ಡ್‌ಗಳನ್ನು ವಿತರಿಸಲಾಗುತ್ತಿದೆ.

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗುವ ಪೇಂಟರ್‌, ಪ್ಲಂಬರ್‌, ಕಾರ್ಪೇಂಟರ್‌, ಸೆಂಟರಿಂಗ್‌ ಕೆಲಸಗಾರರು, ಕಟ್ಟಡ ನಿರ್ಮಾಣ ಕೆಲಸಗಾರರು, ಇಲೆಕ್ಟ್ರಿಷಿಯನ್ಸ್‌ ಇತ್ಯಾದಿ ಕಾರ್ಮಿಕರು ಅಸಂಘಟಿತ ವಲಯದ ವ್ಯಾಪ್ತಿಗೆ ಬರಲಿದ್ದಾರೆ. ಈ ವಲಯಗಳಲ್ಲಿನ ಅನುಭವಿ, ಕುಶಲತೆಯುಳ್ಳ ಕಾರ್ಮಿಕರ ವಿವರ ಹೊಸ “ಆ್ಯಪ್‌’ನಲ್ಲಿ ಸಿಗಲಿದೆ. ಎಲ್ಲವೂ ಅಂದುಕೊಂಡಂತೆ ಆದಲ್ಲಿ ಶೀಘ್ರದಲ್ಲೇ ಈ “ಆ್ಯಪ್‌’ ಸಾರ್ವಜನಿಕರಿಗೆ ಸಿಗಲಿದೆ.

ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಇಲಾಖೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಅವರಿಗೆ ಉದ್ಯೋಗ ಭದ್ರತೆ ಕಲ್ಪಿಸುವ ಸಲುವಾಗಿ ಪ್ರತ್ಯೇಕ “ಆ್ಯಪ್‌’ ಸಿದ್ಧಪಡಿಸಲಾಗುತ್ತಿದೆ. ಸಾರ್ವಜನಿಕರು “ಆ್ಯಪ್‌’ ಬಳಸಿ ಅನುಭವ, ಕುಶಲತೆಯುಳ್ಳ ಕಾರ್ಮಿಕರ ಸೇವೆಯನ್ನು ಸದುಪಯೋಗಪಡಿಸಿ ಕೊಳ್ಳುವ ಮೂಲಕ ಅವರಿಗೆ ಉದ್ಯೋಗ ಅವಕಾಶ ಕಲ್ಪಿಸುವಂತಾಗಬೇಕು.
-ಎಲ್‌.ಎಸ್‌.ಶ್ರೀಕಂಠಬಾಬು, ಉಪಕಾರ್ಯದರ್ಶಿ, ಕಾರ್ಮಿಕ ಇಲಾಖೆ

* ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.