Vijayapura: ಜೈಲಿನಲ್ಲಿ ಶ್ರೀರಾಮನ ಪೂಜೆ: ಅನ್ಯಕೋಮಿನ ಕೈದಿಗಳಿಂದ ಹಲ್ಲೆ
ಜೈಲಿನಿಂದಲೇ ಮೋದಿಗೆ ವೀಡಿಯೋ ಮಾಡಿ ರಕ್ಷಣೆಗೆ ಮೊರೆ- ರಕ್ಷಣೆಗೆ ಬಾರದ ಜೈಲಧಿಕಾರಿ-ವಿಜಯಪುರ ಜೈಲಿನಲ್ಲಿ ಘಟನೆ
Team Udayavani, Jan 28, 2024, 11:10 PM IST
ವಿಜಯಪುರ: ಅಯೋಧ್ಯೆಯಲ್ಲಿ ಬಾಲರಾಮ ಮೂರ್ತಿ ಪ್ರತಿಷ್ಠಾಪನೆ ದಿನ ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ರಾಮನ ಪೂಜೆ ಮಾಡಿ ಪ್ರಸಾದ ವಿತರಿಸಿದ ಕೈದಿಗಳ ಮೇಲೆ ಹಲ್ಲೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ವಿಜಯಪುರ ಕೇಂದ್ರ ಕಾರಾಗೃಹದಲ್ಲಿರುವ ಮಹಾರಾಷ್ಟ್ರ ಮೂಲದ ಪರಮೇಶ್ವರ ಎಂಬಾತ ಅನ್ಯಧರ್ಮೀಯ ಕೈದಿಗಳು ಹಲ್ಲೆ ನಡೆಸಿದ್ದಾಗಿ ಜೈಲಿನಿಂದಲೇ 3 ನಿಮಿಷ 5 ಸೆಕೆಂಡ್ಗಳ ವೀಡಿಯೋ ಮಾಡಿ ರಕ್ಷಣೆಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಮೊರೆ ಇಟ್ಟಿದ್ದಾನೆ.
ನಮ್ಮ ಮೇಲೆ ಹಲ್ಲೆ ನಡೆಸಿದ ಸಹಕೈದಿಗಳ ವಿರುದ್ಧ ಕ್ರಮ ಕೈಗೊಳ್ಳದೆ ಅಧಿಕಾರಿಗಳು ಅನ್ಯಾಯ ಮಾಡಿದ್ದಾರೆ. ಕೂಡಲೇ ನಮಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನ್ಯಾಯ ಕಲ್ಪಿಸಬೇಕು ಎಂದು ಕೋರಿದ್ದು, ಈ ವೀಡಿಯೋ ವೈರಲ್ ಆಗಿದೆ.
ಜ.22ರಂದು ರಾಮನ ಪೂಜೆಗೆ ಅವಕಾಶ ನೀಡುವಂತೆ ಜೈಲ ಧಿಕಾರಿಗಳಿಗೆ ಮನವಿ ಮಾಡಿದ್ದರೂ ಸ್ಪಂದಿಸಲಿಲ್ಲ. ಆದರೂ ಆ ದಿನ ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ರಾಮನಿಗೆ ಪೂಜೆ ಸಲ್ಲಿಸಿ, ಪ್ರಸಾದ ಹಂಚಿದ್ದೆವು. ಅಂದು ಕರ್ತವ್ಯದಲ್ಲಿದ್ದ ಸಹಾಯಕ ಜೈಲು ಅ ಧೀಕ್ಷಕ ಕೆ.ಎಂ.ಚೌಧರಿ ಮುಸ್ಲಿಂ ಸಮುದಾಯಕ್ಕೆ ಸೇರಿದ್ದು, ಅವರು ಜ.23ರಂದು ನನ್ನನ್ನು ಹಾಗೂ ನನ್ನೊಂದಿಗೆ ಪೂಜೆ ಸಲ್ಲಿಸಿದ ಇತರ ಇಬ್ಬರು ಕೈದಿಗಳನ್ನು ಕರೆಸಿ ವಿಚಾರಣೆ ನಡೆಸಿದರು. ಆಗ ಅನ್ಯಕೋಮಿನ ಶೇಖ್ ಮೋದಿ ಹಾಗೂ ಇತರರು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವೀಡಿಯೋದಲ್ಲಿ ದೂರಿದ್ದಾನೆ. ನಮ್ಮ ಮೇಲೆ ಹಲ್ಲೆ ನಡೆಯುತ್ತಿದ್ದರೂ ಜೈಲ ಧಿಕಾರಿಗಳು ಹಾಗೂ ಇತರ ಸಿಬಂದಿ ನಮ್ಮ ರಕ್ಷಣೆಗೆ ಧಾವಿಸಲಿಲ್ಲ. ನಮ್ಮನ್ನು ಜೈಲು ಆವರಣಕ್ಕೂ ಬಿಡದೆ ಸೆಲ್ನಲ್ಲಿ ಕೂಡಿ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
ಆರೋಪಿಯು ರಾಮ, ಮಂದಿರ ಎಂದೆಲ್ಲ ಇಲ್ಲಸಲ್ಲದ ವಿಷಯಗಳನ್ನು ಮುಂದಿಟ್ಟುಕೊಂಡು ಸುಳ್ಳು ಹೇಳುತ್ತಿದ್ದಾನೆ. ಮಹಾರಾಷ್ಟ್ರ ಮೂಲದವನಾಗಿರುವ ಆತ ಅಲ್ಲಿನ ಜೈಲುಗಳಲ್ಲೂ ಇದೇ ರೀತಿ ವರ್ತಿಸಿದ ಕಾರಣಕ್ಕೆ ಆತನನ್ನು ನಮ್ಮ ಜೈಲಿಗೆ ವರ್ಗಾಯಿಸಲಾಗಿದೆ. ಜ.23ರಂದು ಇವರು ಇತರರೊಂದಿಗೆ ಜಗಳವಾಡಿದ್ದರು. ಗಲಾಟೆ ನಿಯಂತ್ರಿಸಲು ಅವರನ್ನು ಪ್ರತ್ಯೇಕ ಸೆಲ್ನಲ್ಲಿ ಇರಿಸಿದ್ದೇವೆ. ಜೈಲಿನಲ್ಲಿ ಮೊಬೈಲ್ ನಿಷೇಧವಿದ್ದರೂ ಮೊಬೈಲ್ನಲ್ಲಿ ವೀಡಿಯೋ ಮೂಲಕ ಹೇಳಿಕೆ ಬಿಡುಗಡೆ ಮಾಡಿದ್ದಾನೆ. ಆತನಿಗೆ ಮೊಬೈಲ್ ಪೋನ್ ಸಿಕ್ಕಿದ್ದು ಹೇಗೆ ಎಂಬುದರ ಕುರಿತು ತನಿಖೆ ಮಾಡಲಾಗುತ್ತಿದೆ.
– ಐ.ಜಿ.ಮ್ಯಾಗೇರಿ, ವಿಜಯಪುರ ಜಿಲ್ಲಾ ಕೇಂದ್ರ ಕಾರಾಗೃಹದ ಅ ಧೀಕ್ಷಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ