ಪಿಯು ಉಪನ್ಯಾಸಕರಿಗೆ ಕಡಿಮೆ ವೇತನ

ಪಿಯು ಉಪನ್ಯಾಸಕರ ಸಮಸ್ಯೆ ಮರೆತ ಸರ್ಕಾರ ; ವಾರದಲ್ಲಿ 16 ತರಗತಿ ಬೋಧಿಸಬೇಕಾದ ಅತಿಥಿ ಉಪನ್ಯಾಸಕರು

Team Udayavani, Jun 21, 2022, 6:15 PM IST

20

ಕೊಪ್ಪಳ: ರಾಜ್ಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಅತಿಥಿ ಉಪನ್ಯಾಸಕರಿಗಿಂತಲೂ ಕಡಿಮೆ ವೇತನ ಇರುವುದು ನಿಜಕ್ಕೂ ನೋವಿನ ಸಂಗತಿ. ಕಳೆದ 8 ವರ್ಷಗಳಿಂದಲೂ ವೇತನ ಪರಿಷ್ಕರಣೆಯಿಲ್ಲದೇ ಇವರ ಗೋಳು ಹೇಳತೀರದಾಗಿದೆ.

ಹೌದು.. ಪ್ರಸ್ತುತ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇಂತಹ ಪರಿಸ್ಥಿತಿಯಲ್ಲೂ ಪಪೂ ಅತಿಥಿ ಉಪನ್ಯಾಸಕರು ಮಾಸಿಕ ಕೇವಲ 9 ಸಾವಿರ ರೂ. ವೇತನದಲ್ಲಿ ಜೀವನ ನಿರ್ವಹಿಸುವಂತಾಗಿದೆ. ವಾರದಲ್ಲಿ 16 ತರಗತಿ ನಿರ್ವಹಿಸುವ ಜೊತೆಗೆ ಕಾಲೇಜಿನ ಕಾರ್ಯ ಚಟುವಟಿಕೆಯಲ್ಲೂ ತೊಡಗಬೇಕಿದೆ.

ಈ ಹಿಂದೆ ಪದವಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಸಾವಿರಾರು ಜನರು ವೇತನ ಹೆಚ್ಚಿಸುವಂತೆ ಹಾಗೂ ಸೇವೆ ಕಾಯಂಗೊಳಿಸುವಂತೆ ನಿರಂತರ ಒತ್ತಾಯ ಮಾಡಿ ಸರ್ಕಾರದ ಗಮನ ಸೆಳೆದಿದ್ದರು. ತಿಂಗಳುಗಟ್ಟಲೇ ತರಗತಿ ಬಹಿಷ್ಕಾರ ಮಾಡಿ ವೇತನ ಹೆಚ್ಚಳಕ್ಕೆ ಪಟ್ಟು ಹಿಡಿದಿದ್ದರು.

ಪ್ರತಿಭಟನೆಯ ಬಿಸಿ ಅರಿತ ಉನ್ನತ ಶಿಕ್ಷಣ ಇಲಾಖೆಯು ಈ ಮೊದಲು ಅವರಿಗೆ ಕೊಡುತ್ತಿದ್ದ ಮಾಸಿಕ 13 ಸಾವಿರ ರೂ. ಇದ್ದ ವೇತನವನ್ನು ಪರಿಷ್ಕರಿಸಿ ನೆಟ್‌, ಪಿಎಚ್‌ಡಿ ಪೂರ್ಣಗೊಳಿಸದವರಿಗೆ 26 ಸಾವಿರ ರೂ. ಈ ಎರಡನ್ನೂ ಪೂರ್ಣಗೊಳಿಸಿದವರಿಗೆ 32 ಸಾವಿರ ರೂ. ನಿಗದಿಪಡಿಸಿ ವಾರದಲ್ಲಿ 15 ತರಗತಿ ಬೋಧನೆ ಮಾಡಲು ಸೂಚಿಸಿತ್ತು.

ಇನ್ನು ಈಚೆಗೆ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುವವರಿಗೆ ವೇತನ ಪರಿಷ್ಕರಣೆ ಮಾಡಿದೆ. ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೋಧಿಸುವ ಅತಿಥಿ ಶಿಕ್ಷಕರಿಗೆ 10 ಸಾವಿರ ರೂ., ಪ್ರೌಢಶಾಲೆಯಲ್ಲಿ ಬೋ ಧಿಸುವ ಶಿಕ್ಷಕರಿಗೆ 10,500 ರೂ. ನಿಗದಿ ಮಾಡಿದೆ. 2500 ರೂ. ವೇತನ ಪರಿಷ್ಕರಣೆ ಮಾಡಿದೆ.

ಗೋಳು ಕೇಳ್ಳೋರಿಲ್ಲ: ಕಳೆದ 8 ವರ್ಷಗಳಿಂದ ಅತಿಥಿ ಉಪನ್ಯಾಸಕರ ಗೋಳು ಕೇಳೋರು ಇಲ್ಲದಂತಾಗಿದೆ. ವಾರಕ್ಕೆ 16 ತರಗತಿ ಬೋ ಧಿಸಬೇಕು. ಮಾಸಿಕ 9 ಸಾವಿರ ರೂ. ವೇತನ ಪಡೆಯಬೇಕಿದೆ. ಇಷ್ಟು ವೇತನದಲ್ಲಿ ಜೀವನ ನಿರ್ವಹಣೆ ತುಂಬ ಕಷ್ಟವಾಗುತ್ತಿದೆ ಎಂದು ಗೋಳಾಡುತ್ತಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಅತಿಥಿ ಶಿಕ್ಷಕರ ವೇತನಕ್ಕಿಂತ ನಮ್ಮ ವೇತನ ಅತ್ಯಂತ ಕಡಿಮೆಯಿದೆ. ಸರ್ಕಾರ ಪದವಿ, ಪ್ರಾಥಮಿಕ, ಪ್ರೌಢಶಾಲೆಗಳ ಅತಿಥಿ ಶಿಕ್ಷಕರ ಮಧ್ಯೆ ನಮ್ಮನ್ನು ಮರೆತಿದೆ. ರಾಜ್ಯದಲ್ಲಿ 3200 ಜನ ಪಿಯು ಅತಿಥಿ ಉಪನ್ಯಾಸಕರಿದ್ದು, ನಮ್ಮ ಕಷ್ಟ ಹೇಳತೀರದಾಗಿದೆ ಎಂದು ವೇದನೆ ವ್ಯಕ್ತಪಡಿಸುತ್ತಿದ್ದಾರೆ.

ಪಿಯು ಕಾಲೇಜುಗಳಲ್ಲಿ ವಾರಕ್ಕೆ 16 ಅವಧಿಯ ತರಗತಿ ಬೋಧನೆ ಮಾಡುವ ಜೊತೆಗೆ ಇತರೆ ಕಾಲೇಜಿನ ಕಾರ್ಯಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕಿದೆ. ಅಂದರೆ ಇಡೀ ದಿನ ಕಾಲೇಜಿನ ವಿವಿಧ ಚಟುವಟಿಕೆಯಲ್ಲೇ ಕಾಲ ಕಳೆಯಬೇಕಿದೆ. ಬೇರೆ ಕೆಲಸವನ್ನೂ ಮಾಡುವುದು ಕಷ್ಟವಾಗಲಿದೆ. ಹಾಗಾಗಿ ಇರುವ ಒಂದೇ ಕೆಲಸ ನಂಬಿ ವಿದ್ಯಾರ್ಥಿಗಳಿಗೆ ಪಠ್ಯ ವಿಷಯಕ್ಕೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯೂ ಪಿಯು ಅತಿಥಿ ಉಪನ್ಯಾಸಕರ ಮೇಲಿದೆ. ಸರ್ಕಾರ ಇನ್ನಾದರೂ ಅವರ ಗೋಳಾಟ ಅರಿತು ವೇತನ ಪರಿಷ್ಕರಣೆ ಮಾಡಬೇಕಿದೆ.

ಹಲವು ವರ್ಷಗಳಿಂದ ನಾವು ಪಿಯು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದೇವೆ. ಸರ್ಕಾರ ನಮ್ಮ ವೇತನವನ್ನು ಪರಿಷ್ಕರಣೆ ಮಾಡುತ್ತಲೇ ಇಲ್ಲ. ನಾವು ಹಲವು ಬಾರಿ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿ ಸರ್ಕಾರದ ಗಮನ ಸೆಳೆದಿದ್ದೇವೆ. ನಮಗೆ ಪ್ರಸ್ತುತ ಪ್ರಾಥಮಿಕ ಶಾಲೆ ಅತಿಥಿ ಶಿಕ್ಷಕರ ವೇತನಕ್ಕಿಂತಲೂ ಕಡಿಮೆ ಇದೆ. ಕನಿಷ್ಟ ನಮ್ಮ ವೇತನವನ್ನು 15-20 ಸಾವಿರ ರೂ. ಹೆಚ್ಚಿಸಲಿ. –ಪುಂಡಲೀಕರಡ್ಡಿ ಬಿಸರಳ್ಳಿ, ಉಪಾಧ್ಯಕ್ಷರು, ಪಿಯು ಅತಿಥಿ ಉಪನ್ಯಾಸಕರ ಸಂಘ, ಕೊಪ್ಪಳ  

-ದತ್ತು ಕಮ್ಮಾರ

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.