ಆಘಾತಕಾರಿ ಪಿಚ್‌ ಲಕ್ನೋ ಕ್ಯುರೇಟರ್‌ ವಜಾ


Team Udayavani, Feb 1, 2023, 7:55 AM IST

ಆಘಾತಕಾರಿ ಪಿಚ್‌ ಲಕ್ನೋ ಕ್ಯುರೇಟರ್‌ ವಜಾ

ಲಕ್ನೋ: ಭಾರತ- ನ್ಯೂಜಿಲ್ಯಾಂಡ್‌ ನಡುವಿನ ಟಿ20 ಪಂದ್ಯಕ್ಕಾಗಿ “ಆಘಾತಕಾರಿ’ ಪಿಚ್‌ ನಿರ್ಮಿಸಿದ ಲಕ್ನೋದ “ಏಕಾನಾ ಕ್ರಿಕೆಟ್‌ ಸ್ಟೇಡಿಯಂ’ನ ಕ್ಯುರೇಟರ್‌ ಅವರನ್ನು ಈ ಹುದ್ದೆಯಿಂದ ವಜಾಗೊಳಿಸಲಾಗಿದೆ.

ರವಿವಾರ ನಡೆದ ಈ ಪಂದ್ಯ ದಲ್ಲಿ ಸ್ವಲ್ಪವೂ ಟಿ20 ಜೋಶ್‌ ಕಂಡು ಬಂದಿರಲಿಲ್ಲ. ಒಂದೇ ಒಂದು ಸಿಕ್ಸರ್‌ ಸಿಡಿಯಲಿಲ್ಲ. ಸ್ಪಿನ್‌ ಬೌಲರ್ ಹೊರತುಪಡಿಸಿ ಬೇರೆ ಯಾರಿಗೂ ಇಲ್ಲಿನ ಟ್ರ್ಯಾಕ್‌ ನೆರವು ನೀಡಿರಲಿಲ್ಲ. ನ್ಯೂಜಿಲ್ಯಾಂಡ್‌ 8 ವಿಕೆಟಿಗೆ ಕೇವಲ 99 ರನ್‌ ಗಳಿಸಿತ್ತು. ಈ ಸಣ್ಣ ಮೊತ್ತವನ್ನು ಮೀರಿ ನಿಲ್ಲಲು ಭಾರತ 19.5 ಓವರ್‌ ತೆಗೆದುಕೊಂಡಿತ್ತು.

ಪಂದ್ಯದ ಬಳಿಕ ಟೀಮ್‌ ಇಂಡಿಯಾ ನಾಯಕ ಇದೊಂದು “ಆಘಾತಕಾರಿ ಪಿಚ್‌’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಪಿಚ್‌ ಕುರಿತು ಮಾಧ್ಯ ಮದವರು ಬೌಲಿಂಗ್‌ ಕೋಚ್‌ ಪರಸ್‌ ಮ್ಹಾಂಬ್ರೆ ಅವರನ್ನು ಪ್ರಶ್ನಿಸಿದಾಗ, “ನೀವು ಕ್ಯುರೇಟರ್‌ ಅವರನ್ನೇ ವಿಚಾರಿಸಿ’ ಎಂದು ಖಡಕ್‌ ಉತ್ತರ ಕೊಟ್ಟಿದ್ದರು.

“ಈ ಪಿಚ್‌ ನಿರ್ಮಿಸಿದ ಕ್ಯುರೇಟರ್‌ ಅವರನ್ನು ವಜಾಗೊಳಿಸಲಾಗಿದೆ. ಇವರ ಸ್ಥಾನಕ್ಕೆ ಸಂಜೀವ್‌ ಕುಮಾರ್‌ ಅಗರ್ವಾಲ್‌ ಅವರನ್ನು ನೇಮಿಸ ಲಾಗಿದೆ. ಒಂದು ತಿಂಗಳಲ್ಲಿ ಎಲ್ಲವೂ ಸರಿಹೋಗುತ್ತದೆ’ ಎಂಬುದಾಗಿ ಉತ್ತರಪ್ರದೇಶ ಕ್ರಿಕೆಟ್‌ ಮಂಡಳಿಯ (ಯುಪಿಸಿಎ) ಅಧಿಕಾರಿಗಳು ತಿಳಿಸಿದ್ದಾರೆ.

ಮಂಡಳಿ ಸಮಜಾಯಿಶಿ
ಇಲ್ಲಿನ ಎಲ್ಲ “ಸೆಂಟರ್‌ ವಿಕೆಟ್‌’ಗಳ ಮೇಲೆ ಸಾಕಷ್ಟು ದೇಶಿ ಪಂದ್ಯಗಳನ್ನು ಆಡಲಾಗಿತ್ತು. ಅಂತಾರಾಷ್ಟ್ರೀಯ ಪಂದ್ಯಕ್ಕಾಗಿ ಕ್ಯುರೇಟರ್‌ ಎರಡು ಸ್ಟ್ರಿಪ್‌ಗ್ಳನ್ನು ಹಾಗೆಯೇ ಉಳಿಸಿದ್ದರು. ಆದರೆ ಫ್ರೆಶ್‌ ವಿಕೆಟ್‌ ತಯಾರಿಸಲು ಸಮಯ ಸಾಕಾಗಲಿಲ್ಲ’ ಎಂಬುದು ಯುಪಿಸಿಎ ಮೂಲವೊಂದು ತಿಳಿಸಿದೆ.

ನೂತನ ಕ್ಯುರೇಟರ್‌ ಸಂಜೀವ್‌ ಕುಮಾರ್‌ ಅಗರ್ವಾಲ್‌ ಇದಕ್ಕೂ ಮುನ್ನ ಬಾಂಗ್ಲಾದೇಶದಲ್ಲಿ ಪಿಚ್‌ ನಿರ್ಮಿಸಿದ ಅನುಭವ ಹೊಂದಿದ್ದರು. ಇವರಿನ್ನು ಬಿಸಿಸಿಐನ ಹಿರಿಯ ಕ್ಯುರೇಟರ್‌ ತಪೋಶ್‌ ಚಟರ್ಜಿ ಜತೆಗೂಡಿ ಕರ್ತವ್ಯ ನಿಭಾಯಿಸಲಿದ್ದಾರೆ.

ಕೊನೆಯ ಕ್ಷಣದಲ್ಲಿ ಪಿಚ್‌ ಬದಲು?
ಒಂದು ಮೂಲದ ಪ್ರಕಾರ, ಭಾರತೀಯ ತಂಡದ ಆಡಳಿತ ಮಂಡಳಿ ಕೊನೆಯ ಕ್ಷಣದಲ್ಲಿ ಪಿಚ್‌ ಬದಲಿಸುವಂತೆ ಸೂಚಿಸಿತ್ತು ಎನ್ನಲಾಗಿದೆ. ಈ ಪಂದ್ಯಕ್ಕಾಗಿ ಕ್ಯುರೇಟರ್‌ ಕಪ್ಪು ಮಣ್ಣಿನ ಎರಡು ಪಿಚ್‌ಗಳನ್ನು ನಿರ್ಮಿಸಿದ್ದರು. ಆದರೆ ಪಂದ್ಯಕ್ಕೆ ಕೇವಲ 3 ದಿನ ಇರುವಾಗ ಟೀಮ್‌ ಇಂಡಿಯಾದ ಆಡಳಿತ ಮಂಡಳಿ ಇದನ್ನು ಬದಲಿಸಿ ಕೆಂಪು ಮಣ್ಣಿನ ಪಿಚ್‌ ನಿರ್ಮಿಸಲು ಸೂಚಿಸಿತು. ಕ್ಯುರೇಟರ್‌ ಈ ಆದೇಶವನ್ನು ಪಾಲಿಸಿದರು. ಆದರೆ ಇದಕ್ಕೆ ಫಿನಿಶಿಂಗ್‌ ಟಚ್‌ ಕೊಡಲು ಸಮಯಾವಕಾಶ ಸಿಗಲಿಲ್ಲ. ಇದರ ಪರಿಣಾಮವೆಂಬಂತೆ, ಪಿಚ್‌ ತೀರಾ ನಿಧಾನ ಗತಿಯಿಂದ ವರ್ತಿಸಿತು ಎಂದು ವರದಿಯೊಂದು ತಿಳಿಸಿದೆ.ಹಾಗದರೆ ಕ್ಯುರೇಟರ್‌ ಬಲಿಪಶುವಾದರೇ? ಪ್ರಶ್ನೆ ಉದ್ಭವಿಸುವುದು ಸಹಜ.

ಟಾಪ್ ನ್ಯೂಸ್

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kohli

ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್‌ ಕೊಹ್ಲಿ!

Bhuvneshwar Kumar Replaces Adien Markram As Captain Of Sunrisers Hyderabad?

ಹೈದರಾಬಾದ್ ತಂಡದ ನಾಯಕತ್ವ ಬದಲಾವಣೆ? ಮಾಕ್ರಮ್ ಬದಲು ಕಾಣಸಿಕೊಂಡ ಭುವನೇಶ್ವರ್

Arjun Tendulkar To Debut For Mumbai Indians In IPL 2023?

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

josh hazlewood glenn maxwell will not feature opening match of RCB

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ODI World Cup 2023: Mumbai, Ahmedabad To Hosts Semis And Final

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

1-q222qe

ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ