ಮಕ್ಕಳ ಕಾಡುತ್ತಿರುವ ಶ್ವಾಸಕೋಶದ ಸೋಂಕು! ರೋಗ ಲಕ್ಷಣಗಳ ಕುರಿತು ಎಚ್ಚರಿಕೆ ವಹಿಸಿ


Team Udayavani, Jan 13, 2022, 1:31 PM IST

ಮಕ್ಕಳ ಕಾಡುತ್ತಿರುವ ಶ್ವಾಸಕೋಶದ ಸೋಂಕು! ರೋಗ ಲಕ್ಷಣಗಳ ಕುರಿತು ಎಚ್ಚರಿಕೆ ವಹಿಸಿ

ಬೆಂಗಳೂರು: ಕೊರೊನಾ ಮೂರನೇ ಅಲೆ ಮಕ್ಕಳಿಗೆ ಮಾರಕವಾಗಲಿದೆ ಎನ್ನುವ ಆತಂಕದ  ನಡುವೆ ಜಿಲ್ಲೆಯಲ್ಲಿ ಜ್ವರದ ಲಕ್ಷಣಗಳನ್ನು ಹೊಂದಿದ್ದು, ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವ
ಮಕ್ಕಳಲ್ಲಿ ಶ್ವಾಸಕೋಶದ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಭಾದಿಸುತ್ತಿರುವುದು ಹೆತ್ತವರಲ್ಲಿ ಆತಂಕ ಮೂಡಿಸುತ್ತಿದೆ.

ಹದಿನೈದು ದಿನಗಳಿಂದ ನಗರದಲ್ಲಿ 1-10 ವರ್ಷದೊಳಗಿನ ಮಕ್ಕಳು ಆರ್‌ವಿಎಸ್‌ ಸಂಬಂಧಿಸಿದ ಸೋಂಕು ಬಳಲುತ್ತಿರುವವರು ಶ್ವಾಸಕೋಶದ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಸ್ತುತ
ಮಕ್ಕಳಲ್ಲಿ ಜ್ವರ, ಕೆಮ್ಮು, ಶೀತ, ನೆಗಡಿಯ ರೂಪದಲ್ಲಿ ಇದು ಕಂಡು ಬರುತ್ತದೆ. ಸಾಮಾನ್ಯವಾಗಿ ಆರ್‌ವಿಎಸ್‌ ಈ ಸಮಯದಲ್ಲಿ ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಕಾಯಿಲೆ ಉಲ್ಬಣಿಸಿದರೆ ವೈರಲ್‌ ನ್ಯುಮೋನಿಯಾಗೆ ತಿರುಗಲಿದೆ. ಪ್ರಸ್ತುತ ಬೆಂಗಳೂರು ನಗರಾದ್ಯಂತ ಕ್ಲಿನಿಕ್‌ ಹಾಗೂ ಆಸ್ಪತ್ರೆಗೆ ಬರುವ 10 ಮಕ್ಕಳಲ್ಲಿ 7 ಮಕ್ಕಳು ಆರ್‌ ವಿಎಸ್‌ ಸೋಂಕಿಗೆ ತುತ್ತಾಗುತ್ತಿದ್ದಾರೆ.

ನಗರದಲ್ಲಿ ಕೆಲ ಆರ್‌ಎಸ್‌ವಿ ಸಂಬಂಧಿತ ಬಹುತೇಕ ಮಕ್ಕಳನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಿದಾಗ ಆರ್‌ಟಿಪಿಸಿಆರ್‌ ವರದಿ ನೆಗೆಟಿವ್‌ ಬಂದಿದೆ. ಆದರೂ ಇದನ್ನು ನಿರ್ಲಕ್ಷಿಸುವುದು ಸರಿಯಲ್ಲ. ಆರ್‌ಎಸ್‌ವಿನಲ್ಲಿ  ಉಸಿರಾಟ ಸಮಸ್ಯೆ ಹೆಚ್ಚಾದರೆ ಮಕ್ಕಳ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಹೆತ್ತವರು ಸಾಕಷ್ಟು ಜಾಗರೂಕರಾಗಿಬೇಕು.

ಆರ್‌ಎಸ್‌ವಿ ಲಕ್ಷಣಗಳಿರುವ ಮಗುವಿಗೆ ಕೂಡ ಚಿಕಿತ್ಸೆ ನೀಡಲು ಮುಂದಾಗ ಬೇಕು ಎಂದು ಮಕ್ಕಳ ತಜ್ಞರು ಮಾಹಿತಿ ನೀಡುತ್ತಾರೆ.

ಏನಿದು ಆರ್‌ಎಸ್‌ವಿ?: ಒಂದು ವರ್ಷ ಪ್ರಾಯದ ಮಕ್ಕಳಿಗೆ ಹೆಚ್ಚಾಗಿ ಬಾಧಿಸುವ Respiratory Syncytial Virus (ಆರ್‌ ಎಸ್‌ವಿ) ಸೋಂಕು. ಇದು ಉಸಿರಾಟದ ತೊಂದರೆಯಂತಹ ಲಕ್ಷಣಗಳನ್ನು ಹೊಂದಿದೆ. ಶ್ವಾಸಕೋಶದಲ್ಲಿ ಸಣ್ಣ ಶ್ವಾಸನಾಳದ ಉರಿಯೂತ ಹಾಗೂ ಮಕ್ಕಳಲ್ಲಿ ನ್ಯುಮೋನಿಯಾಕ್ಕೆ ಕಾರಣವಾಗುತ್ತದೆ. ಈ ಸೋಂಕಿನಿಂದ ಕಫ‌, ಶೀತ, ನೆಗಡಿ ಮಕ್ಕಳನ್ನು ಕಾಡುತ್ತದೆ. ಆಕ್ಸಿಜನ್‌ ಸಮಸ್ಯೆ ಉಂಟಾದರೆ ಮಕ್ಕಳ ಜೀವ ಹಾನಿ ಕೂಡ ಆಗಬಹುದು.

ಹೇಗೆ ಹರಡುತ್ತದೆ?: ಸೋಂಕಿತ ಮಗುವಿನ ಉಸಿರಾಟದ ಹನಿಗಳು ಗಾಳಿಯ ಮೂಲಕ ಸುಲಭವಾಗಿ ಹರಡಲು ಸಾಧ್ಯವಾಗುತ್ತದೆ. ಸೋಂಕಿತ ವ್ಯಕ್ತಿಯ ಕೈಗಳನ್ನು ಮುಟ್ಟುವ ಸಮಯ ನೇರ ಸಂಪರ್ಕದ ಮೂಲಕ ವೈರಸ್‌ ಇತರರಿಗೆ ಹರಡುತ್ತದೆ.

ಎಚ್ಚರಿಕೆ ಅಗತ್ಯ: ವಾತಾವರಣದ ಕಾರಣದಿಂದ ಕಂಡು ಬರುವ ಈ ರೋಗ ಲಕ್ಷಣಗಳ ಕುರಿತು ಎಚ್ಚರಿಕೆ ವಹಿಸಬೇಕು. ಈ ರೋಗ ಬಾರದಂತೆ ತಡೆಯುವುದು ಕಷ್ಟ. ಆದರೆ ಹೆಚ್ಚು ಜನನಿಬಿಡ ಪ್ರದೇಶಗಳಿಗೆ ಮಕ್ಕಳನ್ನು ಕರೆದೊಯ್ಯದಿರುವುದು, ಮಕ್ಕಳ ಜತೆಗೆ ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕುವುದು, ಕೋವಿಡ್‌ ಮಾರ್ಗಸೂಚಿಯಂತೆ ಸಾಮಾಜಿಕ ಅಂತರ ಕಾಪಾಡು ವುದು, ಮಾಸ್ಕ್ ಧರಿಸುವುದು, ಕಾಯಿಸಿ ಆರಿಸಿದ ನೀರು ಕುಡಿಸುವುದು, ಲಘು ಕಷಾಯ, ವೈದ್ಯರ ಸಲಹೆಯಿಂದ ಮೂಗಿನ ಡ್ರಾಫ್ ಬಳಸುವುದು ಇವೆಲ್ಲವನ್ನೂ ಮುಂಜಾಗ್ರತ ಕ್ರಮದಿಂದ
ನಿರ್ವಹಿಸಬಹುದಾಗಿದೆ. ಮಕ್ಕಳಿಗೆ ಫ್ರಿಡ್ಜ್ ನಲ್ಲಿಟ್ಟಿರುವ ಆಹಾರ, ಜಂಕ್‌ ಫ‌ುಡ್‌ ಕೊಡಬೇಡಿ. ಬಿಸಿ ನೀರು, ತಾಜಾ, ಪೌಷ್ಟಿಕಾಂಶ ಆಹಾರ ನೀಡಿ. ಶೀತ, ಕಫ‌, ಜ್ವರ ಲಕ್ಷಣಗಳಿದ್ದರೆ ಕೂಡಲೇ
ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ಪ್ರಸ್ತುತ ಆಸ್ಪತ್ರೆಗೆ ಬರುತ್ತಿರುವ ಮಕ್ಕಳಲ್ಲಿ ಆರ್‌ವಿಎಸ್‌ ಪ್ರಕರಣಗಳು ವರದಿಯಾ ಗುತ್ತಿದೆ. ಮಕ್ಕಳಲ್ಲಿ ಆಯಾಸ, ಎದೆ ನೋವು, ಸೌಮ್ಯವಾದ ಶೀತ ಹಾಗೂ ಜ್ವರ, ತಲೆನೋವು, ಸೀನುವಿಕೆ ಲಕ್ಷಣ ಕಂಡು ಬರುತ್ತಿದೆ. ಈ ಲಕ್ಷಣ ಕಂಡು ಬಂದರೆ ಪೋಷಕರು ಮಕ್ಕಳನ್ನು ತಜ್ಞ ವೈದರಿಗೆ ತೋರಿಸುವ ಮೂಲಕ ಚಿಕಿತ್ಸೆ ಪಡೆದುಕೊಳ್ಳ ಬೇಕು. ಆ ಮೂಲಕ ಮುಂದಾಗುವ
ಅನಾಹುತವನ್ನು ತಪ್ಪಿಸ ಬಹುದಾಗಿದೆ.
– ಡಾ.ದಿವ್ಯಾರಾಜ್‌ ಟಿ.ಜೆ., ಮಕ್ಕಳ- ನವಜಾತ ಶಾಸ್ತ್ರ ತಜ್ಞೆ, ಸ್ಪೆಷಲಿಸ್ಟ್‌ ಆಸ್ಪತ್ರೆ ಬೆಂಗಳೂರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.