ನ್ಯಾಯಯುತವಾಗಿ ಮಹದಾಯಿ ನೀರು ನಮಗೆ ಸಿಗಬೇಕು: ಎಂ.ಬಿ ಪಾಟೀಲ್
Team Udayavani, Jan 25, 2022, 9:42 PM IST
ಬೆಳಗಾವಿ: ಮಹದಾಯಿ ಯೋಜನೆಗಾಗಿ ಗೋವಾ ಕೇವಲ ರಾಜಕೀಯಕ್ಕಾಗಿ ವಿರೋಧ ಮಾಡುತ್ತಿದೆ. ನ್ಯಾಯಯುತವಾಗಿ ನಮಗೆ 7.5 ಟಿಎಂಸಿ ಅಡಿ ನೀರು ಸಿಗಬೇಕು ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಯಲ್ಲಿ ಕೇವಲ 3.9 ಟಿಎಂಸಿ ಅಡಿ ನೀರು ಯಾವುದಕ್ಕೂ ಸಾಕಾಗುವುದಿಲ್ಲ. ಹೀಗಾಗಿ ನಮಗೆ ಸಂಪೂರ್ಣವಾಗಿ 7.5 ಟಿಎಂಸಿ ಅಡಿ
ನೀರು ಸಿಗಬೇಕು ಎಂಬುದು ನಮ್ಮ ನಿಲುವು. ಮೇಕೆದಾಟು ಪಾದಯಾತ್ರೆ ಮಾದರಿಯಲ್ಲಿ ಮಹದಾಯಿಗಾಗಿ ಪಾದಯಾತ್ರೆ ನಡೆಸುವ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಈಗಾಗಲೇ ಅಧಿಕೃತವಾಗಿ ಹೇಳಿದ್ದಾರೆ ಎಂದರು. ಖಾನಾಪುರಕ್ಕೆ 1.5 ಟಿಎಂಸಿ ಅಡಿ ನೀರು ಸಿಕ್ಕಿದ್ದು, ಈ ಭಾಗದಲ್ಲಿ ನೀರಾವರಿ ಸೌಲಭ್ಯಕ್ಕಾಗಿ ಇನ್ನೂ ಹೆಚ್ಚಿನ ನೀರು ಸಿಗಬೇಕಿದೆ. 36 ಟಿಎಂಸಿ ಅಡಿ ನೀರಿಗಾಗಿ ಒತ್ತಾಯ ಮಾಡಿದ್ದೆವು. ಅದರಲ್ಲಿ ವಿಶೇಷವಾಗಿ 7.5 ಟಿಎಂಸಿ ಅಡಿ ಕುಡಿಯುವ ನೀರಿಗಾಗಿ ಹೋರಾಟ ಮಾಡಬೇಕು. ನಾನು ಆಗ ಗೋವಾ ಮುಖ್ಯಮಂತ್ರಿ
ಮನೋಹರ್ ಪರೀಕರ್ ಅವರನ್ನು ಭೇಟಿಯಾಗಿ ಬಂದು ಡಿಪಿಆರ್ ಮಾಡಿ, ಆಡಳಿತಾತ್ಮಕ ಅನುಮೋದನೆ ಕೊಟ್ಟ ನಂತರ ಈಗ ಇವರು ಮಾತನಾಡುತ್ತಿದ್ದಾರೆ. ಅಂದು ಎಂ.ಬಿ. ಪಾಟೀಲ್ ಸುಮ್ಮನೆ ಕೂತಿದ್ದರೆ ಏನಾಗುತ್ತಿತ್ತು?
ನಿಮ್ಮ ಸರ್ಕಾರ, ಜಲಸಂಪನ್ಮೂಲ ಇಲಾಖೆ ಇದಕ್ಕೆ ಸ್ಪಷ್ಟೀಕರಣ ನೀಡಲಿ. ಹೊಂದಾಣಿಕೆ ಮಾಡುವಾಗ ಪಕ್ಷದ ವಿಚಾರ ಬರುತ್ತದೆ. ಆದರೆ ನೀರಿನ ಹಕ್ಕು ಬಂದಾಗ ಯಾವುದೇ ರೀತಿ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ