ಮಾಧುಸ್ವಾಮಿ, ಈಶ್ವರಪ್ಪರನ್ನು ಸಂಪುಟದಿಂದ ಕೈಬಿಡಲು ಆಗ್ರಹ
Team Udayavani, Dec 7, 2019, 9:16 PM IST
ಬೆಂಗಳೂರು: ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ವೀರಶೈವರ ಮತ ಕೇಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ನೀತಿಸಂಹಿತೆ ಉಲ್ಲಂ ಸಿಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಆಗ್ರಹಿಸಿದ್ದಾರೆ. ಇನ್ನೋರ್ವ ಸಚಿವ ಕೆ.ಎಸ್. ಈಶ್ವರಪ್ಪ ನಟಿ ಐಶ್ವರ್ಯ ರೈ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಮಹಿಳೆಯರಿಗೆ ಅವಮಾನ ಮಾಡಿರುವುದರಿಂದ ಇಬ್ಬರೂ ಸಚಿವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಆಗ್ರಹಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನು ಸಚಿವರಾಗಿ ಮಾಧುಸ್ವಾಮಿ ಜಾತಿ ಹೆಸರಿನಲ್ಲಿ ಮತ ಕೇಳುವುದು ತಪ್ಪಲ್ಲ ಎನ್ನುತ್ತಾರೆ ಎಂದರೆ, ಅವರು ಸಚಿವರಾಗಿ ಮುಂದುವರಿಯಲು ಅರ್ಹರಲ್ಲ. ಜಾತಿ ಆಧಾರದ ಮೇಲೆ ಮತ ಕೇಳಿದ್ದಕ್ಕೆ ಕಾನೂನಿನ ಪ್ರಕಾರ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ಆಗುತ್ತದೆ. ಕಾನೂನು ಸಚಿವರಿಗೆ ಕಾನೂನಿನ ಬಗ್ಗೆ ಜ್ಞಾನವೇ ಇಲ್ಲ ಎಂದು ಟೀಕಿಸಿದರು.
ಕಾನೂನು ಸಚಿವರ ಕಾನೂನು ಉಲ್ಲಂಘನೆಯನ್ನು ರಾಜ್ಯಪಾಲರು ಗಮನಿಸಿಯೂ ಇಲ್ಲ, ಚುನಾವಣ ಆಯೋಗ ಜೀವಂತವಾಗಿದ್ದರೆ ಅವರ ವಿರುದ್ಧ ಪ್ರಕರಣ ದಾಖಲಿಸಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಮಾಧುಸ್ವಾಮಿ ಅವರು ತಮ್ಮ ಹೇಳಿಕೆಗೆ ಜನರಲ್ಲಿ ಕ್ಷಮೆ ಕೇಳಬೇಕು. ಆಯೋಗ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಮಾಧುಸ್ವಾಮಿಯನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿದರು.
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ನಟಿ ಐಶ್ವರ್ಯ ರೈ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡಿದ್ದಾರೆ. ಐಶ್ವರ್ಯ ರೈ ಗೌರವಸ್ಥ ಮನೆತನದ ಹೆಣ್ಣು ಮಗಳು, ಅವರ ಅತ್ತೆ ಸಂಸತ್ ಸದಸ್ಯೆ. ಅವರ ಮಾವ ಅಮಿತಾಭ್ ಬಚ್ಚನ್ ಸಾಂಸ್ಕೃತಿಕ ರಾಯಭಾರಿ. ಇಂಥ ಗೌರವಸ್ಥ ಕುಟುಂಬದ ಹೆಣ್ಣು ಮಗಳ ಬಗ್ಗೆ ಹಗುರವಾಗಿ ಮಾತನಾಡಿರುವುದು ಮಹಿಳಾ ಸಮೂಹಕ್ಕೆ ಮಾಡಿರುವ ಅಪಮಾನ. ಈಶ್ವರಪ್ಪ ಜನರ ಕ್ಷಮೆ ಕೋರಬೇಕು. ಬಿಜೆಪಿಯವರು ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…