ಶ್ರೀಕೃಷ್ಣ ಮಠದಲ್ಲಿ ಮಧ್ವನವಮಿ ಉತ್ಸವ
Team Udayavani, Feb 11, 2022, 5:55 AM IST
ಉಡುಪಿ: ಶ್ರೀಕೃಷ್ಣ ಮಠದಲ್ಲಿ ಮಧ್ವಾಚಾರ್ಯರು ಅಂತಿಮವಾಗಿ ಗೋಚರಿಸಿದ ದಿನ ಮಧ್ವನವಮಿ ಉತ್ಸವ ಗುರುವಾರ ನಡೆಯಿತು.
ಪರ್ಯಾಯ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮತ್ತು ಪಲಿಮಾರು ಮಠದ ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಸ್ವರ್ಣ ರಥದಲ್ಲಿ ಶ್ರೀ ಮಧ್ವಾಚಾರ್ಯರ ಭಾವಚಿತ್ರ ಹಾಗೂ ಕೃತಿಗಳನ್ನಿಟ್ಟು ರಥಬೀದಿಯಲ್ಲಿ ಮೆರವಣಿಗೆ ನಡೆಯಿತು.
ರಾಜಾಂಗಣದಲ್ಲಿ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು. ಮೈಸೂರಿನ ವಿದ್ವಾನ್ ಬೆ.ನಾ. ವಿಜಯೀಂದ್ರ ಆಚಾರ್ಯಜರಿಂದ “ಭಾರತೀಯ ತಣ್ತೀಶಾಸ್ತ್ರಕ್ಕೆ ಆಚಾರ್ಯ ಮಧ್ವರ ಕೊಡುಗೆ’ ಕುರಿತು ಪ್ರವಚನ ನಡೆಯಿತು.
ಇದನ್ನೂ ಓದಿ:ಸ್ಯಾಮ್ಸಂಗ್ನ 3 ಫೋನ್ ಬಿಡುಗಡೆ; ಎಸ್22, ಎಸ್22+, ಎಸ್22 ಅಲ್ಟ್ರಾ
ಮಧ್ವನವಮಿಗೆ ಮೋದಿ ಟ್ವೀಟ್
ಮಧ್ವನವಮಿಯ ಶುಭವಸರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಸಂದೇಶ ನೀಡಿದ್ದಾರೆ.
ಮಧ್ವನವಮಿಯ ಈ ಸಂದರ್ಭದಲ್ಲಿ ಮಧ್ವಾಚಾರ್ಯರಿಗೆ ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತಿದ್ದೇನೆ. ಆಚಾರ್ಯರ ಆಧ್ಯಾತ್ಮಿಕ ಮತ್ತು ಸಾಮಾಜಿಕ ಆದರ್ಶ ಸಂದೇಶಗಳು ಪೀಳಿಗೆಗಳಿಗೆ ಸ್ಫೂರ್ತಿ ನೀಡಲಿ ಎಂದು ಹಾರೈಸಿ ಐದು ವರ್ಷಗಳ ಹಿಂದೆ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಐದನೆಯ ಪರ್ಯಾಯ ಕಾಲದಲ್ಲಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಮಧ್ವರ ಸಪ್ತಮ ಶತಮಾನೋತ್ಸವದಲ್ಲಿ ತಾನು ನೀಡಿದ ಭಾಷಣದ ತುಣುಕನ್ನು ಟ್ವೀಟರ್ ಮೂಲಕ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
MUST WATCH
ಹೊಸ ಸೇರ್ಪಡೆ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ
ಸಿಆರ್ಝಡ್ ಮರಳು ಇನ್ನು ಸದ್ಯಕ್ಕೆ ಮರೀಚಿಕೆ
Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Covishield Vaccine; ಹಾಕಿಸಿಕೊಂಡವರು ಐಸ್ಕ್ರೀಮ್ ತಿನ್ನಬಾರದಾ?