Madikeri; ಆಟೋರಿಕ್ಷಾ ಮಗುಚಿ 8 ತಿಂಗಳ ಮಗು ಸಾವು
Team Udayavani, Mar 10, 2024, 12:40 AM IST
ಮಡಿಕೇರಿ: ಜಿಂಕೆ ಢಿಕ್ಕಿಯಾದ ಪರಿಣಾಮ ಆಟೋರಿಕ್ಷಾ ಪಲ್ಟಿಯಾಗಿ 8 ತಿಂಗಳ ಮಗು ಮೃತಪಟ್ಟ ಘಟನೆ ಶ್ರೀಮಂಗಲ ಬೀರುಗ ಗ್ರಾಮದಲ್ಲಿ ನಡೆದಿದೆ.
ಕಾಫಿ ತೋಟದ ಕೆಲಸಕ್ಕಾಗಿ ಝಾರ್ಖಂಡ್ ಮೂಲದ ಕೂಲಿ ಕಾರ್ಮಿಕರು ಶ್ರೀಮಂಗಲಕ್ಕೆ ಬಂದು ಅಲ್ಲಿಂದ ಆಟೋರಿಕ್ಷಾದಲ್ಲಿ ಬೀರುಗ ಗ್ರಾಮಕ್ಕೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಏಕಾಏಕಿ ಜಿಂಕೆಯೊಂದು ಅಡ್ಡ ಬಂದು ಆಟೋರಿಕ್ಷಾಕ್ಕೆ ಢಿಕ್ಕಿಯಾಗಿದೆ.
ಪರಿಣಾಮ ಆಟೋ ಪಲ್ಟಿಯಾಗಿದ್ದು, ತಾಯಿಯ ಮಡಿಲಿನಲ್ಲಿದ್ದ 8 ತಿಂಗಳ ಅನುರಾಗ್ ರಾಜ್ ಎಂಬ ಮಗು ಆಟೋರಿಕ್ಷಾದಡಿ ಸಿಲುಕಿ ಮೃತಪಟ್ಟಿದೆ. ಈ ಘಟನೆ ಕುರಿತು ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದರು. ಮಗು ಸಾವನ್ನಪ್ಪಲು ಜಿಂಕೆ ಕಾರಣ. ಮಗುವನ್ನು ಕಳೆದು ಕೊಂಡ ಬಡ ಕೂಲಿ ಕಾರ್ಮಿಕ ಕುಟುಂಬಕ್ಕೆ ಇಲಾಖೆ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ