ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್
Team Udayavani, Jan 19, 2022, 7:56 PM IST
ಮಡಿಕೇರಿ : ಕಾಫಿ ಬೆಳೆಗಾರರೊಬ್ಬರ 3 ಎಕರೆ ತೋಟದ ದಾಖಲೆ ದುರಸ್ಥಿ ಹಾಗೂ 2 ಎಕರೆ ಜಾಗ ಮಂಜೂರಾತಿಗಾಗಿ ಒಟ್ಟು 14.50 ಲಕ್ಷ ರೂ.ಗಳಿಗೆ ಬೇಡಿಕೆ ಮುಂದಿಟ್ಟು, 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಕುಶಾಲನಗರ ತಾಲೂಕು ಕಚೇರಿಯ ಉಪ ತಹಶೀಲ್ದಾರ್ ವಿನು ಎಂಬವರನ್ನು ಭಷ್ಟಾಚಾರ ನಿಗ್ರಹ ದಳ ಬಂಧಿಸಿದೆ. ಆರೋಪಿಯಿಂದ 50 ಸಾವಿರ ರೂ. ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರೆದಿದೆ.
ಬೆಳ್ಳಿಯಪ್ಪ ಎಂಬವರು ಸರ್ವೆ ನಂಬರ್ 177/10ಪಿ1ರಲ್ಲಿ 3 ಎಕರೆ ಜಾಗ ಹೊಂದಿದ್ದರು. ಈ ಜಮೀನಿನ ದಾಖಲೆ ದುರಸ್ಥಿ ಮಾಡಿಕೊಡುವಂತೆ ಸುಂಟಿಕೊಪ್ಪ ನಾಡ ಕಚೇರಿಗೆ 2021ರ ಆಗಸ್ಟ್ 10ರಂದು ಅರ್ಜಿ ಸಲ್ಲಿಸಿದ್ದರು. ಬಳಿಕ ಈ ಅರ್ಜಿ ಕುಶಾಲನಗರ ಉಪ ತಹಶೀಲ್ದಾರ್ ಕಚೇರಿಗೆ ರವಾನೆಯಾಗಿತ್ತು.
ಈ ನಡುವೆ ಜ.17ರಂದು ಕುಶಾಲನಗರ ಉಪ ತಹಶೀಲ್ದಾರ್ ವಿನು ಎಂಬವರು ಅರ್ಜಿದಾರರಾದ ಬೆಳ್ಳಿಯಪ್ಪ ಮತ್ತು ಅವರ ಪತ್ನಿಯನ್ನು ನಾಡ ಕಚೇರಿಗೆ ಬರ ಹೇಳಿದ್ದರು. ಈ ವೇಳೆ 3 ಜಮೀನು ದುರಸ್ಥಿಗೆ ಎಕರೆಗೆ ತಲಾ 2.50 ಲಕ್ಷ ರೂ. ಹಾಗೂ 2 ಎಕರೆ ಒತ್ತುವರಿ ಭೂಮಿ ಮಂಜೂರು ಮಾಡಲು ಎಕರೆಗೆ ತಲಾ 3.50 ಲಕ್ಷ ರೂ.ನಂತೆ ಒಟ್ಟು 14.50 ಲಕ್ಷ ರೂ.ಗಳನ್ನು ನೀಡುವಂತೆ ಬೇಡಿಕೆ ಮುಂದಿಟ್ಟಿದ್ದರು. ಒಟ್ಟು ಹಣದಲ್ಲಿ 3.50 ಲಕ್ಷ ರೂ.ಗಳನ್ನು ಮುಂಗಡವಾಗಿ ನೀಡುವಂತೆ ತಿಳಿಸಿದ್ದರು. ಈ ಕುರಿತು ಬೆಳ್ಳಿಯಪ್ಪ ಅವರು ಮಡಿಕೇರಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಎಸಿಬಿ ಅಧಿಕಾರಿಗಳು ಟ್ರ್ಯಾಪ್ ಕಾರ್ಯಾಚರಣೆ ತಂತ್ರಗಾರಿಕೆ ನಡೆಸಿದ್ದರು.
ಇದನ್ನೂ ಓದಿ : ಮಸೀದಿಯ ಬಗ್ಗೆ ವಿವಾದಿತ ಹೇಳಿಕೆ : ಕಾಳಿ ಸ್ವಾಮೀಜಿಗೆ ಜಾಮೀನು
ಅದರಂತೆ ಜ.19ರಂದು ಕುಶಾಲನಗರ ತಾಲೂಕು ಕಚೇರಿಗೆ ಹೊಂದಿಕೊಂಡಂತಿರುವ ಕ್ಯಾಂಟೀನ್ ಒಂದರಲ್ಲಿ ಅರ್ಜಿದಾರ ಬೆಳ್ಳಿಯಪ್ಪ ಎಂಬವರಿಂದ 50 ಸಾವಿರ ರೂ. ಹಣವನ್ನು ಲಂಚದ ರೂಪದಲ್ಲಿ ಸ್ವೀಕರಿಸುವ ಸಂದರ್ಭ ಮಡಿಕೇರಿಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಹಣ ಸಹಿತ ಉಪ ತಹಶೀಲ್ದಾರ್ ವಿನು ಎಂಬವರನ್ನು ಬಂಧಿಸಿದ್ದಾರೆ. ಬಂಧಿತರಿಂದ 50 ಸಾವಿರ ರೂ. ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಉಪ ತಹಶೀಲ್ದಾರ್ನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ